AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ; ಕೊವಿಡ್ ವರದಿಯೂ ನೆಗೆಟಿವ್

ಜ್ವರ ಹಿನ್ನೆಲೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಕೊವಿಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿತ್ತು. ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ.

ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ; ಕೊವಿಡ್ ವರದಿಯೂ ನೆಗೆಟಿವ್
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Jun 05, 2021 | 3:50 PM

Share

ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೆಲವು ದಿನಗಳ ಹಿಂದೆ ನಗರದ ಮಣಿಪಾಲ್ ಆಸ್ಪತ್ರಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೂ ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜ್ವರ ಹಿನ್ನೆಲೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಕೊವಿಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿತ್ತು. ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿಯೇ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಮೊದಲು ಸಿದ್ದರಾಮಯ್ಯ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್ ನಾರ್ಮಲ್ ಬಂದಿತ್ತು. ಆದರೂ ವೈರಲ್ ಫೀವರ್​ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿಸಲಾಗಿತ್ತು. ವೈದ್ಯರ ಸಲಹೆಯಂತೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.

ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್​ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೊವಿಡ್‌ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದರು.

ಸಿದ್ದರಾಮಯ್ಯ ಮಾರ್ಚ್​ನಲ್ಲಿ ಕೊರೊನಾ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಕೊವಿಡ್​ ಲಸಿಕೆ ಹಾಕಿಸಿಕೊಂಡಿದ್ದರು. ಲಸಿಕೆ ಪಡೆದ ಬಳಿಕ ಸ್ವಲ್ಪ ಹೊತ್ತು ಹಾಗೇ ಕುಳಿತಿದ್ದ ಸಿದ್ದರಾಮಯ್ಯಗೆ ನರ್ಸ್​ ಸರ್​ ವ್ಯಾಕ್ಸಿನ್​ ಹಾಕಿ ಆಯ್ತು ಎಂದು ಹೇಳಿದ್ದರು. ಅದಕ್ಕೆ ಕೊಂಚ ಆಶ್ಚರ್ಯಗೊಂಡ ಸಿದ್ದರಾಮಯ್ಯ, ಹೌದಾ?  ಗೊತ್ತೇ ಆಗಲಿಲ್ಲ ಎಂದು ನಗೆ ಚಟಾಕಿ ಹಾರಿಸಿದ್ದರು.

ಇದನ್ನೂ ಓದಿ: ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಉಚಿತವಾಗಿ ನೀಡಲು ಒತ್ತಾಯ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಕೆಪಿಸಿಸಿ ಪಿಆರ್ ಸಂಸ್ಥೆ ವಿವಾದ: ಡಿಕೆ ಶಿವಕುಮಾರ್ ಬಿಟ್ರೆ ಇನ್ನಾರ ಫೋಟೋನೂ ಇಲ್ಲ; ಸಿದ್ದರಾಮಯ್ಯ ಚಿತ್ರವೂ ಬಳಸದ ಪಿಆರ್ ಸಂಸ್ಥೆ

Published On - 3:34 pm, Sat, 5 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ