AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೋ ಹತ್ಯೆ ಪ್ರಹಸನ! ಗೋ ಹತ್ಯೆ ಮಾಡಿ ಅದನ್ನು ವಿದೇಶಕ್ಕೆ ರಫ್ತು ಮಾಡ್ತಿರೋರು ಯಾರು?’

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಮಾಡುವ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ಅದಕ್ಕೂ ಮುನ್ನ ಗೋಹತ್ಯೆ ಮಾಡುತ್ತಿರುವವರು ಯಾರು? ವಿದೇಶಕ್ಕೆ ರಫ್ತು ಮಾಡುತ್ತಿರುವವರು ಯಾರೆಂದು ಹೇಳಲಿ ಎಂದು ಸಿ.ಟಿ.ರವಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇರ ಪ್ರಶ್ನೆ ಹಾಕಿದ್ದಾರೆ. ಸಿ.ಟಿ.ರವಿ ಸುಮ್ಮನೆ ಬುರುಡೆ ಹೊಡೆಯುವುದು ಬಿಡಲಿ. ವಿಧಾನಸಭೆಯಲ್ಲಿ ಚರ್ಚೆಗೆ ಬರಲಿ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ‘ಗೋಹತ್ಯೆ ಮಾಡುತ್ತಿರುವವರು ಯಾರು?’ ಗೋ ಹತ್ಯೆ ನಿಷೇಧ ಮಾಡುವ ಮೊದಲು ಗೋ ಹತ್ಯೆ ಮಾಡಿ ವ್ಯಾಪಾರ ಮಾಡುತ್ತಿರುವವರು ಯಾರು ಅಂತ […]

‘ಗೋ ಹತ್ಯೆ ಪ್ರಹಸನ! ಗೋ ಹತ್ಯೆ ಮಾಡಿ ಅದನ್ನು ವಿದೇಶಕ್ಕೆ ರಫ್ತು ಮಾಡ್ತಿರೋರು ಯಾರು?’
ವಿಪಕ್ಷ ನಾಯಕ ಸಿದ್ದರಾಮಯ್ಯ
KUSHAL V
| Edited By: |

Updated on: Nov 21, 2020 | 3:19 PM

Share

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಮಾಡುವ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ಅದಕ್ಕೂ ಮುನ್ನ ಗೋಹತ್ಯೆ ಮಾಡುತ್ತಿರುವವರು ಯಾರು? ವಿದೇಶಕ್ಕೆ ರಫ್ತು ಮಾಡುತ್ತಿರುವವರು ಯಾರೆಂದು ಹೇಳಲಿ ಎಂದು ಸಿ.ಟಿ.ರವಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇರ ಪ್ರಶ್ನೆ ಹಾಕಿದ್ದಾರೆ.

ಸಿ.ಟಿ.ರವಿ ಸುಮ್ಮನೆ ಬುರುಡೆ ಹೊಡೆಯುವುದು ಬಿಡಲಿ. ವಿಧಾನಸಭೆಯಲ್ಲಿ ಚರ್ಚೆಗೆ ಬರಲಿ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ‘ಗೋಹತ್ಯೆ ಮಾಡುತ್ತಿರುವವರು ಯಾರು?’ ಗೋ ಹತ್ಯೆ ನಿಷೇಧ ಮಾಡುವ ಮೊದಲು ಗೋ ಹತ್ಯೆ ಮಾಡಿ ವ್ಯಾಪಾರ ಮಾಡುತ್ತಿರುವವರು ಯಾರು ಅಂತ ಹೇಳಲಿ. ವಿದೇಶಕ್ಕೆ ಗೋ ರಫ್ತು ಮಾಡುತ್ತಿರುವವರು ಯಾರು ಅಂತಾ ಸಿಟಿ ರವಿ ಹೇಳಲಿ ಎಂದು ಹೇಳಿದರು.

‘ಬಿಜೆಪಿಯವರು ಇನ್ನೂ ಮನುಸ್ಮೃತಿಯಲ್ಲಿಯೇ ಇದ್ದಾರೆ’ ಲವ್ ಜಿಹಾದ್ ತಡೆಗೆ ಮತಾಂತರ ನಿಷೇಧ ಕಾನೂನು ವಿಚಾರವಾಗಿಮತಾಂತರ ನಿಷೇಧ ಕಾನೂನು ಜಾರಿಗೆ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಬಿಜೆಪಿಯವರು ಇನ್ನೂ ಮನುಸ್ಮೃತಿಯಲ್ಲಿಯೇ ಇದ್ದಾರೆ. ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ. ನಾವು ಯಾರನ್ನ ಮದುವೆ ಆಗಬೇಕೆಂದು ಹೇಳಲು ನೀವ್ಯಾರು? ನೀವು ಹೇಳಿದವರನ್ನು ಮದುವೆ ಮಾಡಿಕೊಳ್ಳಲು ಸಾಧ್ಯವೇ? ಮದುವೆ ಆಗೋದು ಅವರವರ ವೈಯಕ್ತಿಕ ವಿಚಾರ ಎಂದು ಸಿದ್ದರಾಮಯ್ಯ ಹೇಳಿದರು. ಯಾರೂ ಯಾರ ಮೇಲೂ ಬಲವಂತ ಮಾಡೋಕೆ ಆಗಲ್ಲ ಎಂದು ಸಹ ಹೇಳಿದರು.

‘RSS​​ ಈಸ್​ ಮೈ ಫಸ್ಟ್​ ಪೊಲಿಟಿಕಲ್ ಅಪೋನೆಂಟ್​’ RSS​​ ಈಸ್​ ಮೈ ಫಸ್ಟ್​ ಪೊಲಿಟಿಕಲ್ ಅಪೋನೆಂಟ್. ಅವರ ನನ್ನ ಮೊದಲ ರಾಜಕೀಯ ಪ್ರತಿಸ್ಪರ್ಧಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಾನು RSS​ನ​ ವಿರೋಧಿ ಎಂದ ಸಿದ್ದರಾಮಯ್ಯ RSS​ ಬಗ್ಗೆ ನನಗೆ ಗೊತ್ತಿಲ್ಲವೆಂದು ಹೇಳುವ ಸಿ.ಟಿ.ರವಿ ಏನು ಕೇಶವ ಹೆಡಗೆವಾರ್​ ಜೊತೆ ಇದ್ನಾ? ಸಿ.ಟಿ.ರವಿ RSS ಸಂಸ್ಥಾಪಕ ಸದಸ್ಯನಾ? ಎಂದು ಖಾರವಾಗಿ ಪ್ರಶ್ನಿಸಿದರು.

ಕೇಶವ ಹೆಡಗೆವಾರ್ ಕಾಂಗ್ರೆಸ್​ ಪಕ್ಷದಲ್ಲಿ ಇದ್ದವರು. ಗೋಲ್ವಾಲ್ಕರ್​ ಆರೆಸ್ಸೆಸ್​ನ 2ನೇ ಸರಸಂಘಚಾಲಕರಾಗಿದ್ದರು. ಗೋಲ್ವಾಲ್ಕರ್ ಎಲ್ಲಿದ್ದರು, ಕಾಂಗ್ರೆಸ್​ನಲ್ಲಿ ಇದ್ದರು ತಾನೇ? ಜನಸಂಘ ಇದ್ದಾಗ ಸಿ.ಟಿ.ರವಿ ಎಲ್ಲಿದ್ದ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

‘ಬಸನಗೌಡ ತುರುವಿಹಾಳ್ ಕಾಂಗ್ರೆಸ್‌ನಿಂದ ಸ್ಪರ್ಧಿಸ್ತಾರೆ’ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಬಸನಗೌಡ ತುರುವಿಹಾಳ್ ಕಾಂಗ್ರೆಸ್‌ನಿಂದ ಸ್ಪರ್ಧಿಸ್ತಾರೆ. ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ನ.23ರಂದು ಸಭೆ ನಡೆಯಲಿದೆ. ಸಭೆಯಲ್ಲಿ ಬಸನಗೌಡ ತುರುವಿಹಾಳ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಬಸನಗೌಡ ತುರುವಿಹಾಳ್ ಈ ಬಾರಿ ಸ್ಪರ್ಧೆ ಮಾಡುತ್ತಾರೆ. ಮಸ್ಕಿಯಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ 2 ತಂಡ ರಚನೆ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಶಿರಾ ಕ್ಷೇತ್ರದಲ್ಲಿ ನಾವು ಹಣದ ಕೊರತೆಯಿಂದ ಸೋತೆವು. ಬಿಜೆಪಿಯವರು ಸಿಕ್ಕಾಪಟ್ಟೆ ಹಣ ಹಂಚಿಕೆ ಮಾಡಿದ್ದಾರೆ ಎಂದು ಸಹ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ