AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸರ್ಕಾರದವರು ಇದುವರೆಗೂ ಯಾರೂ ನಮ್ಮ ಬಳಿ ಕಮೀಷನ್ ಕೇಳಿಲ್ಲ, ಕೇಳಿದ್ರೆ ಬಹಿರಂಗ ಪಡಿಸುತ್ತೇವೆ: ಕೆಂಪಣ್ಣ

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು (ಜೂನ್ 23) ಸಿದ್ದರಾಮಯ್ಯನವರನ್ನು ಭೇಟಿ ಮಾಡಿತು. ಈ ವೇಲೆ ಸಿಎಂ ಏನು ಹೇಳಿದ್ರು? ಗುತ್ತಿಗೆಗಾರರ ಏನಂದ್ರು? ಇಲ್ಲಿದೆ ವಿವರ

ಈ ಸರ್ಕಾರದವರು ಇದುವರೆಗೂ ಯಾರೂ ನಮ್ಮ ಬಳಿ ಕಮೀಷನ್ ಕೇಳಿಲ್ಲ, ಕೇಳಿದ್ರೆ ಬಹಿರಂಗ ಪಡಿಸುತ್ತೇವೆ: ಕೆಂಪಣ್ಣ
ಸಿದ್ದರಾಮಯ್ಯ ಭೇಟಿಯಾದ ಗುತ್ತಿಗೆಗಾರರ ನಿಯೋಗ
ರಮೇಶ್ ಬಿ. ಜವಳಗೇರಾ
|

Updated on: Jun 23, 2023 | 3:44 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ(contractors association )ಅಧ್ಯಕ್ಷ ಡಿ.ಕೆಂಪಣ್ಣ (Kempanna) ಅವರ ನೇತೃತ್ವದ ನಿಯೋಗವು ಇಂದು (ಜೂನ್ 23) ಸಿದ್ದರಾಮಯ್ಯನವರನ್ನು(siddaramaiah (Siddaramaiah) ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಬಿಬಿಎಂಪಿಯಲ್ಲಿ 2000 ಕೋಟಿ ರೂ. ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ. ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: ಫಲ ಕೊಡದ ದೆಹಲಿ ಭೇಟಿ: ಅಕ್ಕಿ ಕೊಡಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿರಾಕರಣೆ, ಮುನಿಯಪ್ಪ ಅಸಮಾಧಾನ

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದು, ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.

ಸಿದ್ದರಾಮಯ್ಯನವರ ಜೊತೆಗಿನ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ನಾವು ಬಾಕಿ ಬಿಲ್ ಗಳ ಬಗ್ಗೆ ಚರ್ಚೆಗೆ ಬಂದಿದ್ವಿ. ಕಮಿಷನ್ ಆರೋಪ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿಲ್ಲ. ಕಾಮಗಾರಿ ಬಾಕಿ ಬಿಲ್​​ ಪಾವತಿ ಬಗ್ಗೆ ಸಿಎಂಗೆ ಮನವಿ ಮಾಡಿದ್ದು, ಅಧಿಕಾರಿಗಳ ಜತೆ ಚರ್ಚಿಸಿ ಬಾಕಿ ಬಿಲ್ ಪಾವತಿಸುವುದಾಗಿ ಭರವಸೆ ನೀಡಿದರು ಎಂದು ಸ್ಪಷ್ಟಪಡಿಸಿದರು.

ಈಗಿನ ಸರ್ಕಾರದ ಸಚಿವರು ಕಮೀಷನ್ ಫಿಕ್ಸ್ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಕೆಂಪಣ್ಣ, ಸರ್ಕಾರ ಬಂದು ಒಂದು ತಿಂಗಳಾಗಿದೆ. ಈ ಸರ್ಕಾರದವರು ಇದುವರೆಗೂ ಯಾರೂ ನಮ್ಮ ಬಳಿ ಕಮೀಷನ್ ಕೇಳಿಲ್ಲ. ಯಾರಾದರೂ ಸಚಿವರು, ಶಾಸಕರು ನಮ್ಮ ಬಳಿ ಕಮೀಷನ್ ಕೇಳಿದ್ರೆ ಬಹಿರಂಗ ಪಡಿಸುತ್ತೇವೆ. ಯಾರಾದರೂ ಕಮೀಷನ್ ಕೇಳಿದರೆ ಅದನ್ನೂ ಸಹ ವಿರೋಧಿಸುತ್ತೇವೆ ಎಂದು ಹೇಳಿದರು.

ಇನ್ನು ಬಿಜೆಪಿ ಸರ್ಕಾರದ 40% ಕಮೀಷನ್ ಆರೋಪದ ದಾಖಲಾತಿ ಬಿಡುಗಡೆ ಮಾಡದ ಬಗ್ಗೆ ಮಾತನಾಡಿ, ಸದ್ಯ ಪ್ರಕರಣ ಕೋರ್ಟ್ ನಲ್ಲಿದೆ . ಅದರ ಕುರಿತ ದಾಖಲಾತಿಗಳನ್ನು ಸಮಯ ಬಂದಾಗ ಬಿಡುಗಡೆ ಮಾಡುತ್ತೇವೆ ಎಂದು ಮತ್ತೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ