AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ

ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋವನ್ನು ಸಹ ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ಬಗ್ಗೆ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ.

ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ
ರಮೇಶ್ ಬಿ. ಜವಳಗೇರಾ
|

Updated on: Jul 08, 2024 | 7:59 PM

Share

ಬೆಂಗಳೂರು, (ಜುಲೈ 08): ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್ 26ರಂದು ಸಂವಿಧಾನ ದಿನಾಚರಣೆ ದಿನದಂದು ಡಾ.ಬಿ.ಆರ್ ಅಂಬೇಡ್ಕ‌ರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ವಿಜಯ್‌ಕುಮಾರ್‌ ಎಚ್‌.ಬಿ. ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ಮಾತ್ರವಲ್ಲದೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು.

ಇದನ್ನೂ ಓದಿ: ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಬಾಬಾ ಸಾಹೇಬರ ಭಾವಚಿತ್ರ ಕಡ್ಡಾಯ

ಅದೇ ರೀತಿ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ