AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮ್ ವಿಧಿವಶ

ಎರಡು ಬಾರಿ ಮೈಮುಲ್ ನಿರ್ದೇಶಕರಾಗಿದ್ದ ಕೆ.ಸಿ.ಬಲರಾಮ್ ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಾರ್ಚ್ 16ರಂದು ನಡೆದ ಮೈಮುಲ್ ಚುನಾವಣೆಯಲ್ಲಿ ಸೋಲು ಕಂಡಿದ್ದ ಕೆ.ಸಿ.ಬಲರಾಮ್, ಈ ಸೋಲಿನಿಂದಾಗಿ ಸಂಪೂರ್ಣವಾಗಿ ಮನನೊಂದಿದ್ದರು ಎಂದು ಮೂಲಗಳು ತಿಳಿಸಿವೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮ್ ವಿಧಿವಶ
ಕೆ.ಸಿ.ಬಲರಾಮ್
preethi shettigar
| Edited By: |

Updated on: Mar 20, 2021 | 1:48 PM

Share

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಕೆ.ಸಿ.ಬಲರಾಮ್ ವಿಧಿವಶರಾಗಿದ್ದಾರೆ. ಎರಡು ಬಾರಿ ಮೈಮುಲ್ ನಿರ್ದೇಶಕರಾಗಿದ್ದ ಕೆ.ಸಿ.ಬಲರಾಮ್ ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಾರ್ಚ್​ 16ರಂದು ನಡೆದ ಮೈಮುಲ್ ಚುನಾವಣೆಯಲ್ಲಿ ಸೋಲು ಕಂಡಿದ್ದ ಕೆ.ಸಿ.ಬಲರಾಮ್, ಈ ಸೋಲಿನಿಂದಾಗಿ ಸಂಪೂರ್ಣವಾಗಿ ಮನನೊಂದಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಅಂಗಗಳ ಒಕ್ಕೂಟ ನಿಯಮಿತದ (ಮೈಮುಲ್) ಚುನಾವಣೆಯಲ್ಲಿ ಕೂಡ ಕೆ.ಸಿ.ಬಲರಾಮ್ ಸ್ಪರ್ಧಿಸಿದ್ದರು. ಮೈಮುಲ್ ಆಡಳಿತ ಮಂಡಳಿಯ 15 ನಿರ್ದೇಶಕ ಸ್ಥಾನಗಳಿಗೆ ಮಾರ್ಚ್​ 16 ರಂದು ಚುನಾವಣೆ ನಡೆದಿತ್ತು. ಇಲ್ಲಿ ಅಡಳಿತ ಮಂಡಳಿಯ 15 ಸ್ಥಾನಗಳಿಗೆ 33 ಮಂದಿ ಕಣಕ್ಕೆ ಇಳಿದಿದ್ದು, ತೀವ್ರ ಪೈಪೋಟಿ ಕೂಡ ಇತ್ತು.

ಈ 15 ಮಂದಿಯಲ್ಲಿ ಮಾಜಿ ಅಧ್ಯಕ್ಷರಾದ ಕೆ.ಜಿ. ಮಹೇಶ್, ಎಸ್​.ಸಿದ್ದೇಗೌಡ, ಕೆ. ಉಮಾಶಂಕರ್, ಎ.ಟಿ ಸೋಮಶೇಖರ್, ಮಾಜಿ ಉಪಾಧ್ಯಕ್ಷ ಬಿ.ಎನ್. ಸದಾನಂದ, ಕೆ.ಸಿ.ಕುಮಾರ್, ಕೆ. ಈರೇಗೌಡ, ಪಿ.ಎಂ. ಪ್ರಸನ್ನ ಜೊತೆಗೆ ಮಾಜಿ ನಿರ್ದೇಶಕರಾದ ಕೆ.ಸಿ ಬಲರಾಮ್ ಕೂಡ ಕಣಕ್ಕೆ ಇಳಿದಿದ್ದು, ಈ ಸ್ಪರ್ಧೆಯಲ್ಲಿ ಸೋಲು ಕಂಡಿದ್ದರು.  ಇಂದು ಬೆಳಿಗ್ಗೆ ಕೆ.ಸಿ ಬಲರಾಮ್ ವಿಧಿವಶರಾಗಿದ್ದಾರೆ.

ಇದನ್ನೂ ಓದಿ:

ಕನ್ನಡದ ಖ್ಯಾತ ಕವಿ, ಸಾಹಿತಿ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರು ವಿಧಿವಶ

Yakshagana | ಯಕ್ಷರಂಗದ ಸಿಡಿಲಮರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಪುತ್ತೂರು ಶ್ರೀಧರ ಭಂಡಾರಿ ವಿಧಿವಶ

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್