AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐ ಆ್ಯಮ್​ ಟೋಟಲಿ ಫಿಟ್ -ಸಿದ್ದರಾಮಯ್ಯ

ಬೆಂಗಳೂರು: ಆಂಜಿಯೋಪ್ಲಾಸ್ಟಿ​ ಚಿಕಿತ್ಸೆ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ, ನನಗೆ ಯಾವುದೇ ತೊಂದರೆ ಇಲ್ಲ. ನಾನು ಇವತ್ತೇ ದಿಸ್ಚಾರ್ಜ್​​ ಆಗಬೇಕು ಅಂದುಕೊಂಡಿದ್ದೆ. ಮನೆಗೆ ಹೋದ್ರೆ ಜನ ಜಾಸ್ತಿ ಬರಲು ಶುರು ಮಾಡುತ್ತಾರೆ, ಆದ್ದರಿಂದ ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕು ಎಂದರು. 19 ವರ್ಷಗಳ ಹಿಂದೆ 2 ರಕ್ತನಾಳಗಳು ಬ್ಲಾಕ್​ ಆಗಿದ್ದವು. ಹೀಗಾಗಿ ಆಗ ಸ್ಟೆಂಟ್​ ಹಾಕಿಸಿದ್ದೆ. ಬೇರೆಯವರಿಗೆಲ್ಲ ಐದಾರು ವರ್ಷಕ್ಕೆ ಮತ್ತೆ ಸಮಸ್ಯೆ […]

ಐ ಆ್ಯಮ್​ ಟೋಟಲಿ ಫಿಟ್ -ಸಿದ್ದರಾಮಯ್ಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 12, 2019 | 8:22 PM

Share

ಬೆಂಗಳೂರು: ಆಂಜಿಯೋಪ್ಲಾಸ್ಟಿ​ ಚಿಕಿತ್ಸೆ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ, ನನಗೆ ಯಾವುದೇ ತೊಂದರೆ ಇಲ್ಲ. ನಾನು ಇವತ್ತೇ ದಿಸ್ಚಾರ್ಜ್​​ ಆಗಬೇಕು ಅಂದುಕೊಂಡಿದ್ದೆ. ಮನೆಗೆ ಹೋದ್ರೆ ಜನ ಜಾಸ್ತಿ ಬರಲು ಶುರು ಮಾಡುತ್ತಾರೆ, ಆದ್ದರಿಂದ ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕು ಎಂದರು.

19 ವರ್ಷಗಳ ಹಿಂದೆ 2 ರಕ್ತನಾಳಗಳು ಬ್ಲಾಕ್​ ಆಗಿದ್ದವು. ಹೀಗಾಗಿ ಆಗ ಸ್ಟೆಂಟ್​ ಹಾಕಿಸಿದ್ದೆ. ಬೇರೆಯವರಿಗೆಲ್ಲ ಐದಾರು ವರ್ಷಕ್ಕೆ ಮತ್ತೆ ಸಮಸ್ಯೆ ಕಾಣಿಸಿಕೊಳ್ಳತ್ತೆ. ಆದ್ರೆ ನನಗೆ 19 ವರ್ಷ ಆದ್ರೂ ಯಾವುದೇ ಸಮಸ್ಯೆ ಆಗಿರಲಿಲ್ಲ. ಈಗ ನನಗೆ ಯಾವುದೇ ತೊಂದರೆ ಅಗಿಲ್ಲ. ನಾನು ಆರೋಗ್ಯವಾಗಿದ್ದೇನೆ, ಐ ಆ್ಯಮ್​ ಟೋಟಲಿ ಫಿಟ್. ಯಾರೂ ಈಗ ಆಸ್ಪತ್ರೆಗೆ ಬರಬೇಡಿ. ಮನೆಗೆ ಬಂದ ನಂತರ ಆರೋಗ್ಯ ವಿಚಾರಿಸುವುದಕ್ಕೆ ಬನ್ನಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಬಿಎಸ್​ವೈ: ಸಿದ್ದರಾಮಯ್ಯಗೆ ಆಂಜಿಯೋಪ್ಲಾಸ್ಟಿ​ ಚಿಕಿತ್ಸೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಪ್ರತಿಕ್ರಿಯಿಸಿದ ಬಿಎಸ್​ವೈ, 2-3 ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರ ಸೂಚಿಸಿದ್ದಾರೆ. ರಾಜಕಾರಣವೇ ಬೇರೆ, ಸ್ನೇಹವೇ ಬೇರೆ ಎಂದರು. ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು.

Published On - 8:21 pm, Thu, 12 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು