AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ‘ಕುತ್ತಾ’ ಎಂದ ಸಿದ್ದರಾಮಯ್ಯ; ನಾನು ಸಿಎಂ ಆಗಿದ್ರೆ ಸಚಿವೆ ನಿರ್ಮಲಾ ಮನೆ ಮುಂದೆ ಪ್ರತಿಭಟನೆ ಮಾಡ್ತಿದ್ದೆ ಎಂದರು

Siddaramaiah: ನೀವು ನನ್ನನ್ನ ಗೆಲ್ಲಿಸುತ್ತೇನೆ ಅಂದ್ರೆ ಬಸವನಗುಡಿಗೆ ಬರುತ್ತೇನೆ. ಆ ರವಿಸುಬ್ರಹ್ಮಣ್ಯ, ಸೂರ್ಯನ್ನೇ ಗೆಲ್ಲಿಸ್ತೀನಿ ಅಂದ್ರೆ ಏನ್ಮಾಡ್ಲಿ? ಎಂದು ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಯಡಿಯೂರಪ್ಪ ‘ಕುತ್ತಾ’ ಎಂದ ಸಿದ್ದರಾಮಯ್ಯ; ನಾನು ಸಿಎಂ ಆಗಿದ್ರೆ ಸಚಿವೆ ನಿರ್ಮಲಾ ಮನೆ ಮುಂದೆ ಪ್ರತಿಭಟನೆ ಮಾಡ್ತಿದ್ದೆ ಎಂದರು
ಯಡಿಯೂರಪ್ಪ ‘ಕುತ್ತಾ’ ಎಂದ ಸಿದ್ದರಾಮಯ್ಯ; ನಾನು ಸಿಎಂ ಆಗಿದ್ರೆ ನಿರ್ಮಲಾ ಸೀತಾರಾಮನ್​ ಮನೆ ಮುಂದೆ ಪ್ರತಿಭಟನೆ ಮಾಡ್ತಾಯಿದ್ದೆ ಎಂದರು
TV9 Web
| Edited By: |

Updated on:Jul 05, 2021 | 12:53 PM

Share

ಬೆಂಗಳೂರು: ಬಿಜೆಪಿಗೆ ವೋಟ್ ಹಾಕಲೇ ಬೇಡಿ; ಯಾತಕ್ಕೆ ಬಿಜೆಪಿಗೆ ವೋಟ್ ಹಾಕ್ತಿರಾ? ಅವರಿಗೆ ಏನ್ ಬಂದಿದೆ ಬಿಜೆಪಿಯವರಿಗೆ? ಎಂದು ಆಡಳಿತಾರೂಢ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಕೂಡ ರಾಜ್ಯಕ್ಕೆ ದ್ರೋಹ ಮಾಡಿದ್ದಾರೆ. ನಾನು ಸಿಎಂ ಆಗಿದ್ರೆ ನಿರ್ಮಲಾ ಸೀತಾರಾಮನ್​ ಮನೆ ಮುಂದೆ ಪ್ರತಿಭಟನೆ ಮಾಡ್ತಾಯಿದ್ದೆ ಎಂದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯ ಮಾಡಿದ್ದಿವಿ. ನಾವು ಇದ್ದಿದ್ದರೆ ಹತ್ತು ಸಾವಿರ ಕೊಡ್ತಿದ್ವಿ. ಹತ್ತು ಕೆಜಿ ಅಕ್ಕಿ ಕೊಡ್ತಿದ್ದೆ. ಈಗ ಇವರು ಎರಡು ಕೆಜಿ ಅಕ್ಕಿ ಕೊಡ್ತಿದ್ದಾರೆ. ಹತ್ತು ಕೆಜಿ ಕೊಟ್ಟಿದ್ರೆ ಇವರ ಗಂಟೇನು ಹೋಗ್ತಿತ್ತಾ..? ಎಂದು ಸಿದ್ದರಾಮಯ್ಯ ಮಾರ್ಮಿಕವಾಗಿ ನುಡಿದಿದ್ದಾರೆ.

ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು ಅವನು ಸೂರ್ಯ ಅಲ್ಲ ಕತ್ತಲು, ರವಿ ಸುಬ್ರಮಣ್ಯ ಏನು ಮಾಡ್ತಿದ್ದಾರೆ ಎಂದು ನೀವು ಕೇಳಬೇಕು ಎಂದು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಹೇಳಿದರು.

ಈ ದೇಶದ ರಾಜಕೀಯ ಸೂರ್ಯ ಅಂದ್ರೆ ಡಾ.ಅಂಬೇಡ್ಕರ್​. ಇವನು ಸುಮ್ನೆ ಸೂರ್ಯ ಅಂತ ಹೆಸರಿಟ್ಟುಕೊಂಡಿದ್ದಾನೆ. ನೀವು ನನ್ನನ್ನ ಗೆಲ್ಲಿಸುತ್ತೇನೆ ಅಂದ್ರೆ ಬಸವನಗುಡಿಗೆ ಬರುತ್ತೇನೆ. ಆ ರವಿಸುಬ್ರಹ್ಮಣ್ಯ, ಸೂರ್ಯನ್ನೇ ಗೆಲ್ಲಿಸ್ತೀನಿ ಅಂದ್ರೆ ಏನ್ಮಾಡ್ಲಿ? ಡಾ.ಅಂಬೇಡ್ಕರ್ ಬರೆದ ಸಂವಿಧಾನ ಸುಟ್ಟುಹಾಕುವವರು, ಸಮಾಜ ಒಡೆಯುವವರು ಇವರು. ಜಾತಿ ನಡುವೆ ಜಗಳ ತಂದಿಡುತ್ತಾರೆ, ಚೆನ್ನಾಗಿದ್ರೆ ಸಹಿಸುವುದಿಲ್ಲ. ಬಿಜೆಪಿಯನ್ನು ಬೇರು ಸಹಿತ ಕಿತ್ತುಹಾಕುವುದು ಒಳ್ಳೆಯದು ಎಂದು ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಯಡಿಯೂರಪ್ಪ ಅವರನ್ನ ‘ಕುತ್ತಾ’ ಎಂದು ಸಂಬೋಧಿಸಿದ ಸಿದ್ದರಾಮಯ್ಯ:

ಸಿಎಂ ಯಡಿಯೂರಪ್ಪ ವಿರುದ್ಧವೂ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಕೇಂದ್ರದ ಬಳಿ ಮಾತನಾಡುವುದೇ ಇಲ್ಲ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಅಂತಾರಲ್ಲ ಹಾಗೇ ಎಂದು ಯಡಿಯೂರಪ್ಪ ಅವರನ್ನ ‘ಕುತ್ತಾ ಎಂದು ಸಿದ್ದರಾಮಯ್ಯ ಸಂಬೋಧಿಸಿದರು.

ಕೆಆರ್​ಎಸ್ ಸೋರುತ್ತಿದ್ದರೆ ಅದರ ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

(siddaramaiah criticizes bs yediyurappa refer him to dog)

Published On - 12:41 pm, Mon, 5 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್