AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮೀಯ ಮಿತ್ರ ರೇವಣ್ಣ ಇದ್ದ ಮನೆಗೆ ಸಿದ್ದರಾಮಯ್ಯ ಪ್ರವೇಶ

ಬೆಂಗಳೂರು: ಕೊನೆಗೂ ತಾವಿದ್ದ ಕಾವೇರಿ ನಿವಾಸವನ್ನ ಖಾಲಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಮನೆ ಖಾಲಿ ಮಾಡಿ ಹೊಸ ಮನೆ ಪ್ರವೇಶಿಸಲಿದ್ದಾರೆ. ಈ ಹಿಂದೆ ಮಾಜಿ ಸಚಿವ ಹೆಚ್.​ಡಿ ರೇವಣ್ಣರಿದ್ದ ಗಾಂಧಿ ಭವನದ ಹಿಂಭಾಗದಲ್ಲಿರುವ ನಿವಾಸಕ್ಕೆ ಇದೀಗ ಸಿದ್ದರಾಮಯ್ಯ ಮನೆ ಪ್ರವೇಶಿಸಲು ಮುಂದಾಗಿದ್ದಾರೆ. ನೂತನ ಮನೆಗೆ ಪ್ರವೇಶಿಸಲಿರುವ ಹಿನ್ನೆಲೆ ಈಗಾಗಲೇ ಮನೆಗೆ ಸುಣ್ಣ ಬಣ್ಣ ಹೊಡೆದು ಸಿದ್ಧಮಾಡಲಾಗಿದೆ. ಸಿಬ್ಬಂದಿ ಇಂದು ಮನೆ ಬಾಗಿಲಿಗೆ ಹೂ ಕಟ್ಟಿ ಪೂಜೆ ನೆರವೇರಿಸಿದ್ದಾರೆ. ಸಿದ್ದರಾಮಯ್ಯ ಕುಟುಂಬಸ್ಥರು ಮನೆ ಪ್ರವೇಶಕ್ಕೂ ಮುನ್ನ […]

ಆತ್ಮೀಯ ಮಿತ್ರ ರೇವಣ್ಣ ಇದ್ದ ಮನೆಗೆ ಸಿದ್ದರಾಮಯ್ಯ ಪ್ರವೇಶ
ಸಾಧು ಶ್ರೀನಾಥ್​
|

Updated on:Jan 29, 2020 | 1:28 PM

Share

ಬೆಂಗಳೂರು: ಕೊನೆಗೂ ತಾವಿದ್ದ ಕಾವೇರಿ ನಿವಾಸವನ್ನ ಖಾಲಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಮನೆ ಖಾಲಿ ಮಾಡಿ ಹೊಸ ಮನೆ ಪ್ರವೇಶಿಸಲಿದ್ದಾರೆ. ಈ ಹಿಂದೆ ಮಾಜಿ ಸಚಿವ ಹೆಚ್.​ಡಿ ರೇವಣ್ಣರಿದ್ದ ಗಾಂಧಿ ಭವನದ ಹಿಂಭಾಗದಲ್ಲಿರುವ ನಿವಾಸಕ್ಕೆ ಇದೀಗ ಸಿದ್ದರಾಮಯ್ಯ ಮನೆ ಪ್ರವೇಶಿಸಲು ಮುಂದಾಗಿದ್ದಾರೆ.

ನೂತನ ಮನೆಗೆ ಪ್ರವೇಶಿಸಲಿರುವ ಹಿನ್ನೆಲೆ ಈಗಾಗಲೇ ಮನೆಗೆ ಸುಣ್ಣ ಬಣ್ಣ ಹೊಡೆದು ಸಿದ್ಧಮಾಡಲಾಗಿದೆ. ಸಿಬ್ಬಂದಿ ಇಂದು ಮನೆ ಬಾಗಿಲಿಗೆ ಹೂ ಕಟ್ಟಿ ಪೂಜೆ ನೆರವೇರಿಸಿದ್ದಾರೆ. ಸಿದ್ದರಾಮಯ್ಯ ಕುಟುಂಬಸ್ಥರು ಮನೆ ಪ್ರವೇಶಕ್ಕೂ ಮುನ್ನ ಆರ್ಚಕರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ. ಇಂದು ಪೂಜೆ ನೆರವೇರಿದ್ದು, ಇನ್ನೆರಡು ದಿನಗಳಲ್ಲಿ ಹೊಸ ಮನೆಗೆ ಬರಲಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಸಿಎಂ ಯಡಿಯೂರಪ್ಪಗೆ ಕಾವೇರಿ ನಿವಾಸವನ್ನ ಬಿಟ್ಟು ಕೊಟ್ಟಿದ್ದಾರೆ. ಸುಮಾರು 6.5 ವರ್ಷಗಳ ಕಾಲ ವಾಸ್ತವ್ಯ ಹೂಡಿದ್ದ ನಿವಾಸ ತೊರೆದು ಹೊಸ ನಿವಾಸಕ್ಕೆ ಗೃಹ ಪ್ರವೇಶ ಮಾಡಲಿದ್ದಾರೆ.

ನೂತನ ನಿವಾಸಕ್ಕೆ ಆಗಮಿಸುತ್ತಿದ್ದಂತೆಯೇ ಸಿದ್ದು ಗರಂ: ನೂತನ ನಿವಾಸಕ್ಕೆ ಪೂಜೆಗೆ ಆಗಮಿಸುತ್ತಿದ್ದಂತೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ. ಮಾಧ್ಯಮದವರನ್ನ ಗೇಟ್ ಒಳಗಡೆ ಬಿಟ್ಟಿದ್ದಕ್ಕೆ ಸಿದ್ದು ಸಿಡಿಮಿಡಿಗೊಂಡಿದ್ದಾರೆ. ಎಲ್ಲರೂ ಇಲ್ಲಿಂದ ಹೊರಡಿ ಎಂದು ಮಾಧ್ಯಮದವರಿಗೆ ಗದರಿದ್ದಾರೆ.

Published On - 1:10 pm, Wed, 29 January 20

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು