Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ವಿದೇಶಕ್ಕೆ ಹೋದಾಗ ಅದರ ಬಾಗಿಲು ಮಾತ್ರ ನೋಡಿದ್ದೆ -ಸಿದ್ದರಾಮಯ್ಯರ ‘ಕ್ಯಾಸಿನೋ’ ಬಾತ್​

[lazy-load-videos-and-sticky-control id=”P88lRiiFbmY”] ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಶಾಸಕ ಜಮೀರ್ ಹೆಸರು ಕೇಳಿಬಂದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ರಾಜಕೀಯ ದುರುದ್ದೇಶದಿಂದ ತನಿಖೆಯನ್ನ ಮಾಡಬಾರದು. ಡ್ರಗ್ಸ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದಿದ್ದಾರೆ. ಡ್ರಗ್ಸ್ ಪ್ರಕರಣ ಈಗ ಬೆಳಕಿಗೆ ಬಂದಿರುವುದಲ್ಲ. ಬಹಳ ವರ್ಷಗಳಿಂದ ಇದೆ. ಡ್ರಗ್ಸ್ ಬಗ್ಗೆ ತನಿಖೆಯಾಗುತ್ತಿದೆ. ಹೀಗಾಗಿ, ಅದು ನಿಷ್ಪಕ್ಷಪಾತವಾಗಿ ಆಗಲಿ. ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಇದನ್ನು ಮಾಡ್ತಿದ್ದಾರೆ ಎಂದು ಸಹ ಗುಡುಗಿದರು. ಜೊತೆಗೆ, ಜಮೀರ್ ಕೊಲಂಬೊಗೆ ಹೋಗುವುದು ಅಪರಾಧವಲ್ಲ. ಅವರು […]

ನಾನು ವಿದೇಶಕ್ಕೆ ಹೋದಾಗ ಅದರ ಬಾಗಿಲು ಮಾತ್ರ ನೋಡಿದ್ದೆ -ಸಿದ್ದರಾಮಯ್ಯರ ‘ಕ್ಯಾಸಿನೋ’ ಬಾತ್​
Follow us
ಸಾಧು ಶ್ರೀನಾಥ್​
|

Updated on:Sep 13, 2020 | 7:03 PM

[lazy-load-videos-and-sticky-control id=”P88lRiiFbmY”]

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಶಾಸಕ ಜಮೀರ್ ಹೆಸರು ಕೇಳಿಬಂದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ರಾಜಕೀಯ ದುರುದ್ದೇಶದಿಂದ ತನಿಖೆಯನ್ನ ಮಾಡಬಾರದು. ಡ್ರಗ್ಸ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದಿದ್ದಾರೆ.

ಡ್ರಗ್ಸ್ ಪ್ರಕರಣ ಈಗ ಬೆಳಕಿಗೆ ಬಂದಿರುವುದಲ್ಲ. ಬಹಳ ವರ್ಷಗಳಿಂದ ಇದೆ. ಡ್ರಗ್ಸ್ ಬಗ್ಗೆ ತನಿಖೆಯಾಗುತ್ತಿದೆ. ಹೀಗಾಗಿ, ಅದು ನಿಷ್ಪಕ್ಷಪಾತವಾಗಿ ಆಗಲಿ. ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಇದನ್ನು ಮಾಡ್ತಿದ್ದಾರೆ ಎಂದು ಸಹ ಗುಡುಗಿದರು. ಜೊತೆಗೆ, ಜಮೀರ್ ಕೊಲಂಬೊಗೆ ಹೋಗುವುದು ಅಪರಾಧವಲ್ಲ. ಅವರು ಡ್ರಗ್ಸ್ ಜಾಲದಲ್ಲಿ ಇದ್ದಾರಾ, ಅದು ಗೊತ್ತಿದ್ಯಾ? ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಅವರು ಕ್ಯಾಸಿನೋಗೆ ಹೋಗಿದ್ರೋ ಇಲ್ವೋ ಗೊತ್ತಿಲ್ಲ. ನಾನು ವಿದೇಶಕ್ಕೆ ಹೋದಾಗ ಅದರ ಬಾಗಿಲು ಮಾತ್ರ ನೋಡಿದ್ದೆ. ಜಮೀರ್ ಈ ಜಾಲದಲ್ಲಿದ್ದಾರೆಂದು ಸಂಬರಗಿ ಏನಾದರೂ ಹೇಳಿದ್ದಾರಾ? ಅಂತಾ ಪ್ರಶ್ನಿಸಿದರು. ಡ್ರಗ್ಸ್ ದಂಧೆಯಲ್ಲಿ ಫಾಝಿಲ್ ಇದ್ದಾರೆಂದು ಹೇಳಿದ್ದಾರೆ. ಆದ್ದರಿಂದ ಶೇಖ್ ಫಾಝಿಲ್ ವಿರುದ್ಧ ಬೇಕಿದ್ದರೆ ಕ್ರಮ ಕೈಗೊಳ್ಳಲಿ ಅಂತಾ ಹೇಳಿದ್ದಾರೆ.

‘ಪ್ರಶಾಂತ್ ಸಂಬರಗಿ ಬಿಜೆಪಿ ನಾಯಕರ ಜೊತೆ ಇಲ್ವಾ?’ ಫೋಟೋಗಳಲ್ಲಿ ನನ್ನ ಜೊತೆಯೂ ಒಬ್ಬ ಕಳ್ಳ ಇರುತ್ತಾನೆ. ಹಾಗಂತ ನನ್ನನ್ನು ಕಳ್ಳ ಎಂದು ಹೇಳೋಕೆ ಆಗುತ್ತಾ? ಪ್ರಶಾಂತ್ ಸಂಬರಗಿ ಬಿಜೆಪಿ ನಾಯಕರ ಜೊತೆ ಇಲ್ವಾ? ಹಾಗಂತ ನಾವು ಅವರ ವಿರುದ್ಧ ಆರೋಪಿಸಲು ಆಗುತ್ತಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಶಾಸಕ ಜಮೀರ್ ಅಹ್ಮದ್ ನನ್ನನ್ನು ಭೇಟಿಯಾಗಿದ್ದರು. ಆಗ ಏನಪ್ಪಾ ನಿನ್ನ ಮೇಲೆ ಆರೋಪ ಎಂದು ಕೇಳಿದ್ದೇನೆ. ತನ್ನ ತಪ್ಪು ಏನೂ ಇಲ್ಲವೆಂದು ಅವರು ನನಗೆ ತಿಳಿಸಿದ್ದಾರೆ. ನೀವು ಸಂಬರಗಿ, ಜಮೀರ್ ಅವರನ್ನೇ ಕೇಳಿ. ಡ್ರಗ್ಸ್ ಜಾಲದಲ್ಲಿ ‌ಯಾರಿದ್ದಾರೆ ಅವರ ಮೇಲೆ ಕ್ರಮತೆಗೆದುಕೊಳ್ಳಲಿ. ಅದು ಬಿಟ್ಟು ರಾಜಕೀಯ ಉದ್ದೇಶದಿಂದ ತಪ್ಪು ಹೊರಿಸೋದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Published On - 4:45 pm, Sun, 13 September 20

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ