AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ; ಕೊವಿಡ್ ವರದಿಯೂ ನೆಗೆಟಿವ್

ಜ್ವರ ಹಿನ್ನೆಲೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಕೊವಿಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿತ್ತು. ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ.

ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ; ಕೊವಿಡ್ ವರದಿಯೂ ನೆಗೆಟಿವ್
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Jun 05, 2021 | 3:50 PM

Share

ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೆಲವು ದಿನಗಳ ಹಿಂದೆ ನಗರದ ಮಣಿಪಾಲ್ ಆಸ್ಪತ್ರಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೂ ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜ್ವರ ಹಿನ್ನೆಲೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಿದ್ದರಾಮಯ್ಯ ಕೊವಿಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿತ್ತು. ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿಯೇ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಮೊದಲು ಸಿದ್ದರಾಮಯ್ಯ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್ ನಾರ್ಮಲ್ ಬಂದಿತ್ತು. ಆದರೂ ವೈರಲ್ ಫೀವರ್​ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿಸಲಾಗಿತ್ತು. ವೈದ್ಯರ ಸಲಹೆಯಂತೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.

ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್​ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೊವಿಡ್‌ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದರು.

ಸಿದ್ದರಾಮಯ್ಯ ಮಾರ್ಚ್​ನಲ್ಲಿ ಕೊರೊನಾ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಕೊವಿಡ್​ ಲಸಿಕೆ ಹಾಕಿಸಿಕೊಂಡಿದ್ದರು. ಲಸಿಕೆ ಪಡೆದ ಬಳಿಕ ಸ್ವಲ್ಪ ಹೊತ್ತು ಹಾಗೇ ಕುಳಿತಿದ್ದ ಸಿದ್ದರಾಮಯ್ಯಗೆ ನರ್ಸ್​ ಸರ್​ ವ್ಯಾಕ್ಸಿನ್​ ಹಾಕಿ ಆಯ್ತು ಎಂದು ಹೇಳಿದ್ದರು. ಅದಕ್ಕೆ ಕೊಂಚ ಆಶ್ಚರ್ಯಗೊಂಡ ಸಿದ್ದರಾಮಯ್ಯ, ಹೌದಾ?  ಗೊತ್ತೇ ಆಗಲಿಲ್ಲ ಎಂದು ನಗೆ ಚಟಾಕಿ ಹಾರಿಸಿದ್ದರು.

ಇದನ್ನೂ ಓದಿ: ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಉಚಿತವಾಗಿ ನೀಡಲು ಒತ್ತಾಯ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಕೆಪಿಸಿಸಿ ಪಿಆರ್ ಸಂಸ್ಥೆ ವಿವಾದ: ಡಿಕೆ ಶಿವಕುಮಾರ್ ಬಿಟ್ರೆ ಇನ್ನಾರ ಫೋಟೋನೂ ಇಲ್ಲ; ಸಿದ್ದರಾಮಯ್ಯ ಚಿತ್ರವೂ ಬಳಸದ ಪಿಆರ್ ಸಂಸ್ಥೆ

Published On - 3:34 pm, Sat, 5 June 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ