Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ? ಇಂದು ಸಿಎಂ ಜತೆಗಿನ ಸಭೆಯಲ್ಲಿ ಫೈನಲ್

ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸ್ತಿರೋ ಜನರಿಗೆ ಶಾಕ್. ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆಯ ಬಿಸಿ?

ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ  ದರ ಏರಿಕೆ ಬಿಸಿ? ಇಂದು ಸಿಎಂ ಜತೆಗಿನ ಸಭೆಯಲ್ಲಿ ಫೈನಲ್
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on:Jul 14, 2023 | 7:59 AM

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಮಧ್ಯೆ ದಿನಸಿ, ತರಕಾರಿ ಬೆಲೆ ಗಗನಕ್ಕೇರಿವೆ. ಇದರ ನಡುವೆ ಇದೀಗ ಹಾಲಿನ ದರ(nandini milk )ಏರಿಕೆ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಭಾರೀ ಚರ್ಚೆಯಾಗಿತ್ತಿದೆ. ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಗೆ ಎಲ್ಲಾ ಹಾಲು ಮಾರಾಟ ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿವೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಜೊತೆ ಚರ್ಚಿಸಲು ಕೆಎಂಎಪ್​ ಮುಂದಾಗಿದೆ. ಹೌದು..ಇಂದು (ಜುಲೈ 14) KMF ನಿರ್ದೇಶಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: Milk Price Hike: ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಸಚಿವ ಕೆ ವೆಂಕಟೇಶ್

ರಾಜ್ಯದಲ್ಲಿ ಕಳೆದ ಎರಡು ವರ್ಷದಿಂದ ಹಾಲಿದ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ 15 ಒಕ್ಕೂಟಗಳು ನಷ್ಟದ ಪರಿಸ್ಥಿತಿಯಲ್ಲಿವೆ. ಸದ್ಯ ಹಾಲು ಮಾರಾಟ ಪ್ರತಿ ಲೀಟರ್ 39 ರೂಪಾಯಿ ಇದೆ ( ಲೀ ಟೋನ್ಡ್ ಹಾಲು ). ಇದರಲ್ಲಿ ಹಾಲು ಉತ್ಪಾದಕರ ಸಂಘಕ್ಕೆ 35.50 ಪೈಸೆ ಹೋಗುತ್ತಿದೆ. ಮಾರಾಟಗಾರರಿಗೆ ಪ್ರತಿ ಲೀಟರ್ ಗೆ 2 ರೂ ಕಮೀಷನ್. ಉಳಿದ 1.50 ಪೈಸೆ ಲಾಭದಿಂದ ವ್ಯವಹಾರ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವುದು ಒಕ್ಕೂಟಗಳ ಮಾತು.

ಪ್ರತಿದಿನ ಬೆಂಗಳೂರಿಗೆ 13 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ಇದರಿಂದ ಪ್ರತಿದಿನ 15 ರಿಂದ 16 ಲಕ್ಷ ಪ್ರತಿನಿತ್ಯ ನಷ್ಟವಾಗುತ್ತೆ. ಪ್ರತಿ ಲೀ ಗೆ ಮಾರಾಟ ದರದ ಮೇಲೆ 5 ರುಪಾಯಿ ಹೆಚ್ಚಳ ಮಾಡಲು ಅವಕಾಶ ಕೊಡಬೇಕು. ಹೆಚ್ಚಳ ಮಾಡದಿದ್ದರೆ ಒಕ್ಕೂಟಗಳು ಸಾಲದ ಸುಳಿಯಲ್ಲಿ ಸಿಲುಕುತ್ತವೆ. ಹೀಗಾಗಿ ಈ ಬಾರಿ ಹಾಲಿನ ದರ ಪರಿಷ್ಕರಣೆ ಮಾಡುವಂತೆ ಒಕ್ಕೂಟಗಳು ಸರ್ಕಾರಕ್ಕೆ ಒತ್ತಾಯ ಮಾಡಿವೆ.

ಪ್ರತೀ ಲೀಟರ್ ಗೆ ಕನಿಷ್ಠ 5 ರೂ ಏರಿಕೆಗೆ ಪ್ರಸ್ತಾವನೆ ಇಟ್ಟಿರುವ ಬಗ್ಗೆ ಕೆಎಂಎಫ್​ ಅಧ್ಯಕ್ಷ ಭೀಮಾ ನಾಯಕ್ ಹಾಗೂ ಎಲ್ಲ ಮಹಾಮಂಡಳದ ನಿರ್ದೇಶಕರ ಜೊತೆ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಸಿಎಂ ಸಭೆ ಬಳಿಕ ಹಾಲಿನ ದರ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:58 am, Fri, 14 July 23

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ