AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ವಿದೇಶಕ್ಕೆ ಹೋದಾಗ ಅದರ ಬಾಗಿಲು ಮಾತ್ರ ನೋಡಿದ್ದೆ -ಸಿದ್ದರಾಮಯ್ಯರ ‘ಕ್ಯಾಸಿನೋ’ ಬಾತ್​

[lazy-load-videos-and-sticky-control id=”P88lRiiFbmY”] ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಶಾಸಕ ಜಮೀರ್ ಹೆಸರು ಕೇಳಿಬಂದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ರಾಜಕೀಯ ದುರುದ್ದೇಶದಿಂದ ತನಿಖೆಯನ್ನ ಮಾಡಬಾರದು. ಡ್ರಗ್ಸ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದಿದ್ದಾರೆ. ಡ್ರಗ್ಸ್ ಪ್ರಕರಣ ಈಗ ಬೆಳಕಿಗೆ ಬಂದಿರುವುದಲ್ಲ. ಬಹಳ ವರ್ಷಗಳಿಂದ ಇದೆ. ಡ್ರಗ್ಸ್ ಬಗ್ಗೆ ತನಿಖೆಯಾಗುತ್ತಿದೆ. ಹೀಗಾಗಿ, ಅದು ನಿಷ್ಪಕ್ಷಪಾತವಾಗಿ ಆಗಲಿ. ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಇದನ್ನು ಮಾಡ್ತಿದ್ದಾರೆ ಎಂದು ಸಹ ಗುಡುಗಿದರು. ಜೊತೆಗೆ, ಜಮೀರ್ ಕೊಲಂಬೊಗೆ ಹೋಗುವುದು ಅಪರಾಧವಲ್ಲ. ಅವರು […]

ನಾನು ವಿದೇಶಕ್ಕೆ ಹೋದಾಗ ಅದರ ಬಾಗಿಲು ಮಾತ್ರ ನೋಡಿದ್ದೆ -ಸಿದ್ದರಾಮಯ್ಯರ ‘ಕ್ಯಾಸಿನೋ’ ಬಾತ್​
ಸಾಧು ಶ್ರೀನಾಥ್​
|

Updated on:Sep 13, 2020 | 7:03 PM

Share

[lazy-load-videos-and-sticky-control id=”P88lRiiFbmY”]

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಶಾಸಕ ಜಮೀರ್ ಹೆಸರು ಕೇಳಿಬಂದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ರಾಜಕೀಯ ದುರುದ್ದೇಶದಿಂದ ತನಿಖೆಯನ್ನ ಮಾಡಬಾರದು. ಡ್ರಗ್ಸ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದಿದ್ದಾರೆ.

ಡ್ರಗ್ಸ್ ಪ್ರಕರಣ ಈಗ ಬೆಳಕಿಗೆ ಬಂದಿರುವುದಲ್ಲ. ಬಹಳ ವರ್ಷಗಳಿಂದ ಇದೆ. ಡ್ರಗ್ಸ್ ಬಗ್ಗೆ ತನಿಖೆಯಾಗುತ್ತಿದೆ. ಹೀಗಾಗಿ, ಅದು ನಿಷ್ಪಕ್ಷಪಾತವಾಗಿ ಆಗಲಿ. ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಇದನ್ನು ಮಾಡ್ತಿದ್ದಾರೆ ಎಂದು ಸಹ ಗುಡುಗಿದರು. ಜೊತೆಗೆ, ಜಮೀರ್ ಕೊಲಂಬೊಗೆ ಹೋಗುವುದು ಅಪರಾಧವಲ್ಲ. ಅವರು ಡ್ರಗ್ಸ್ ಜಾಲದಲ್ಲಿ ಇದ್ದಾರಾ, ಅದು ಗೊತ್ತಿದ್ಯಾ? ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಅವರು ಕ್ಯಾಸಿನೋಗೆ ಹೋಗಿದ್ರೋ ಇಲ್ವೋ ಗೊತ್ತಿಲ್ಲ. ನಾನು ವಿದೇಶಕ್ಕೆ ಹೋದಾಗ ಅದರ ಬಾಗಿಲು ಮಾತ್ರ ನೋಡಿದ್ದೆ. ಜಮೀರ್ ಈ ಜಾಲದಲ್ಲಿದ್ದಾರೆಂದು ಸಂಬರಗಿ ಏನಾದರೂ ಹೇಳಿದ್ದಾರಾ? ಅಂತಾ ಪ್ರಶ್ನಿಸಿದರು. ಡ್ರಗ್ಸ್ ದಂಧೆಯಲ್ಲಿ ಫಾಝಿಲ್ ಇದ್ದಾರೆಂದು ಹೇಳಿದ್ದಾರೆ. ಆದ್ದರಿಂದ ಶೇಖ್ ಫಾಝಿಲ್ ವಿರುದ್ಧ ಬೇಕಿದ್ದರೆ ಕ್ರಮ ಕೈಗೊಳ್ಳಲಿ ಅಂತಾ ಹೇಳಿದ್ದಾರೆ.

‘ಪ್ರಶಾಂತ್ ಸಂಬರಗಿ ಬಿಜೆಪಿ ನಾಯಕರ ಜೊತೆ ಇಲ್ವಾ?’ ಫೋಟೋಗಳಲ್ಲಿ ನನ್ನ ಜೊತೆಯೂ ಒಬ್ಬ ಕಳ್ಳ ಇರುತ್ತಾನೆ. ಹಾಗಂತ ನನ್ನನ್ನು ಕಳ್ಳ ಎಂದು ಹೇಳೋಕೆ ಆಗುತ್ತಾ? ಪ್ರಶಾಂತ್ ಸಂಬರಗಿ ಬಿಜೆಪಿ ನಾಯಕರ ಜೊತೆ ಇಲ್ವಾ? ಹಾಗಂತ ನಾವು ಅವರ ವಿರುದ್ಧ ಆರೋಪಿಸಲು ಆಗುತ್ತಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಶಾಸಕ ಜಮೀರ್ ಅಹ್ಮದ್ ನನ್ನನ್ನು ಭೇಟಿಯಾಗಿದ್ದರು. ಆಗ ಏನಪ್ಪಾ ನಿನ್ನ ಮೇಲೆ ಆರೋಪ ಎಂದು ಕೇಳಿದ್ದೇನೆ. ತನ್ನ ತಪ್ಪು ಏನೂ ಇಲ್ಲವೆಂದು ಅವರು ನನಗೆ ತಿಳಿಸಿದ್ದಾರೆ. ನೀವು ಸಂಬರಗಿ, ಜಮೀರ್ ಅವರನ್ನೇ ಕೇಳಿ. ಡ್ರಗ್ಸ್ ಜಾಲದಲ್ಲಿ ‌ಯಾರಿದ್ದಾರೆ ಅವರ ಮೇಲೆ ಕ್ರಮತೆಗೆದುಕೊಳ್ಳಲಿ. ಅದು ಬಿಟ್ಟು ರಾಜಕೀಯ ಉದ್ದೇಶದಿಂದ ತಪ್ಪು ಹೊರಿಸೋದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Published On - 4:45 pm, Sun, 13 September 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?