AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲ; ಜನರಿಗೆ ಮೋದಿ ಗ್ಯಾರಂಟಿ ಮೇಲೆ ವಿಶ್ವಾಸ: ದೇವೇಂದ್ರ ಫಡ್ನವಿಸ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಭಾಗಿಯಾದರು. ಸಂಸದ ನಳಿನ್ ಕುಮಾರ್ ಕಟೀಲ್, ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಬಿಜೆಪಿ ಶಾಸಕರು, ನಾಯಕರು ಭಾಗಿ, ಬೂತ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲ; ಜನರಿಗೆ ಮೋದಿ ಗ್ಯಾರಂಟಿ ಮೇಲೆ ವಿಶ್ವಾಸ: ದೇವೇಂದ್ರ ಫಡ್ನವಿಸ್
ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲಗೊಂಡಿದೆ; ಜನರಿಗೆ ಮೋದಿ ಗ್ಯಾರಂಟಿ ಮೇಲೆ ವಿಶ್ವಾಸ ಇದೆ ಎಂದ ದೇವೇಂದ್ರ ಫಡ್ನವಿಸ್
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on: Mar 12, 2024 | 2:45 PM

ಮಂಗಳೂರು, ಮಾ.12: ಕರ್ನಾಟಕದಲ್ಲಿ ಸಿದ್ದರಾಮಯ್ಯ (Siddaramaiah) ಸರ್ಕಾರದ ಗ್ಯಾರಂಟಿ (Guarantees) ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ (Narendra Modi) ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangaluru) ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು.

ಇಂದು ನಮ್ಮ ಪ್ರಮುಖ ಬೂತ್ ಕಾರ್ಯಕರ್ತರು ಜೊತೆಗಿದ್ದೀರಿ. ಮಂಗಳೂರು ಮುಂಬೈನ ಬಹಳ ದೊಡ್ಡ ಸಂಪರ್ಕ ಸೇತು. ಮಂಗಳೂರಿನ ಹಲವರು ಮುಂಬೈನಲ್ಲಿ ಬಿಜೆಪಿ ಬೆಳೆಸಲು ಕೆಲಸ ಮಾಡುತ್ತಾ ಇದ್ದಾರೆ. ಅಲ್ಲಿನ ಕುಟುಂಬಗಳೇ ಇವತ್ತು ನನಗೆ ಇಲ್ಲಿ ಸಿಕ್ಕಿದೆ. 2024ರ ಚುನಾವಣೆ ಹೊಸ ಇತಿಹಾಸ ನಿರ್ಮಿಸುವ ಚುನಾವಣೆಯಾಗಿದೆ ಎಂದರು.

ಮೋದಿ ಗ್ಯಾರಂಟಿ ಕಾಂಗ್ರೆಸ್​ನ ಗ್ಯಾರಂಟಿಗಳಲ್ಲ

ನಾವು ಸರ್ಕಾರಗಳನ್ನ ಐದು ವರ್ಷಗಳಿಗೊಮ್ಮೆ ಚುನಾಯಿಸುತ್ತೇವೆ. ಆದರೆ ಮೋದಿ 10 ವರ್ಷಗಳಲ್ಲಿ ನೂರು ವರ್ಷದ ಕೆಲಸ ಮಾಡಿದ್ದಾರೆ. ಮೋದಿ ಗ್ಯಾರಂಟಿ ಕಾಂಗ್ರೆಸ್​ನ ಗ್ಯಾರಂಟಿಗಳಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳು ಯಾವುದೂ ಪೂರ್ಣವಾಗಿಲ್ಲ. ಜನರನ್ನ ಮೂರ್ಖರನ್ನಾಗಿ ಮಾಡಿ ಸಿದ್ದರಾಮಯ್ಯ ಸರ್ಕಾರ ಬಂದಿದೆ ಎಂದರು.

ಇದನ್ನೂ ಓದಿ: ಮೋದಿ ಜೀ ಭರವಸೆಯನ್ನು ಪೂರೈಸಿದ್ದಾರೆ: ಸಿಎಎ ಸ್ವಾಗತಿಸಿದ ಪಾಕ್ ಮಹಿಳೆ ಸೀಮಾ ಹೈದರ್

ಮೋದಿ ಗ್ಯಾರಂಟಿ ಅನ್ನೋದು ಗ್ಯಾರಂಟಿಗಳ ಗ್ಯಾರಂಟಿ. ನರೇಂದ್ರ ಮೋದಿಯವರ ಟ್ರಾಕ್ ರೆಕಾರ್ಡ್ ನೋಡಿದರೆ ಗೊತ್ತಾಗುತ್ತದೆ. ಕೋಟ್ಯಾಂತರ ಜನರಿಗೆ ನೀರು, ವಿದ್ಯುತ್, ಶೌಚಾಲಯ ಸಿಕ್ಕಿದೆ. ಮೋದಿಯವರ ಯೋಜನೆ ಪಡೆದುಕೊಳ್ಳಲು ಯಾರಿಗೂ ಒಂದು ರೂಪಾಯಿ ಕೊಡುವುದು ಬೇಡ. ಆ ಯೋಜನೆಗಳು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತದೆ ಎಂದರು.

ನಿನ್ನೆ ಮೋದಿ ಅವರು ಒಂದು ಮಿಸೈಲ್ ಬಗ್ಗೆ ಟ್ವೀಟ್ ಮಾಡಿದರು. ಹಾಗದರೆ ಈ ಮಿಸೈಲ್​ಗಳಿಂದ ನಮಗೇನು ಲಾಭ ಅಂತ ಕೆಲವರು ಕೇಳಬಹುದು. ಆದರೆ ಭಾರತದ ತಾಕತ್ತನ್ನ ಬೇರೆ ದೇಶಗಳ ಎದುರು ನಾವು ತೋರಿಸುತ್ತಿದ್ದೇವೆ. ಚೀನಾ, ಅಮೆರಿಕಾದ ಸರಿಸಮಾನವಾಗಿ ಭಾರತದ ಶಕ್ತಿಯುತವಾಗುತ್ತಿದೆ ಎಂದರು.

ದೇಶ ವಿರೋಧಿಗಳಿಗೆ ಸಿದ್ದರಾಮಯ್ಯ ಸರ್ಕಾರ ಬೆಂಬಲ

ದೇಶ ವಿರೋಧಿ ಜನರಿಗೆ ಸಿದ್ದರಾಮಯ್ಯ ಸರ್ಕಾರ ಬೆಂಬಲ ಕೊಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನ ಬೆಂಬಲಿಸುವ ಸರ್ಕಾರ ಎಂಥದ್ದು? ಕರ್ನಾಟಕದಲ್ಲಿ ಕಾಂಗ್ರೆಸ್ ಬಂದ ನಂತರ ದೇಶವಿರೋಧಿಗಳಿಗೆ ಬಲ ಬಂದಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಆಗಿದೆ. ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಎಲ್ಲಾ ರಾಜ್ಯಗಳು ಬೆಂಬಲ ಕೊಡಲಿದೆ. ವೋಟ್ ಬ್ಯಾಂಕ್​ಗಾಗಿ ದೇಶದ್ರೋಹಿಗಳನ್ನ ಯಾರೂ ಬೆಂಬಲಿಸಬಾರದು. ಯಾವುದೇ ದೇಶ ವಿರೋಧಿ ಘಟನೆಗಳನ್ನು ಆಯಾ ಸರ್ಕಾರಗಳು ಖಂಡಿಸಬೇಕು ಎಂದರು.

ನಾವು ಬಿಜೆಪಿ ವೋಟ್ ಹಾಕುತ್ತಿಲ್ಲ, ಭಾರತಕ್ಕಾಗಿ ಮತ ಚಲಾಯಿಸುತ್ತಿದ್ದೇವೆ. ನರೇಂದ್ರ ಮೋದಿ ನಾಯಕತ್ವದಲ್ಲಿ ನಾವು ಉತ್ತರ ಕೊಡಬೇಕಿದೆ. ಬೂತ್ ಮಟ್ಟದಲ್ಲಿ ನಾವು ಪಕ್ಷ ಗಟ್ಟಿ ಮಾಡಬೇಕು. ಪ್ರತೀ ಬೂತ್​ಗಳಲ್ಲಿ ಮೋದಿ ಸರ್ಕಾರದ ಫಲಾನುಭವಿಗಳನ್ನ ಭೇಟಿ ಮಾಡುವಂತೆ ಸಲಹೆ ನೀಡಿದರು.

ನಳಿನ್ ಕುಮಾರ್‌ ಕಟೀಲ್ ಅವರ ಅವಧಿಯಲ್ಲಿ ಬಹಳ ಅಭಿವೃದ್ಧಿಯಾಗಿದೆ. ಅವರು ಜನರ ನಡುವೆ ಇರೋ ಪಕ್ಷದ ಒಬ್ಬ ನಾಯಕ ಎಂದು ಹೇಳಿದ ಫಡ್ನವಿಸ್, ನಮ್ಮ ಸ್ವಾಭಿಮಾನಕ್ಕಾದ ಅಪಮಾನದಿಂದ ಹೊರಬಂದು ರಾಮಮಂದಿರ ನಿರ್ಮಿಸಲಾಗಿದೆ. ನವ ಭಾರತ ನಿರ್ಮಿಸುವ ಕೆಲಸಕ್ಕೆ ನರೇಂದ್ರ ಮೋದಿ ಪಣ ತೊಟ್ಟಿದ್ದಾರೆ. ಹೀಗಾಗಿ ನಾವೆಲ್ಲ ಅವರ ಕಾರ್ಯಕ್ಕೆ ಕೈ ಜೋಡಿಸಬೇಕಿದೆ. ಕರ್ನಾಟಕದಲ್ಲಿ ಸರ್ಕಾರ ಇಲ್ಲದಿದ್ದರೂ ಈ ಬಾರಿ ಯಾವುದೇ ಕ್ಷೇತ್ರದಲ್ಲಿ ಬಿಜೆಪಿ ಸೋಲಬಾರದು. ಬಿಜೆಪಿ ಮತ್ತು ಮೈತ್ರಿ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಬೇಕು. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಎಲ್ಲಾ ಕಡೆ ಮೋದಿ ಹವಾ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್