AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮೀಯ ಮಿತ್ರ ರೇವಣ್ಣ ಇದ್ದ ಮನೆಗೆ ಸಿದ್ದರಾಮಯ್ಯ ಪ್ರವೇಶ

ಬೆಂಗಳೂರು: ಕೊನೆಗೂ ತಾವಿದ್ದ ಕಾವೇರಿ ನಿವಾಸವನ್ನ ಖಾಲಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಮನೆ ಖಾಲಿ ಮಾಡಿ ಹೊಸ ಮನೆ ಪ್ರವೇಶಿಸಲಿದ್ದಾರೆ. ಈ ಹಿಂದೆ ಮಾಜಿ ಸಚಿವ ಹೆಚ್.​ಡಿ ರೇವಣ್ಣರಿದ್ದ ಗಾಂಧಿ ಭವನದ ಹಿಂಭಾಗದಲ್ಲಿರುವ ನಿವಾಸಕ್ಕೆ ಇದೀಗ ಸಿದ್ದರಾಮಯ್ಯ ಮನೆ ಪ್ರವೇಶಿಸಲು ಮುಂದಾಗಿದ್ದಾರೆ. ನೂತನ ಮನೆಗೆ ಪ್ರವೇಶಿಸಲಿರುವ ಹಿನ್ನೆಲೆ ಈಗಾಗಲೇ ಮನೆಗೆ ಸುಣ್ಣ ಬಣ್ಣ ಹೊಡೆದು ಸಿದ್ಧಮಾಡಲಾಗಿದೆ. ಸಿಬ್ಬಂದಿ ಇಂದು ಮನೆ ಬಾಗಿಲಿಗೆ ಹೂ ಕಟ್ಟಿ ಪೂಜೆ ನೆರವೇರಿಸಿದ್ದಾರೆ. ಸಿದ್ದರಾಮಯ್ಯ ಕುಟುಂಬಸ್ಥರು ಮನೆ ಪ್ರವೇಶಕ್ಕೂ ಮುನ್ನ […]

ಆತ್ಮೀಯ ಮಿತ್ರ ರೇವಣ್ಣ ಇದ್ದ ಮನೆಗೆ ಸಿದ್ದರಾಮಯ್ಯ ಪ್ರವೇಶ
ಸಾಧು ಶ್ರೀನಾಥ್​
|

Updated on:Jan 29, 2020 | 1:28 PM

Share

ಬೆಂಗಳೂರು: ಕೊನೆಗೂ ತಾವಿದ್ದ ಕಾವೇರಿ ನಿವಾಸವನ್ನ ಖಾಲಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಮನೆ ಖಾಲಿ ಮಾಡಿ ಹೊಸ ಮನೆ ಪ್ರವೇಶಿಸಲಿದ್ದಾರೆ. ಈ ಹಿಂದೆ ಮಾಜಿ ಸಚಿವ ಹೆಚ್.​ಡಿ ರೇವಣ್ಣರಿದ್ದ ಗಾಂಧಿ ಭವನದ ಹಿಂಭಾಗದಲ್ಲಿರುವ ನಿವಾಸಕ್ಕೆ ಇದೀಗ ಸಿದ್ದರಾಮಯ್ಯ ಮನೆ ಪ್ರವೇಶಿಸಲು ಮುಂದಾಗಿದ್ದಾರೆ.

ನೂತನ ಮನೆಗೆ ಪ್ರವೇಶಿಸಲಿರುವ ಹಿನ್ನೆಲೆ ಈಗಾಗಲೇ ಮನೆಗೆ ಸುಣ್ಣ ಬಣ್ಣ ಹೊಡೆದು ಸಿದ್ಧಮಾಡಲಾಗಿದೆ. ಸಿಬ್ಬಂದಿ ಇಂದು ಮನೆ ಬಾಗಿಲಿಗೆ ಹೂ ಕಟ್ಟಿ ಪೂಜೆ ನೆರವೇರಿಸಿದ್ದಾರೆ. ಸಿದ್ದರಾಮಯ್ಯ ಕುಟುಂಬಸ್ಥರು ಮನೆ ಪ್ರವೇಶಕ್ಕೂ ಮುನ್ನ ಆರ್ಚಕರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ. ಇಂದು ಪೂಜೆ ನೆರವೇರಿದ್ದು, ಇನ್ನೆರಡು ದಿನಗಳಲ್ಲಿ ಹೊಸ ಮನೆಗೆ ಬರಲಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಸಿಎಂ ಯಡಿಯೂರಪ್ಪಗೆ ಕಾವೇರಿ ನಿವಾಸವನ್ನ ಬಿಟ್ಟು ಕೊಟ್ಟಿದ್ದಾರೆ. ಸುಮಾರು 6.5 ವರ್ಷಗಳ ಕಾಲ ವಾಸ್ತವ್ಯ ಹೂಡಿದ್ದ ನಿವಾಸ ತೊರೆದು ಹೊಸ ನಿವಾಸಕ್ಕೆ ಗೃಹ ಪ್ರವೇಶ ಮಾಡಲಿದ್ದಾರೆ.

ನೂತನ ನಿವಾಸಕ್ಕೆ ಆಗಮಿಸುತ್ತಿದ್ದಂತೆಯೇ ಸಿದ್ದು ಗರಂ: ನೂತನ ನಿವಾಸಕ್ಕೆ ಪೂಜೆಗೆ ಆಗಮಿಸುತ್ತಿದ್ದಂತೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ. ಮಾಧ್ಯಮದವರನ್ನ ಗೇಟ್ ಒಳಗಡೆ ಬಿಟ್ಟಿದ್ದಕ್ಕೆ ಸಿದ್ದು ಸಿಡಿಮಿಡಿಗೊಂಡಿದ್ದಾರೆ. ಎಲ್ಲರೂ ಇಲ್ಲಿಂದ ಹೊರಡಿ ಎಂದು ಮಾಧ್ಯಮದವರಿಗೆ ಗದರಿದ್ದಾರೆ.

Published On - 1:10 pm, Wed, 29 January 20

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?