‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ’

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ? ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ […]

‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ
ಸಾಧು ಶ್ರೀನಾಥ್​

Updated on: Nov 17, 2019 | 4:11 PM

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ?

ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ ಆಗಿ ಕ್ಷೇತ್ರ ಅಭಿವೃದ್ಧಿ ಮಾಡ್ತಾರಾ? ಇದೆಲ್ಲಾ ಚುನಾವಣೆಗೆ ಮಾತ್ರ ಮಾತನಾಡುವ ಮಾತುಗಳು. ಎಚ್.ವಿಶ್ವನಾಥ್ ಸಹ ಚುನಾವಣೆಗಾಗಿ ಹುಣಸೂರು ಜಿಲ್ಲೆ ಬಗ್ಗೆ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ ಎಂದು ಹೆಚ್.ವಿಶ್ವನಾಥ್ ವಿರುದ್ಧವೂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Published On - 4:11 pm, Sun, 17 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us