AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಪ್ರಕರಣ ಸಿಬಿಐಗೆ ನೀಡಿರುವುದು ಯಾಕೆ ಕಾನೂನು ಬಾಹಿರ? ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐಗೆ ನೀಡಿರುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಸಿಬಿಐ ಪತ್ರ ಬರೆದಿದಕ್ಕೆ ತಮ್ಮ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಸದ್ಯ ಸಿದ್ದರಾಮಯ್ಯ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಪ್ರಕರಣ ಸಿಬಿಐಗೆ ನೀಡಿರುವುದು ಯಾಕೆ ಕಾನೂನು ಬಾಹಿರ? ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
Anil Kalkere
| Updated By: Rakesh Nayak Manchi

Updated on: Nov 24, 2023 | 9:16 PM

ಬೆಂಗಳೂರು, ನ.24: ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಪ್ರಕರಣವನ್ನು ಸಿಬಿಐಗೆ ನೀಡಿರುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದರು. ಸದ್ಯ, ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ಶಿವಕುಮಾರ್ ಸಿಟ್ಟಿಂಗ್ ಎಂಎಲ್​ಎ ಆಗಿದ್ದು, ತನಿಖೆಗೆ ಒಪ್ಪಿಸುವ ಮುನ್ನ ಸ್ಪೀಕರ್ ಅನುಮತಿ ಪಡೆಯಬೇಕು. ಆದರೆ, ಅಂದಿನ ಸರ್ಕಾರ ಅನುಮತಿ ಪಡೆಯಲಿಲ್ಲ. ಹೀಗಾಗಿ ಅದು ಕಾನೂನುಬಾಹಿರ ಎಂದು ಹೇಳಿದರು.

ಸಿಬಿಐ ಪತ್ರ ಬರೆದಿದಕ್ಕೆ ತಮ್ಮ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು ಎಂಬ ಮಾಜಿ ಸಿಎಂ ಯಡಿಯೂರಪ್ಪ ಅವರು ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪನವರು ಕಾನೂನು ಪ್ರಕಾರ ಮಾಡಬೇಕು ಅಲ್ವಾ? ತನಿಖೆ ಮಾಡಬೇಕೋ ಬೇಡವೇ ಎಂಬುದರ ಬಗ್ಗೆ ಅಡ್ವೊಕೇಟ್ ಜನರಲ್ (ಎಜಿ) ಅವರ ಕಾನೂನಾತ್ಮಕ ಅಭಿಪ್ರಾಯವನ್ನು ಕೇಳುತ್ತಾರೆ. ಆದರೆ ಅಂದು ಎಜಿ ಅವರು ಅಭಿಪ್ರಾಯ ಕೊಡುವ ಮುನ್ನವೇ ಮೌಖಿಕ ಆದೇಶ ಕೊಟ್ಟಿದ್ದರು ಎಂದರು.

ಅಂದು ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಅವರು ಯಾಕೆ ಮೌಖಿಕವಾಗಿ ರೆಫರ್ ಮಾಡಿದರು ಎಂದು ಕೇಳಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಿಟ್ಟಿಂಗ್ ಎಂಎಲ್​ಎ, ತನಿಖೆಗೆ ಅನುಮತಿ ಕೊಡುವವರು ಸ್ಪೀಕರ್. ಆದರೆ ಇವರು ಅನುಮತಿ ತಗೊಂಡಿಲ್ಲ, ಅದಕ್ಕೆ ಕಾನೂನುಬಾಹಿರ ಅಂದಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ನಾವು ಕೇಸ್ ಹಿಂಪಡೆದಿಲ್ಲ, ಕಾನೂನಿನ ಪ್ರಕಾರ ಮಂಜೂರು ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಸಿಬಿಐ ತನಿಖೆಯಿಂದ ಪಾರಾಗಲು ಡಿಕೆ ಶಿವಕುಮಾರ್​ಗಿದೆ ಸವಾಲು, ಸಿಬಿಐ ಮುಂದಿನ ದಾರಿ ಏನು?

ಡಿ.ಕೆ.ಶಿವಕುಮಾರ್ ವಿರುದ್ಧದ CBI ತನಿಖೆಗೆ ನೀಡಿದ ಅನುಮತಿ ವಾಪಸ್​ ಪಡೆಯಲು ಸಂಪುಟ ಅನುಮೋದನೆ ನೀಡಿದ್ದನ್ನು ಖಂಡಿಸಿ ಬಿಜೆಪಿ ಕಾನೂನು ಹೋರಾಟಕ್ಕೆ ಮುಂದಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಬಿಜೆಪಿಯವರು ಕಾನೂನು ಹೋರಾಟ ಮಾಡಲಿ. ಸಿಬಿಐಗೆ ಕೊಟ್ಟಿರುವುದು ಸರಿಯಲ್ಲ ಅಂತಾ ಸರ್ಕಾರ ನಿರ್ಧಾರ ಮಾಡಿದೆ ಎಂದರು.

ಸಿಬಿಐ ತನಿಖೆ ವಾಪಸ್ ಪಡೆಯುವ ವಿಚಾರದಲ್ಲಿ ಮುಖ್ಯಮಂತ್ರಿ ಪಾತ್ರ ಇದೆ ಎಂಬ ಯಡಿಯೂರಪ್ಪ ಆರೋಪ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ನಮಗೂ ಅದಕ್ಕೂ ಸಂಬಂಧವಿಲ್ಲ, ಕ್ಯಾಬಿನೆಟ್ ನಿರ್ಧಾರ ಮಾಡಿದೆ. ನಾವು ಸಂಪುಟ ಮತ್ತು ಅಡ್ವೊಕೇಟ್ ಜನರಲ್ ಅವರರ ಅಭಿಪ್ರಾಯ ಪಡೆದಿದ್ದೇವೆ. ಅಂದಿನ ಮುಖ್ಯಮಂತ್ರಿ ಮೌಖಿಕ ಆದೇಶ ಕೊಟ್ಟಿದ್ದರು. ಲಿಖಿತ ಆದೇಶ ಕೊಟ್ಟಿರಲಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ