AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐ ಆ್ಯಮ್​ ಟೋಟಲಿ ಫಿಟ್ -ಸಿದ್ದರಾಮಯ್ಯ

ಬೆಂಗಳೂರು: ಆಂಜಿಯೋಪ್ಲಾಸ್ಟಿ​ ಚಿಕಿತ್ಸೆ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ, ನನಗೆ ಯಾವುದೇ ತೊಂದರೆ ಇಲ್ಲ. ನಾನು ಇವತ್ತೇ ದಿಸ್ಚಾರ್ಜ್​​ ಆಗಬೇಕು ಅಂದುಕೊಂಡಿದ್ದೆ. ಮನೆಗೆ ಹೋದ್ರೆ ಜನ ಜಾಸ್ತಿ ಬರಲು ಶುರು ಮಾಡುತ್ತಾರೆ, ಆದ್ದರಿಂದ ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕು ಎಂದರು. 19 ವರ್ಷಗಳ ಹಿಂದೆ 2 ರಕ್ತನಾಳಗಳು ಬ್ಲಾಕ್​ ಆಗಿದ್ದವು. ಹೀಗಾಗಿ ಆಗ ಸ್ಟೆಂಟ್​ ಹಾಕಿಸಿದ್ದೆ. ಬೇರೆಯವರಿಗೆಲ್ಲ ಐದಾರು ವರ್ಷಕ್ಕೆ ಮತ್ತೆ ಸಮಸ್ಯೆ […]

ಐ ಆ್ಯಮ್​ ಟೋಟಲಿ ಫಿಟ್ -ಸಿದ್ದರಾಮಯ್ಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 12, 2019 | 8:22 PM

Share

ಬೆಂಗಳೂರು: ಆಂಜಿಯೋಪ್ಲಾಸ್ಟಿ​ ಚಿಕಿತ್ಸೆ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ, ನನಗೆ ಯಾವುದೇ ತೊಂದರೆ ಇಲ್ಲ. ನಾನು ಇವತ್ತೇ ದಿಸ್ಚಾರ್ಜ್​​ ಆಗಬೇಕು ಅಂದುಕೊಂಡಿದ್ದೆ. ಮನೆಗೆ ಹೋದ್ರೆ ಜನ ಜಾಸ್ತಿ ಬರಲು ಶುರು ಮಾಡುತ್ತಾರೆ, ಆದ್ದರಿಂದ ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕು ಎಂದರು.

19 ವರ್ಷಗಳ ಹಿಂದೆ 2 ರಕ್ತನಾಳಗಳು ಬ್ಲಾಕ್​ ಆಗಿದ್ದವು. ಹೀಗಾಗಿ ಆಗ ಸ್ಟೆಂಟ್​ ಹಾಕಿಸಿದ್ದೆ. ಬೇರೆಯವರಿಗೆಲ್ಲ ಐದಾರು ವರ್ಷಕ್ಕೆ ಮತ್ತೆ ಸಮಸ್ಯೆ ಕಾಣಿಸಿಕೊಳ್ಳತ್ತೆ. ಆದ್ರೆ ನನಗೆ 19 ವರ್ಷ ಆದ್ರೂ ಯಾವುದೇ ಸಮಸ್ಯೆ ಆಗಿರಲಿಲ್ಲ. ಈಗ ನನಗೆ ಯಾವುದೇ ತೊಂದರೆ ಅಗಿಲ್ಲ. ನಾನು ಆರೋಗ್ಯವಾಗಿದ್ದೇನೆ, ಐ ಆ್ಯಮ್​ ಟೋಟಲಿ ಫಿಟ್. ಯಾರೂ ಈಗ ಆಸ್ಪತ್ರೆಗೆ ಬರಬೇಡಿ. ಮನೆಗೆ ಬಂದ ನಂತರ ಆರೋಗ್ಯ ವಿಚಾರಿಸುವುದಕ್ಕೆ ಬನ್ನಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಬಿಎಸ್​ವೈ: ಸಿದ್ದರಾಮಯ್ಯಗೆ ಆಂಜಿಯೋಪ್ಲಾಸ್ಟಿ​ ಚಿಕಿತ್ಸೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಪ್ರತಿಕ್ರಿಯಿಸಿದ ಬಿಎಸ್​ವೈ, 2-3 ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರ ಸೂಚಿಸಿದ್ದಾರೆ. ರಾಜಕಾರಣವೇ ಬೇರೆ, ಸ್ನೇಹವೇ ಬೇರೆ ಎಂದರು. ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು.

Published On - 8:21 pm, Thu, 12 December 19

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?