AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಸ್ಥಾನ ಮಾನ: ಡಿಕೆಶಿ, ಸಿದ್ದರಾಮಯ್ಯ ನಡುವೆ ಜಿದ್ದಾಜಿದ್ದಿ

ಬೆಂಗಳೂರು: ಒಂದು ಕಡೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ಬಂಡೆ, ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಹೆಸರನ್ನು ಅಂತಿಮಗೊಳಿಸುವಲ್ಲಿ ಸಫಲರಾಗಿದ್ದಾರೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆಯಾದರೂ ರಾಜ್ಯದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನದ ಬಗ್ಗೆ ಸಿದ್ದರಾಮಯ್ಯ ತಮ್ಮ ಟವೆಲ್ ಹಾಕಿರುವುದರಿಂದ ಈ ವಿಷಯದಲ್ಲಿ ಸೋನಿಯಾ ಯಾವುದೇ ನಿರ್ಣಯಕ್ಕೆ ಬರುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಬೆಂಬಲಿಗರನ್ನು ನೇಮಿಸುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಘೋಷಿಸುವಲ್ಲಿ ವಿಳಂಬವಾಗಿದೆ […]

ಕೆಪಿಸಿಸಿ ಸ್ಥಾನ ಮಾನ: ಡಿಕೆಶಿ, ಸಿದ್ದರಾಮಯ್ಯ ನಡುವೆ ಜಿದ್ದಾಜಿದ್ದಿ
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 17, 2020 | 12:43 PM

Share

ಬೆಂಗಳೂರು: ಒಂದು ಕಡೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ಬಂಡೆ, ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಹೆಸರನ್ನು ಅಂತಿಮಗೊಳಿಸುವಲ್ಲಿ ಸಫಲರಾಗಿದ್ದಾರೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆಯಾದರೂ ರಾಜ್ಯದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನದ ಬಗ್ಗೆ ಸಿದ್ದರಾಮಯ್ಯ ತಮ್ಮ ಟವೆಲ್ ಹಾಕಿರುವುದರಿಂದ ಈ ವಿಷಯದಲ್ಲಿ ಸೋನಿಯಾ ಯಾವುದೇ ನಿರ್ಣಯಕ್ಕೆ ಬರುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಬೆಂಬಲಿಗರನ್ನು ನೇಮಿಸುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಘೋಷಿಸುವಲ್ಲಿ ವಿಳಂಬವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯಗೆ 2 ಸ್ಥಾನ ನೀಡಲು ಪಟ್ಟು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸದ್ಯ ಭಾರಿ ಕಸರತ್ತು ನಡೆಯುತ್ತಿದೆ. ಈಗಾಗಲೇ ಕಾಂಗ್ರೆಸ್​ನ ಪ್ರಭಾವಿ ಶಾಸಕ ಡಿ.ಕೆ.ಶಿವಕುಮಾರ್ ಹೆಸರು ಬಹುತೇಕ ಫೈನಲ್ ಆಗಿದೆ ಎನ್ನಲಾಗಿದೆ. ಈ ಮಧ್ಯೆಯೇ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಮತ್ತು ವಿಪಕ್ಷ ನಾಯಕ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನ ಮುಂದುವರಿಸುವಂತೆ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಸಿದ್ದರಾಮಯ್ಯ ಕೇವಲ ವಿಪಕ್ಷ ನಾಯಕರಾಗಿ ಮುಂದುವರಿದ್ರೆ, ಕೇವಲ ಸರ್ಕಾರಿ ಕಾರು, ಬಂಗಲೆಗೆ ಮಾತ್ರ ಸೀಮಿತರಾಗುತ್ತಾರೆ. ಅಲ್ಲದೆ, ಪಕ್ಷದ ಮೇಲೆ ಮೊದಲಿದ್ದ ಹಿಡಿತ ತಪ್ಪುತ್ತದೆ ಎಂಬ ಭೀತಿ ಸಿದ್ದರಾಮಯ್ಯ ಬಣಕ್ಕೆ ಕಾಡುತ್ತಿದೆ. ಹೀಗಾಗಿ ಎರಡೂ ಸ್ಥಾನ ಸಿದ್ದರಾಮಯ್ಯಗೆ ನೀಡಲು ಒತ್ತಾಯಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯಗೆ 2 ಸ್ಥಾನ ಸಿಗದಿದ್ರೆ ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಬೆಂಬಲ ಘೋಷಿಸಿ ತಟಸ್ಥರಾಗಿರಲು ಸಿದ್ದರಾಮಯ್ಯ ಬಣ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

Published On - 10:28 am, Fri, 17 January 20

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ