ಸತ್ಯಮೇವ ಜಯತೆ: ಹೈಕೋರ್ಟ್​ ಆದೇಶದ ಬಳಿಕ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಇಲ್ಲಿದೆ

ನಾನು ಯಾವುದೇ ತಪ್ಪು ಮಾಡಿಲ್ಲ. 40 ವರ್ಷದ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ. ಈ ಕಾನೂನು ಹೋರಾಟ ನನಗೇನು ಹೊಸದಲ್ಲ.. ಅದೇ ಛಲ.. ಅದೇ ಹೋರಾಟ.. ಪ್ರಾಸಿಕ್ಯೂಷನ್ ಕೊಟ್ಟಿರೋದೇ ಕಾನೂನು ಬಾಹಿರ ಎಂದು ವಾದಿಸುತ್ತಲೇ ಬಂದಿದ್ದ ಸಿಎಂ ಸಿದ್ದರಾಮಯ್ಯ, ಇಂದು ಪ್ರಾಸಿಕ್ಯೂಷನ್ ಪ್ರಶ್ನಿಸಿ ರಿಟ್ ಅರ್ಜಿ ಹಾಕಿದ್ದು, ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಇನ್ನು ಕೋರ್ಟ್​​ ಆದೇಶದ ಬಗ್ಗೆ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಸತ್ಯಮೇವ ಜಯತೆ: ಹೈಕೋರ್ಟ್​ ಆದೇಶದ ಬಳಿಕ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಇಲ್ಲಿದೆ
ಸಿದ್ದರಾಮಯ್ಯ

Updated on: Aug 19, 2024 | 8:57 PM

ಬೆಂಗಳೂರು, (ಆಗಸ್ಟ್ 19): ಮುಡಾ ಹಗರಣದಲ್ಲಿ (Muda Scam) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು(ಸೋಮವಾರ) ಹೈಕೋರ್ಟ್‌ನಲ್ಲಿ ನಡೆದಿದ್ದು, ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.29ರ ಮಧ್ಯಾಹ್ನ 2.30ಕ್ಕೆ ಮುಂದೂಡಿದರು. ಇದರೊಂದಿಗೆ ಮುಂದಿನ 10 ದಿನ ಸಿಎಂ ವಿರುದ್ಧ ಯಾವುದೇ ತನಿಖೆ, ಯಾವುದೇ ವಿಚಾರಣೆ ನಡೆಸುವಂತಿಲ್ಲ. ಯಾವುದೇ ಎಫ್ಐಆರ್ ದಾಖಲಾದ್ರೂ ಆಗಸ್ಟ್ 29ರವರೆಗೂ ಸಿಎಂರನ್ನ ಟಚ್ ಮಾಡಂಗಿಲ್ಲ. ಹೀಗಾಗಿಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಸಿದ್ದರಾಮಯ್ಯ, ಕೋರ್ಟ್​ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ್ದ, ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ. ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದಿದ್ದಾರೆ.

ಇದನ್ನೂ ಓದಿ: Muda Case: ಪ್ರಾಸಿಕ್ಯೂಷನ್​: ಬೀಸುವ ದೊಣ್ಣೆಯಿಂದ ಸಿದ್ದರಾಮಯ್ಯ ಪಾರು!


ಸಿಎಂ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಎರಡು ಅರ್ಜಿ ಸಲ್ಲಿಕೆ ಆಗಿತ್ತು. ನಾಳೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಒಂದ್ವೇಳೆ ವಿಚಾರಣೆ ನಡೆದಿದ್ರೆ ಸಿಎಂಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇತ್ತು. ಆದ್ರೆ ವಿಶೇಷ ಕೋರ್ಟ್‌ನ ವಿಚಾರಣೆ ಮುಂದೂಡುವಂತೆ ಹೈಕೋರ್ಟ್‌ ಸೂಚಿಸಿದ್ದು, ಆಗಸ್ಟ್‌ 29 ರವರೆಗೂ ಸಿಎಂಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಇದರೊಂದಿಗೆ ಮುಂದಿನ 10 ದಿನ ಸಿಎಂ ವಿರುದ್ಧ ಯಾವುದೇ ತನಿಖೆ, ಯಾವುದೇ ವಿಚಾರಣೆ ನಡೆಸುವಂತಿಲ್ಲ. ಯಾವುದೇ ಎಫ್ಐಆರ್ ದಾಖಲಾದ್ರೂ ಆಗಸ್ಟ್ 29ರವರೆಗೂ ಸಿಎಂರನ್ನ ಟಚ್ ಮಾಡಂಗಿಲ್ಲ.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:51 pm, Mon, 19 August 24

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us