ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCP,TSP ಅನುದಾನ ಬಳಕೆ

| Updated By: ರಮೇಶ್ ಬಿ. ಜವಳಗೇರಾ

Updated on: Jul 05, 2024 | 6:15 PM

ಎಸ್ ಸಿಪಿ/ಟಿಎಸ್‌ಪಿ ಯೋಜನೆಯ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸುತ್ತಲೇ ಇದೆ. ಈ ಬಗ್ಗೆ ಈ ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮಾಡಿದೆ. ಇದರ ಮಧ್ಯಯೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ, ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್​ಸಿಪಿ, ಟಿಎಸ್​ಪಿ ಹಣ ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಎಷ್ಟೆಷ್ಟು ಹಣ ಯಾವ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ.

ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCP,TSP ಅನುದಾನ ಬಳಕೆ
ಐದು ಗ್ಯಾರಂಟಿ
Follow us on

ಬೆಂಗಳೂರು, (ಜುಲೈ 05): ಸಿದ್ದರಾಮಯ್ಯ ಸರ್ಕಾರ ಮಹತ್ವದ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಬೇರೆ ಯೋಜನೆಗಳಿಗೆ ಮೀಸಲಿಟ್ಟಿದ್ದ ಅನುದಾನವನ್ನು ಈ ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಪೂರಕವೆಂಬಂತೆ ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್​ಸಿಪಿ, ಟಿಎಸ್​ಪಿ ಹಣ ಬಳಕೆ ಮಾಡಿಕೊಂಡಿರುವುದು ಕಂಡುಬಂದಿದೆ. ಹೌದು… 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂಪಾಯಿ ಅನುದಾನದಲ್ಲಿ 14,282 ಕೋಟಿ ರೂಪಾಯಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ.

ಇನ್ನು ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCP, TSP ಅನುದಾನವನ್ನು ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಬಳಕೆ ಮಾಡಲಾಗಿದೆ ಎನ್ನುವುದನ್ನು ನೋಡುವುದಾದರೆ.

  • ಗೃಹಲಕ್ಷ್ಮೀ ಯೋಜನೆಗೆ SCP, TSPಯಿಂದ 7881 ಕೋಟಿ ರೂ. ಬಳಕೆ.
  • ಭಾಗ್ಯಲಕ್ಷ್ಮೀ ಯೋಜನೆಗೆ 70.28 ಕೋಟಿ ರೂ.
  • ಗೃಹಜ್ಯೋತಿ ಯೋಜನೆಗೆ 2585.93 ಕೋಟಿ ರೂ.
  • ಅನ್ನಭಾಗ್ಯ ಯೋಜನೆಗೆ 448.15 ಕೋಟಿ ರೂ. ಹಣ
  • ಅನ್ನಭಾಗ್ಯ ಯೋಜನೆಗೆ 2187 ಕೋಟಿ ರೂ.
  • ಶಕ್ತಿ ಯೋಜನೆಗೆ 1451.45 ಕೋಟಿ ರೂ.
  • ಯುವನಿಧಿ ಯೋಜನೆಗೆ 175.50 ಕೋಟಿ ರೂ.

ಇದನ್ನೂ ಓದಿ; ಎಸ್​ಸಿಪಿ, ಟಿಎಸ್​ಪಿ ಹಣದ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ, ಸಿಎಂರಿಂದ ದಲಿತರ ಹಿತ ಕಡೆಗಣನೆ: ಮಾಜಿ ಸಿಎಂ ಬೊಮ್ಮಾಯಿ

ಎಸ್​ಸಿಪಿ, ಟಿಎಸ್​ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಎಸ್​ಸಿಪಿ, ಟಿಎಸ್​ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ವಿರೋಧಿಸಿ 2023 ಆಗಸ್ಟ್​ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಬೃಹತ್ ಪ್ರತಿಭಟನೆ ಮಾಡಿತ್ತು.

ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದಿಯಾಗಿ ಮಂತ್ರಿ, ಕಾಂಗ್ರೆಸ್ ಶಾಸಕರು ಬಿಜೆಪಿಯ ಆರೋಪವನ್ನು ಅಲ್ಲಗಳೆದಿದ್ದರು. ಆದ್ರೆ, ಇದೀಗ ಸಿದ್ದರಾಮಯ್ಯ ಸರ್ಕಾರ, ಎಸ್​ಸಿಪಿ, ಟಿಎಸ್​ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್​ ಮಾಡಿದೆ. ಈ ಸಂಬಂಧ ಬಿಜೆಪಿ ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೀದಿಗಳಿದು ಪ್ರತಿಭಟನೆ ಮಾಡುವ ಎಲ್ಲಾ ಸಾಧ್ಯತೆಗಳುದ್ದು, ಇದು ಯಾವ ಹಂತಕ್ಕೆ ಹೋಗಿ ಮುಟ್ಟಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Fri, 5 July 24