AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಅಡ್ಜಸ್ಟ್‌ಮೆಂಟ್‌ ರಾಜಕಾರಣ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಗರಂ!

ಲೋಕಸಭಾ ಚುನಾವಣೆ ಹೊತ್ತಲ್ಲೇ ಮತ್ತೆ ಹೊಂದಾಣಿಕೆ ರಾಜಕಾರಣ ಸದ್ದು ಮಾಡುತ್ತಿದೆ. ಈ ಬಾರಿ ಮೈಸೂರು ಲೋಕಸಭಾ ಟಿಕೆಟ್​ ಪ್ರತಾಪ್ ಸಿಂಹಗಿಲ್ಲ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಮೈಸೂರಿನಲ್ಲಿ ಸಿದ್ದರಾಮಯ್ಯ ಜೊತೆ ಯಡಿಯೂರಪ್ಪ-ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಪೋಸ್ಟ್ ಹಾಕಿ ಕಿಡಿಕಾರಿದ್ದಾರೆ. ಇದೀಗ ಇದಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಮೈಸೂರಿನಲ್ಲಿ ಅಡ್ಜಸ್ಟ್‌ಮೆಂಟ್‌ ರಾಜಕಾರಣ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಗರಂ!
ಸಿದ್ದರಾಮಯ್ಯ
TV9 Web
| Edited By: |

Updated on: Mar 12, 2024 | 3:59 PM

Share

ಚಾಮರಾಜನಗರ, (ಮಾರ್ಚ್ 12): ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು(Mysore-Kodagu) ಲೋಕಸಭಾ(Loka Saba) ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಂಸದ ಪ್ರತಾಪ್‌ ಸಿಂಹ(PrathapSimha) ಬದಲಿಗೆ ರಾಜವಂಶಸ್ಥ ಯದುವೀರ್‌ ಒಡೆಯರ್‌(Yaduveer) ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಇದರ ಮಧ್ಯೆ ಸಿದ್ದರಾಮಯ್ಯ ( Siddaramaiah) ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಡುವಿನ ಹೊಂದಾಣಿಕೆ ರಾಜಕಾರಣ ಎಂಬ ಆರೋಪಗಳು ವ್ಯಕ್ತವಾಗಿವೆ. ಇದಕ್ಕೆ ಇದೀಗ ಸ್ವತಃ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಯಾವನೋ ಒಬ್ಬ ದಾರಿಯಲ್ಲಿ ಹೋಗುವವರು ಹೇಳಿದ್ರೆ ಆಗಲ್ಲ ಎಂದು ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ನಡುವೆ ಹೊಂದಾಣಿಕೆ ರಾಜಕಾರಣ (Adjustment Politics) ನಡೆದಿದೆ ಎಂಬ ಸಂಸದ ಪ್ರತಾಪ್‌ಸಿಂಹ ಅವರ ಆರೋಪದ ಬಗ್ಗೆ ಚಾಮರಾಜನಗರದ ಹೆಗ್ಗವಾಡಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಯಾವನೋ ಒಬ್ಬ ದಾರಿಯಲ್ಲಿ ಹೋಗುವವರು ಹೇಳಿದ್ರೆ ಆಗಲ್ಲ. ಈಗ ಪ್ರತಾಪ್‌ ಸಿಂಹ ಅವರಿಗೆ ಬಿಜೆಪಿಯವರು ಟಿಕೆಟ್‌ ನಿರಾಕರಿಸಿದ್ದಾರಲ್ಲಾ ಯಾಕೆ? ನಾನು ಹೊಂದಾಣಿಕೆ ಮಾಡಿದ್ನಾ? ಯದುವೀರ್ ಒಡೆಯರ್‌ (Yaduveer Odeyar) ಅವರಿಗೆ ನಾನು ಬಿಜೆಪಿಗೆ ಹೋಗಿ ನಿಲ್ಲು ಅಂತ ಹೇಳಿದ್ನಾ? ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆ ಅಂತ ಅವರಿಗೆ ಟಿಕೆಟ್ ಕೊಡ್ತಿಲ್ಲ ಅನ್ಸುತ್ತೆ. ಅದನ್ನು ಬಿಟ್ಟು ನೀವೇ ಸೃಷ್ಟಿ ಮಾಡಿ ಹೊಂದಾಣಿಕೆ ರಾಜಕೀಯ ಅಂತ ಹೇಳಿದ್ರೆ ಹೇಗೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಹೊಂದಾಣಿಕೆ ರಾಜಕೀಯದ ಕಳ್ಳ-ಮಳ್ಳ; ಬಿಎಸ್​ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ತಿರುಗಿಬಿದ್ದ ನೆಟ್ಟಿಗರು, ಕಾರಣ ಇಲ್ಲಿದೆ

ʻನನಗೆ ಟಿಕೆಟ್ ಕೊಟ್ರೆ ಸಿಎಂ ಕುರ್ಚಿ ಹೋಗುತ್ತದೆʼ ಎನ್ನುವ ಪ್ರತಾಪ್ ಸಿಂಹ ಹೇಳಿಕೆಗೆ ಲೇವಡಿಯ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಓಹ್… ಪ್ರತಾಪ್‌ ಸಿಂಹ ಎರಡು ಸಲ ಎಂಪಿ ಆಗಿದ್ದ ಅಲ್ವಾ? ಯಾಕೆ ನನ್ನ ಕುರ್ಚಿ ಅಲುಗಾಡಲಿಲ್ಲ.? ನಮಗೆ ಬಿಜೆಪಿ ಯಾರನ್ನ ಅಭ್ಯರ್ಥಿ ಮಾಡ್ತಾರೆ ಎನ್ನುವ ಪ್ರಶ್ನೆ ಇಲ್ಲವೇ ಇಲ್ಲ. ನಾವು ಬಿಜೆಪಿಯನ್ನು ಸೋಲಿಸಬೇಕು ಅಷ್ಟೇ. ಎಂದ ಅವರು, ನಾವು ಕಾಂಗ್ರೆಸ್ ಬಡವರ ಪರ ನೀಡಿರುವ ಅಭಿವೃದ್ಧಿಗಳ ಮೇಲೆ ಅವಲಂಬನೆ ಆಗಿದ್ದೇವೆ ಹೊರತು ಬಿಜೆಪಿ ಅಭ್ಯರ್ಥಿ ಮೇಲೆ ಅಲ್ಲ. ನಾವು ಬಿಜೆಪಿ ನ ಸೋಲಿಸುತ್ತೇವೆ ಅಷ್ಟೆ ಎಂದರು.

ಸಿಎಎ ಜಾರಿಗೆ ಬಗ್ಗೆ ಸಿಎಂ ಹೇಳಿದ್ದೇನು?

ಸಿಎಎ ಜಾರಿಯ ಹಿಂದೆ ರಾಜಕೀಯ ಉದ್ದೇಶ ಇದೆ. ಚುನಾವಣೆಗಾಗಿ ಅದನ್ನು ಜಾರಿ ಮಾಡಿದ್ದಾರೆ. ಅವರು ಇಷ್ಟು ದಿನ ಯಾಕೆ ಮಾಡಿರಲಿಲ್ಲ.? ಎಂದು ಕೇಳಿದ ಸಿದ್ದರಾಮಯ್ಯ ಅವರು, ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ನಮ್ಮ ವಿರೋಧ ಇದೆ ಎಂದರು.

ಕಾಂಗ್ರೆಸ್ ಸರ್ಕಾರ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಕೊಡುತ್ತಿದೆ ಎನ್ನುವ ಆರ್. ಅಶೋಕ್ ಆರೋಪಕ್ಕೂ ಪ್ರತ್ಯುತ್ತರ ನೀಡಿದ ಸಿದ್ದರಾಮಯ್ಯ ಅವರು, ʻʻಅದೆಲ್ಲ ಸುಳ್ಳು. ನೀರು ಬಿಡುವುದಕ್ಕೆ ನೀರು ಎಲ್ಲಿದೆ? ನಾವು ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಕೊಡಲ್ಲ. ಅವರು ಸಹ ನಮ್ಮಿಂದ ನೀರು ಕೇಳಿಲ್ಲ. ತಮಿಳುನಾಡಿನವರೂ ಕೇಳಿದ್ರೂ ಕೊಡಲ್ಲ, ಕೇಂದ್ರದವರು ಹೇಳಿದ್ರೂ ಕೊಡಲ್ಲ. ಅಲ್ಲದೆ ನೀರು ಎಲ್ಲಿದೆ ಬಿಡುವುದಕ್ಕೆ ಡ್ಯಾಂ ಖಾಲಿ ಇದೆ ಎಂದರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ