AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ತಡೆಹಿಡಿದ ಸಿದ್ದರಾಮಯ್ಯ ಸರ್ಕಾರ

ಈ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ (BJP Govt) ಅವಧಿಯ ಎಲ್ಲಾ ಕಾಮಗಾರಿಗಳ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ (Siddaramaiah) ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ.

ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ತಡೆಹಿಡಿದ ಸಿದ್ದರಾಮಯ್ಯ ಸರ್ಕಾರ
ಸಿದ್ದರಾಮಯ್ಯ
Ganapathi Sharma
|

Updated on: May 22, 2023 | 8:38 PM

Share

ಬೆಂಗಳೂರು: ಈ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ (BJP Govt) ಅವಧಿಯ ಎಲ್ಲಾ ಕಾಮಗಾರಿಗಳ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ (Siddaramaiah) ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ. ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ, ಪಾವತಿಗೆ ತಕ್ಷಣದಿಂದ ತಡೆ ನೀಡಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ ಅವರು ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ.

ಜತೆಗೆ, ಇನ್ನಷ್ಟೇ ಆರಂಭವಾಗಬೇಕಿರುವ ಕಾಮಗಾರಿಗಳನ್ನೂ ತಡೆಹಿಡಿಯುವಂತೆ ಆದೇಶಿಸಲಾಗಿದೆ.

ಹಿಂದಿನ ಸರ್ಕಾರದ ನಿಗಮ ಮಂಡಳಿ ಅಧ್ಯಕ್ಷರ ನಾಮನಿರ್ದೇಶನವನ್ನೂ ರದ್ದುಗೊಳಿಸಲಾಗಿದೆ. ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳ ಎಲ್ಲಾ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮ ನಿರ್ದೇಶನ ರದ್ದುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯರ್ಶಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬಹುದು? ಇಲ್ಲಿದೆ ಸಲಹೆ

ಇತ್ತೀಚೆಗೆ ನಡೆದಿದ್ದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಗಳಿಸುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೇರಿದೆ. ಶನಿವಾರವಷ್ಟೇ ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದರು. ಜತೆಗೆ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದರು. ನಂತರ ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗಿದೆ.

16ನೇ ವಿಧಾನಸಭೆಯ ಮೊದಲ ಅಧಿವೇಶನದ‌ ಮೊದಲ ದಿನವಾದ ಸೋಮವಾರ ಮಾನ್ಯ ಮುಖ್ಯಮಂತ್ರಿಗಳು, ಮಾನ್ಯ ಉಪಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಸೇರಿದಂತೆ ಒಟ್ಟು 182 ಜನರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ 42ಜನರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುವುದು ಬಾಕಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್