ಸಿಎಂ ಸಿದ್ದರಾಮಯ್ಯಗೆ ಬಂಡೆಯಿಂದಲೇ ಡೇಂಜರ್:​​​​ ಪರೋಕ್ಷವಾಗಿ ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್​ ಡೇಂಜರ್​​​​ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಅಂತಾ ಕೇಳಲ್ಲ. ಅವರು ರಾಜೀನಾಮೆ ಕೊಡುವುದೂ ಇಲ್ಲ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಬಂಡೆಯಿಂದಲೇ ಡೇಂಜರ್:​​​​ ಪರೋಕ್ಷವಾಗಿ ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿ
ಸಿಎಂ ಸಿದ್ದರಾಮಯ್ಯಗೆ ಬಂಡೆಯಿಂದಲೇ ಡೇಂಜರ್:​​​​ ಪರೋಕ್ಷವಾಗಿ ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 18, 2024 | 9:03 PM

ಬೆಂಗಳೂರು, ಆಗಸ್ಟ್​ 18: ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಬಂಡೆಯಿಂದಲೇ ಡೇಂಜರ್​ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೆಸರೇಳದೇ ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ (H. D. Kumaraswamy) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊನ್ನೆ ಕೇರಳದಲ್ಲಿ ಮಳೆ ಬಂದು ಭೂಕುಸಿತ ಆಗಿದೆಯಲ್ಲಾ, ಆವಾಗ ಬಂಡೆಗಳಿಂದ ಡೇಂಜರ್​​ ಆಗಿದ್ದು ಎಂದು ಟಾಂಗ್​ ಕೊಟ್ಟಿದ್ದಾರೆ.

ನಿಮ್ಮ ಹಾಗೆ ನಮ್ಮ ಕಾರ್ಯಕರ್ತರು ಬೀದಿಯಲ್ಲಿ ಬೆಂಕಿ ಹಾಕಿ ಎನ್ನಲಿಲ್ಲ. ಜಂತಕಲ್​​ ಮೈನಿಂಗ್​​ ಪ್ರಕರಣದ ಬಗ್ಗೆ ಹೈಕೋರ್ಟ್​ ಆದೇಶ ನೀಡಿದೆ. ಸಾಯಿ ವೆಂಕಟೇಶ್ವರ ಹಗರಣದ ಬಗ್ಗೆಯೂ ತನಿಖೆಮಾಡಿ ಅಂದ್ರು. ಬೇಕಾದರೆ ಸುಪ್ರೀಂಕೋರ್ಟ್​ಗೆ ಹೋಗಬಹುದು, ಯಾರೂ ಬೇಡ ಅಂದ್ರು. ನನ್ನನ್ನು ಹೆದರಿಸಲು ಮಾತನಾಡುತ್ತಿದ್ದೀರಿ, ಯಾಕೆ ಈ ಡ್ರಾಮಾಗಳು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಸಷನ್​ಗೆ ಅನುಮತಿ: ಪ್ರತಿಭಟನೆ ಕಾವು, ನಗರದಾದ್ಯಂತ ಪೊಲೀಸ್​ ಕಟ್ಟೆಚ್ಚರ

ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಕ್ಕೆ ಪ್ರತಿಭಟನೆ ನಡೆಸುತ್ತಿದ್ದೀರಿ. ನಿನ್ನೆಯಿಂದ ಸಂವಿಧಾನ ಬಿಕ್ಕಟ್ಟು ಅಂತಾ ಪ್ರತಿಭಟನೆ ಮಾಡಿದ್ದೀರಿ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಅಂತ ಪ್ರತಿಭಟನೆ ಮಾಡುತ್ತಿದ್ದೀರಿ. ಬಿಜೆಪಿನವರು ಸರ್ವನಾಶ ಮಾಡಲು ಹೊರಟಿದ್ದಾರೆಂದು ಹೇಳಿದ್ದಾರೆ. ಪಾರ್ಲಿಮೆಂಟ್​ಗೆ ಸಂವಿಧಾನ ಪುಸ್ತಕ ಹಿಡಿದು ಬಂದರಲ್ಲಪ್ಪ. ಪ್ರಮಾಣ ವಚನ ಸ್ವೀಕರಿಸಲು ಇದೇನಾ ಸಂವಿಧಾನ ರಕ್ಷಣೆ. ನಿನ್ನೆಯಿಂದ ಪ್ರಾರಂಭ ಮಾಡಿದ್ದೀರಲ್ಲಾ. ಸಿದ್ದರಾಮಯ್ಯನವರೇ ಇದೇ ನನಗೂ ನಿಮಗೂ ಇರೋ ವ್ಯತ್ಯಾಸ ಎಂದಿದ್ದಾರೆ.

ಇದನ್ನೂ ಓದಿ: ಆಗಸ್ಟ್ 23 ಸಿದ್ದರಾಮಯ್ಯ ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

ಸಿದ್ದರಾಮಯ್ಯ ಮಂತ್ರಿಮಂಡಲದ ಎಲ್ಲಾ ಸದಸ್ಯರಿಗೂ ಹೇಳುತ್ತೀನಿ. ನಿನ್ನೆಯಿಂದ ಎಲ್ಲರಿಗೂ ಕುಮಾರಸ್ವಾಮಿ ಅಂತ ಧ್ಯಾನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ, ಎಲ್ಲಾ ಮಂತ್ರಿಗಳು ನನ್ನ ಧ್ಯಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಪಾದಯಾತ್ರೆಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ

ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಅಂತಾ ಕೇಳಲ್ಲ. ಅವರು ರಾಜೀನಾಮೆ ಕೊಡುವುದೂ ಇಲ್ಲ. ಅದು ನನಗೆ ಗೊತ್ತಿದೆ. ಕಾನೂನು ಅಂತಾ ಒಂದಿದೆ. ಯಾವ ಹಂತದಲ್ಲಿ ಏನು ತೀರ್ಮಾನ ಆಗಬೇಕೋ ಅದು ಆಗುತ್ತೆ. ನಮ್ಮ ಪಾದಯಾತ್ರೆಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ಜನತೆಗೆ ಒಂದು ರಾಜಕೀಯ ಸಂದೇಶ ಕೊಡಬೇಕಿತ್ತು ಕೊಟ್ಟಿದ್ದೇವೆ. ನಮ್ಮ ಪಾದಯಾತ್ರೆಯಿಂದ ಇದೆಲ್ಲಾ ಆಗಿದೆ ಅಂತ ನಾನು ಹೇಳಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.