ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3,000 ಕೋಟಿ ರೂ. ಅಕ್ರಮ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ

ಬಿಜೆಪಿ ಆಡಳಿತದಲ್ಲಿನ ಅಕ್ರಮಗಳ ಬಯಲಿಗೆಳೆಯಲು ಕಾಂಗ್ರೆಸ್ ಸರ್ಕಾರ ತನಿಖೆಗಿಳಿದಿದೆ.ಸಿದ್ದರಾಮಯ್ಯ ಅವರು ಮೊದಲಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿನ ಅಕ್ರಮದ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3,000 ಕೋಟಿ ರೂ. ಅಕ್ರಮ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
|

Updated on: May 30, 2023 | 12:07 PM

ಬೆಂಗಳೂರು: ಬಿಜೆಪಿ (BJP) ಆಡಳಿತದಲ್ಲಾದ ಹಗರಣದ ಅಳಕ್ಕೂ ಸರ್ಕಾರ ಕೈಹಾಕಲು ಮುಂದಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆದ ಅಕ್ರಮಗಳ ಕೂಲಂಕಷ ತನಿಖೆಗೆ ಕಾಂಗ್ರೆಸ್(Congress0 ಸರ್ಕಾರ ಉತ್ಸುಕ ತೋರಿದ್ದು, ಎಲ್ಲಾ ರೀತಿಯಲ್ಲೂ ತನಿಖೆ ನಡೆಸಲು ಸಿದ್ಧತೆ ನಡೆಸಿದೆ. ಇದಕ್ಕೆ ಪೂರಕವೆಂಬಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ( Kalyan Karnataka Development Board) ಅನುದಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎರಡ್ಮೂರು ವರ್ಷಗಳಿಂದ 3000 ಕೋಟಿ ರೂ. ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಇಲಾಖಾ ತನಿಖೆ ನಡೆಸಲು ಆದೇಶಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಅದರಂತೆ ಇದೀಗ ಸಿದ್ದರಾಮಯ್ಯ ಅವರು ಈ ಕೂಡಲೇ ಈ ವಿಷಯದ ಕುರಿತು ನಿರ್ದಾಕ್ಷಿಣ ಇಲಾಖಾ ತನಿಖೆ ನಡೆಸಲು ಆದೇಶ ಹೊರಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಎಲ್ಲೆಲ್ಲಿ ನಿಯಮಬಾಹಿರವಾಗಿ ಅನುದಾನಗಳನ್ನು ವಿನಿಯೋಗಿಸಲಾಗಿದೆ? ಯಾವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬುದರ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ತಪ್ಪಿತಸ್ಕರ ವಿವರಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಇದನ್ನೂ ಓದಿ: ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ: ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಪತ್ರ ಮೂಲಕ ಸಿಎಂ ಗಮನಕ್ಕೆ ತಂದಿರುವ ಪ್ರಿಯಾಂಕ್ ಖರ್ಗೆ

ಇನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಸಂಘದಿಂದ ಅನುದಾನ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿದ್ದರಾಮಯ್ಯನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದರು. ಸಿಎಂ ವಿವೇಚನ ಕೋಟಾದಲ್ಲಿ ಅಭಿವೃದ್ಧಿ ಮಂಡಳಿ ಸಿದ್ಧಪಡಿಸಿದ ಕ್ರಿಯಾ ಯೋಜನೆಯಲ್ಲಿ ಅಕ್ರಮ ಆಗಿದೆ. ಅಭಿವೃದ್ಧಿ ಮಂಡಳಿಯ ಕಳಪೆ ಕಾಮಗಾರಿ ಬಗ್ಗೆ ಸಿಎಜಿ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ಮಾಡುವ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರು.

ಅಧಿಕಾರ ವ್ಯಾಪ್ತಿ ಮೀರಿ 327 ಕೋಟಿ ರೂ. ದೇಶಿ ಹಸುಗಳ ಸಾಕಾಣಿಕೆಗೆ ಪ್ರೋತ್ಸಾಹ ಧನ ನೀಡಿರುವ ಮಾಹಿತಿ ಇದೆ. ಈಗಾಗಲೇ ಹಸು ಹೊಂದಿರುವವರಿಗೆ ಅನುದಾನ ನೀಡಿದಂತೆ ದಾಖಲೆ ಸೃಷ್ಟಿಸಲಾಗಿದೆ. ಅಧ್ಯಕ್ಷರು, ಕಾರ್ಯದರ್ಶಿಗಳ ವ್ಯಾಪ್ತಿಗೆ ಇಲ್ಲದಿದ್ದರೂ ಖಾಸಗಿ ಅನುದಾನಿತ ಶಾಲೆಗಳಿಗೆ 327 ಕೋಟಿ ಮಂಜೂರು ಮಾಡಲಾಗಿದೆ. ಅಧಿಕಾರ ವ್ಯಾಪ್ತಿ ಮೀರಿ ಹೊಲಿಗೆ ತರಬೇತಿಗೆ 2 ಕೋಟಿ ವೆಚ್ಚ ಮಾಡಲಾಗಿದೆ.ಸರ್ಕಾರದ ಅನುಮೋದನೆ ಇಲ್ಲದೆ ಕೊರೋನಾದಿಂದ ಮೃತ ಖಾಸಗಿ ಶಿಕ್ಷಕರಿಗೆ 50 ಸಾವಿರ ಪರಿಹಾರ ನೀಡಲಾಗಿದೆ. ಲೋಕೋಪಯೋಗಿ ಬಾಡಿಗೆ ಕಟ್ಟಡಗಳಿಗೆ ನಿಯಮ ಬಾಹಿರವಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗಿದೆ. ಒಂದು ಜಿಲ್ಲೆಗೆ ಒದಗಿಸುವ ಅನುದಾನ ಸೇಡಂ ತಾಲೂಕು ಒಂದಕ್ಕೆ ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಬಳಸಲಾಗಿದೆ. ಮೇಲ್ಕಂಡ ವಿಚಾರಗಳಿಗೆ ಸೂಕ್ತ ತನಿಖೆಗೆ ಆದೇಶಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಮೂಲಕ ಸಿದ್ದರಾಮಯ್ಯನವರಿಗೆ ಮಾಹಿತಿ ನೀಡಿದ್ದರು.

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ