ಕೆಪಿಸಿಸಿ ಸ್ಥಾನ ಮಾನ: ಡಿಕೆಶಿ, ಸಿದ್ದರಾಮಯ್ಯ ನಡುವೆ ಜಿದ್ದಾಜಿದ್ದಿ

ಬೆಂಗಳೂರು: ಒಂದು ಕಡೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ಬಂಡೆ, ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಹೆಸರನ್ನು ಅಂತಿಮಗೊಳಿಸುವಲ್ಲಿ ಸಫಲರಾಗಿದ್ದಾರೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆಯಾದರೂ ರಾಜ್ಯದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನದ ಬಗ್ಗೆ ಸಿದ್ದರಾಮಯ್ಯ ತಮ್ಮ ಟವೆಲ್ ಹಾಕಿರುವುದರಿಂದ ಈ ವಿಷಯದಲ್ಲಿ ಸೋನಿಯಾ ಯಾವುದೇ ನಿರ್ಣಯಕ್ಕೆ ಬರುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಬೆಂಬಲಿಗರನ್ನು ನೇಮಿಸುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಘೋಷಿಸುವಲ್ಲಿ ವಿಳಂಬವಾಗಿದೆ […]

ಕೆಪಿಸಿಸಿ ಸ್ಥಾನ ಮಾನ: ಡಿಕೆಶಿ, ಸಿದ್ದರಾಮಯ್ಯ ನಡುವೆ ಜಿದ್ದಾಜಿದ್ದಿ
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​
ಸಾಧು ಶ್ರೀನಾಥ್​

Updated on: Jan 17, 2020 | 12:43 PM

ಬೆಂಗಳೂರು: ಒಂದು ಕಡೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ಬಂಡೆ, ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಹೆಸರನ್ನು ಅಂತಿಮಗೊಳಿಸುವಲ್ಲಿ ಸಫಲರಾಗಿದ್ದಾರೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆಯಾದರೂ ರಾಜ್ಯದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನದ ಬಗ್ಗೆ ಸಿದ್ದರಾಮಯ್ಯ ತಮ್ಮ ಟವೆಲ್ ಹಾಕಿರುವುದರಿಂದ ಈ ವಿಷಯದಲ್ಲಿ ಸೋನಿಯಾ ಯಾವುದೇ ನಿರ್ಣಯಕ್ಕೆ ಬರುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಬೆಂಬಲಿಗರನ್ನು ನೇಮಿಸುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಘೋಷಿಸುವಲ್ಲಿ ವಿಳಂಬವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯಗೆ 2 ಸ್ಥಾನ ನೀಡಲು ಪಟ್ಟು:
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸದ್ಯ ಭಾರಿ ಕಸರತ್ತು ನಡೆಯುತ್ತಿದೆ. ಈಗಾಗಲೇ ಕಾಂಗ್ರೆಸ್​ನ ಪ್ರಭಾವಿ ಶಾಸಕ ಡಿ.ಕೆ.ಶಿವಕುಮಾರ್ ಹೆಸರು ಬಹುತೇಕ ಫೈನಲ್ ಆಗಿದೆ ಎನ್ನಲಾಗಿದೆ. ಈ ಮಧ್ಯೆಯೇ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಮತ್ತು ವಿಪಕ್ಷ ನಾಯಕ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನ ಮುಂದುವರಿಸುವಂತೆ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಸಿದ್ದರಾಮಯ್ಯ ಕೇವಲ ವಿಪಕ್ಷ ನಾಯಕರಾಗಿ ಮುಂದುವರಿದ್ರೆ, ಕೇವಲ ಸರ್ಕಾರಿ ಕಾರು, ಬಂಗಲೆಗೆ ಮಾತ್ರ ಸೀಮಿತರಾಗುತ್ತಾರೆ. ಅಲ್ಲದೆ, ಪಕ್ಷದ ಮೇಲೆ ಮೊದಲಿದ್ದ ಹಿಡಿತ ತಪ್ಪುತ್ತದೆ ಎಂಬ ಭೀತಿ ಸಿದ್ದರಾಮಯ್ಯ ಬಣಕ್ಕೆ ಕಾಡುತ್ತಿದೆ. ಹೀಗಾಗಿ ಎರಡೂ ಸ್ಥಾನ ಸಿದ್ದರಾಮಯ್ಯಗೆ ನೀಡಲು ಒತ್ತಾಯಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯಗೆ 2 ಸ್ಥಾನ ಸಿಗದಿದ್ರೆ ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಬೆಂಬಲ ಘೋಷಿಸಿ ತಟಸ್ಥರಾಗಿರಲು ಸಿದ್ದರಾಮಯ್ಯ ಬಣ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

 

Published On - 10:28 am, Fri, 17 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us