ಸಿಎಂ ತಂತಿ ಮೇಲೆ ನಡೆಯುವುದಕ್ಕಿಂತ ರಾಜೀನಾಮೆ ಕೊಡಲಿ ಎಂದ ಮಾಜಿ ಸಿಎಂ

ರಾಯಚೂರು: ಸಿಎಂ ಬಿ.ಎಸ್.ಯಡಿಯೂರಪ್ಪ ತಂತಿ ಮೇಲೆ ನಡೆದು ಸರ್ಕಾರ ನಡೆಸುವುದು ಬೇಡ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಬಿಎಸ್​ವೈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತೆ. ಬಳಿಕ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ರಾಯಚೂರಿನಲ್ಲಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಉಪಚುನಾವಣೆ ನಡೆಯುವ 15 ಕ್ಷೇತ್ರಗಳ ಪೈಕಿ 8ರಲ್ಲಿ ಬಿಜೆಪಿ ಗೆಲ್ಲಬೇಕಿದೆ. ಆದ್ರೆ ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲ್ಲಲು […]

ಸಿಎಂ ತಂತಿ ಮೇಲೆ ನಡೆಯುವುದಕ್ಕಿಂತ ರಾಜೀನಾಮೆ ಕೊಡಲಿ ಎಂದ ಮಾಜಿ ಸಿಎಂ
ಸಾಧು ಶ್ರೀನಾಥ್​

Updated on: Sep 30, 2019 | 1:05 PM

ರಾಯಚೂರು: ಸಿಎಂ ಬಿ.ಎಸ್.ಯಡಿಯೂರಪ್ಪ ತಂತಿ ಮೇಲೆ ನಡೆದು ಸರ್ಕಾರ ನಡೆಸುವುದು ಬೇಡ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಬಿಎಸ್​ವೈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಉಪಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತೆ. ಬಳಿಕ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ರಾಯಚೂರಿನಲ್ಲಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಉಪಚುನಾವಣೆ ನಡೆಯುವ 15 ಕ್ಷೇತ್ರಗಳ ಪೈಕಿ 8ರಲ್ಲಿ ಬಿಜೆಪಿ ಗೆಲ್ಲಬೇಕಿದೆ. ಆದ್ರೆ ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲ್ಲಲು ವಿಫಲವಾದರೆ ಸರ್ಕಾರ ಪತನವಾಗುತ್ತೆ. ಅಲ್ಲದೆ ಕಾಂಗ್ರೆಸ್​ ಪಕ್ಷ 15ಕ್ಕೆ 15 ಕ್ಷೇತ್ರಗಳಲ್ಲೂ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆನಂದ್​ಸಿಂಗ್​ಗಾಗಿ ಬಳ್ಳಾರಿ ವಿಭಜನೆ:
ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡುವ ವಿಚಾರ ಸಂಬಂಧ ಮಾತನಾಡಿದ ಸಿದ್ದರಾಮಯ್ಯ, ಆನಂದ್​ ಸಿಂಗ್​ಗೆ ನೆರವಾಗುವುದಕ್ಕೆ ಹೀಗೆ ಮಾಡ್ತಿದ್ದಾರೆ. 18 ತಾಲೂಕುಗಳಿದ್ರೂ ಬೆಳಗಾವಿ ಜಿಲ್ಲೆ ವಿಭಜನೆ ಆಗಿಲ್ಲ. ಆದ್ರೆ, ಬಳ್ಳಾರಿ ಜಿಲ್ಲೆಯಲ್ಲಿ ಕೇವಲ 9 ತಾಲೂಕುಗಳು ಮಾತ್ರ ಇವೆ. ಹೀಗಿರುವಾಗ ಬಳ್ಳಾರಿ ಜಿಲ್ಲೆ ವಿಭಜನೆ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

Published On - 1:04 pm, Mon, 30 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us