ಡ್ರಗ್ಸ್ ಪ್ರಕರಣ ಸಂಬಂಧ ನಾನು ಯಾರ ಹೆಸರೂ ಹೇಳಲ್ಲ: ಸಿದ್ದರಾಮಯ್ಯ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಶಾಂತ್​ ಸಂಬರ್ಗಿ ಅವರು, ಈ ದಂಧೆಯಲ್ಲಿ ಜಮೀರ್ ಅಹಮದ್ ಖಾನ್ ಹೆಸರನ್ನು ಪರೋಕ್ಷವಾಗಿ ಉಲ್ಲೇಖ ಮಾಡಿರುವ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ ನಾನು ಯಾರ ಹೆಸರೂ ಹೇಳಲ್ಲ, ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಜರುಗಿಸಲಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಬಿಜೆಪಿಯವರು ನಟಿ ರಾಗಿಣಿಗೂ ನಮ್ಮ ಪಕ್ಷಕ್ಕೂ ಯಾವುದೆ ಸಂಬಂಧವಿಲ್ಲ ಅಂತಾರೆ. ಆದರೆ ರಾಗಿಣಿ ಅವರು ಬೈಎಲೆಕ್ಷನ್‌ನಲ್ಲಿ […]

ಡ್ರಗ್ಸ್ ಪ್ರಕರಣ ಸಂಬಂಧ ನಾನು ಯಾರ ಹೆಸರೂ ಹೇಳಲ್ಲ:  ಸಿದ್ದರಾಮಯ್ಯ
ಸಾಧು ಶ್ರೀನಾಥ್​

Updated on: Sep 07, 2020 | 2:28 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್​ ನಂಟು ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಶಾಂತ್​ ಸಂಬರ್ಗಿ ಅವರು, ಈ ದಂಧೆಯಲ್ಲಿ ಜಮೀರ್ ಅಹಮದ್ ಖಾನ್ ಹೆಸರನ್ನು ಪರೋಕ್ಷವಾಗಿ ಉಲ್ಲೇಖ ಮಾಡಿರುವ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಡ್ರಗ್ಸ್ ಪ್ರಕರಣ ಸಂಬಂಧ ನಾನು ಯಾರ ಹೆಸರೂ ಹೇಳಲ್ಲ, ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಜರುಗಿಸಲಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಬಿಜೆಪಿಯವರು ನಟಿ ರಾಗಿಣಿಗೂ ನಮ್ಮ ಪಕ್ಷಕ್ಕೂ ಯಾವುದೆ ಸಂಬಂಧವಿಲ್ಲ ಅಂತಾರೆ. ಆದರೆ ರಾಗಿಣಿ ಅವರು ಬೈಎಲೆಕ್ಷನ್‌ನಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ.

ಅವರು ಪ್ರಚಾರ ಮಾಡಿದ್ದಾರೆಂಬುದಕ್ಕೆ ಫೋಟೋಗಳಿವೆ. ಹೀಗಾಗಿ ಡ್ರಗ್ಸ್ ದಂಧೆಯಲ್ಲಿ ರಾಜಕಾರಣಿಗಳು, ಉದ್ಯಮಿಗಳು, ಸಿನಿಮಾ ರಂಗದವರು ಯಾರೇ ಇದ್ದರೂ ಕ್ರಮಕೈಗೊಳ್ಳಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us