AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮೀಯ ಮಿತ್ರ ರೇವಣ್ಣ ಇದ್ದ ಮನೆಗೆ ಸಿದ್ದರಾಮಯ್ಯ ಪ್ರವೇಶ

ಬೆಂಗಳೂರು: ಕೊನೆಗೂ ತಾವಿದ್ದ ಕಾವೇರಿ ನಿವಾಸವನ್ನ ಖಾಲಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಮನೆ ಖಾಲಿ ಮಾಡಿ ಹೊಸ ಮನೆ ಪ್ರವೇಶಿಸಲಿದ್ದಾರೆ. ಈ ಹಿಂದೆ ಮಾಜಿ ಸಚಿವ ಹೆಚ್.​ಡಿ ರೇವಣ್ಣರಿದ್ದ ಗಾಂಧಿ ಭವನದ ಹಿಂಭಾಗದಲ್ಲಿರುವ ನಿವಾಸಕ್ಕೆ ಇದೀಗ ಸಿದ್ದರಾಮಯ್ಯ ಮನೆ ಪ್ರವೇಶಿಸಲು ಮುಂದಾಗಿದ್ದಾರೆ. ನೂತನ ಮನೆಗೆ ಪ್ರವೇಶಿಸಲಿರುವ ಹಿನ್ನೆಲೆ ಈಗಾಗಲೇ ಮನೆಗೆ ಸುಣ್ಣ ಬಣ್ಣ ಹೊಡೆದು ಸಿದ್ಧಮಾಡಲಾಗಿದೆ. ಸಿಬ್ಬಂದಿ ಇಂದು ಮನೆ ಬಾಗಿಲಿಗೆ ಹೂ ಕಟ್ಟಿ ಪೂಜೆ ನೆರವೇರಿಸಿದ್ದಾರೆ. ಸಿದ್ದರಾಮಯ್ಯ ಕುಟುಂಬಸ್ಥರು ಮನೆ ಪ್ರವೇಶಕ್ಕೂ ಮುನ್ನ […]

ಆತ್ಮೀಯ ಮಿತ್ರ ರೇವಣ್ಣ ಇದ್ದ ಮನೆಗೆ ಸಿದ್ದರಾಮಯ್ಯ ಪ್ರವೇಶ
ಸಾಧು ಶ್ರೀನಾಥ್​
|

Updated on:Jan 29, 2020 | 1:28 PM

Share

ಬೆಂಗಳೂರು: ಕೊನೆಗೂ ತಾವಿದ್ದ ಕಾವೇರಿ ನಿವಾಸವನ್ನ ಖಾಲಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಮನೆ ಖಾಲಿ ಮಾಡಿ ಹೊಸ ಮನೆ ಪ್ರವೇಶಿಸಲಿದ್ದಾರೆ. ಈ ಹಿಂದೆ ಮಾಜಿ ಸಚಿವ ಹೆಚ್.​ಡಿ ರೇವಣ್ಣರಿದ್ದ ಗಾಂಧಿ ಭವನದ ಹಿಂಭಾಗದಲ್ಲಿರುವ ನಿವಾಸಕ್ಕೆ ಇದೀಗ ಸಿದ್ದರಾಮಯ್ಯ ಮನೆ ಪ್ರವೇಶಿಸಲು ಮುಂದಾಗಿದ್ದಾರೆ.

ನೂತನ ಮನೆಗೆ ಪ್ರವೇಶಿಸಲಿರುವ ಹಿನ್ನೆಲೆ ಈಗಾಗಲೇ ಮನೆಗೆ ಸುಣ್ಣ ಬಣ್ಣ ಹೊಡೆದು ಸಿದ್ಧಮಾಡಲಾಗಿದೆ. ಸಿಬ್ಬಂದಿ ಇಂದು ಮನೆ ಬಾಗಿಲಿಗೆ ಹೂ ಕಟ್ಟಿ ಪೂಜೆ ನೆರವೇರಿಸಿದ್ದಾರೆ. ಸಿದ್ದರಾಮಯ್ಯ ಕುಟುಂಬಸ್ಥರು ಮನೆ ಪ್ರವೇಶಕ್ಕೂ ಮುನ್ನ ಆರ್ಚಕರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ. ಇಂದು ಪೂಜೆ ನೆರವೇರಿದ್ದು, ಇನ್ನೆರಡು ದಿನಗಳಲ್ಲಿ ಹೊಸ ಮನೆಗೆ ಬರಲಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಸಿಎಂ ಯಡಿಯೂರಪ್ಪಗೆ ಕಾವೇರಿ ನಿವಾಸವನ್ನ ಬಿಟ್ಟು ಕೊಟ್ಟಿದ್ದಾರೆ. ಸುಮಾರು 6.5 ವರ್ಷಗಳ ಕಾಲ ವಾಸ್ತವ್ಯ ಹೂಡಿದ್ದ ನಿವಾಸ ತೊರೆದು ಹೊಸ ನಿವಾಸಕ್ಕೆ ಗೃಹ ಪ್ರವೇಶ ಮಾಡಲಿದ್ದಾರೆ.

ನೂತನ ನಿವಾಸಕ್ಕೆ ಆಗಮಿಸುತ್ತಿದ್ದಂತೆಯೇ ಸಿದ್ದು ಗರಂ: ನೂತನ ನಿವಾಸಕ್ಕೆ ಪೂಜೆಗೆ ಆಗಮಿಸುತ್ತಿದ್ದಂತೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ. ಮಾಧ್ಯಮದವರನ್ನ ಗೇಟ್ ಒಳಗಡೆ ಬಿಟ್ಟಿದ್ದಕ್ಕೆ ಸಿದ್ದು ಸಿಡಿಮಿಡಿಗೊಂಡಿದ್ದಾರೆ. ಎಲ್ಲರೂ ಇಲ್ಲಿಂದ ಹೊರಡಿ ಎಂದು ಮಾಧ್ಯಮದವರಿಗೆ ಗದರಿದ್ದಾರೆ.

Published On - 1:10 pm, Wed, 29 January 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು