AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಬದಲು ಜೈಪುರದಲ್ಲಿ ಇಳಿದ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ, ಆಗಿದ್ದೇನು?

ತಮ್ಮ ಎರಡನೇ ಅವಧಿಗೆ ಮೂರು ವರ್ಷಗಳ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಇಂದು (ಮೇ 28) ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಇದರೊಂದಿಗೆ ಸಿದ್ದರಾಮಯ್ಯವರ ರಾಜ್ಯಭಾರ ಅಂತ್ಯವಾಗಿದೆ. ಇನ್ನು ರಾಜೀನಾಮೆ ನೀಡುತ್ತಿದ್ದಂತೆಯೇ ಸಿದ್ದರಾಮಯ್ಯ ದೆಹಲಿ ವಿಮಾನ ಹತ್ತಿದ್ದಾರೆ. ಆದ್ರೆ, ವಿಮಾನ ದೆಹಲಿ ಬದಲು ಜೈಪುರದಲ್ಲಿ ಇಳಿಸಿದೆ.

ದೆಹಲಿ ಬದಲು ಜೈಪುರದಲ್ಲಿ ಇಳಿದ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ, ಆಗಿದ್ದೇನು?
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 28, 2026 | 8:54 PM

Share

ಬೆಂಗಳೂರು, (ಮೇ 28): ದೆಹಲಿಗೆ ಪ್ರಯಾಣಿಸುತ್ತಿದ್ದ ಸಿದ್ದರಾಮಯ್ಯ (Siddaramaiah) ಇದ್ದ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡ್ ಆಗಿರುವ ಘಟನೆ ನಡೆದಿದೆ. ಇಂದು (ಮೇ 28) ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸುದ್ದಿಗೋಷ್ಠಿ ಬಳಿಕ ಸಂಜೆ ಬೆಂಗಳೂರಿನ ಎಚ್​​​​​​ಎಎಲ್ ಏರ್​​ಪೋರ್ಟ್​​​​ನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುತ್ತಿದ್ದರು. ಆದ್ರೆ, ಮಾರ್ಗಮಧ್ಯೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ವಿಶೇಷ ವಿಮಾನ, ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡ್ ಆಗಿದೆ. ಇದರಿಂದ ಕೆಲವೊತ್ತು ಆತಂಕಕ್ಕೆ ಕಾರಣವಾಯ್ತು.

ಮುಖ್ಯಾಂಶಗಳು

  • ರಾಜೀನಾಮೆ ಬಳಿಕ ದೆಹಲಿಗೆ ತೆರಳುತ್ತಿದ್ದ ಸಿದ್ದರಾಮಯ್ಯನನ್ನು ಜೈಪುರದಲ್ಲಿ ಇಳಿಸಿದ ವಿಮಾನ
  • ದೆಹಲಿ ಬದಲು ಜೈಪುರದಲ್ಲಿ ಇಳಿದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ
  • ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಜೈಪುರದಲ್ಲಿ ವಿಮಾನ ಲ್ಯಾಂಡಿಂಗ್
  •  ಬೆಂಗಳೂರಿನ HAL ಏರ್​ಪೋರ್ಟ್​ನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟಿದ್ದ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೆ.ಜೆ.ಜಾರ್ಜ್, ಭೈರತಿ ಸುರೇಶ್, ಶಾಸಕ ಎ.ಎಸ್.ಪೊನ್ನಣ್ಣ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಯತೀಂದ್ರ ವಿಮಾನದಲ್ಲಿದ್ದರು. ಸದ್ಯ ಯಾವುದೇ ಅವಘಡ ಸಂಭವಿಸಿಲ್ಲ. ವಿಮಾನದಲ್ಲಿದ್ದವರು ಎಲ್ಲರೂ ಸುರಕ್ಷಿತವಾಗಿದ್ದಾರೆ.

ರಾಜೀನಾಮೆ ಬಳಿಕ ದಿಲ್ಲಿ ವಿಮಾನ ಹತ್ತಿದ ಸಿದ್ದರಾಮಯ್ಯ

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ್ಕಕೆ ರಾಜೀನಾಮೆ ಸಲ್ಲಿಸಿದ ಬಳಿಕ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಬಳಿಕ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಇಂದು (ಮೇ 28) ಸಂಜೆ ತಮ್ಮ ಆಪ್ತರ ಜೊತೆ ಬೆಂಗಳೂರಿನ ಎಚ್​​​ಎಎಲ್ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಯತ್ತ ಹೊರಟರು. ಆದ್ರೆ, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಪೈಲೆಟ್, ವಿಮಾನವನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿ ಬರುವಂತೆ ರಾಹುಲ್ ಗಾಂಧಿ ಅವರು ಸೂಚಿಸಿದ್ದರು. ಅದರಂತೆ ಸಿದ್ದರಾಮಯ್ಯ ದೆಹಲಿಯತ್ತ ಹೊರಟ್ಟಿದ್ದು, ಹೈಕಮಾಂಡ್ ನಾಯಕರ ಜೊತೆ ಮುಂದಿನ ಆಡಳಿತದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಂದರೆ ಯಾರ್ಯಾರು ಸಚಿವರಾಗಬೇಕು? ಯಾರನ್ನು ಉಪಮುಖ್ಯಮಂತ್ರಿ ಮಾಡಬೇಕು? ಕೆಪಿಸಿಸಿ ಜವಾಬ್ದಾರಿ ಯಾರಿಗೆ ನೀಡಬೇಕು? ಹೀಗೆ ಹಲವು ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯನವರ ಜತೆ ಚರ್ಚಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ
ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ
ವೈಭವ್ ಔಟಾದಾಗ ಕಾವ್ಯ ಮಾರನ್ ಏನು ಮಾಡಿದ್ರು ನೋಡಿ
ವೈಭವ್ ಔಟಾದಾಗ ಕಾವ್ಯ ಮಾರನ್ ಏನು ಮಾಡಿದ್ರು ನೋಡಿ
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!