AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರದರ್ಶಕವೋ.. ಅಥವಾ ಭ್ರಷ್ಟಾಚಾರದ ಸುವಾಸನೆ ಅಂತ ಕರಿಬೇಕಾ? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಕೊವಿಡ್​ ಪರಿಕರ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸರ್ಕಾರದ ವಿರುದ್ಧ ಆರೋಪಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ವಾಕ್ಪ್ರಹಾರ ಮತ್ತಷ್ಟು ತೀಕ್ಷ್ಣಗೊಳಿಸಿದರು. ಕೇಂದ್ರ ಸರ್ಕಾರ PM Cares Fund ನಿಂದ ಇಡೀ ದೇಶಕ್ಕೆ 50,000 ವೆಂಟಿಲೇಟರ್ ಪೂರೈಕೆ ಮಾಡಿದ್ದಾರೆ. ಸುಮಾರು 2,000 ಕೋಟಿ ರೂಪಾಯಿ ವೆಚ್ಚದಲ್ಲಿ ನೀಡಿದ್ದಾರೆ. ಹೀಗಾಗಿ, ಒಂದೊಂದು ವೆಂಟಿಲೇಟರ್​ಗೆ 4 ಲಕ್ಷ ರೂಪಾಯಿ ವೆಚ್ಚ ತಗಲಿದೆ. ಜೊತೆಗೆ, ನೆರೆಯ ತಮಿಳುನಾಡು ಸರ್ಕಾರ 100 ವೆಂಟಿಲೇಟರ್ ಖರೀದಿಸಿದ್ದು ಒಂದು ವೆಂಟಿಲೇಟರ್​ಗೆ 4,78,000 ರೂಪಾಯಿ […]

ಪಾರದರ್ಶಕವೋ.. ಅಥವಾ ಭ್ರಷ್ಟಾಚಾರದ ಸುವಾಸನೆ ಅಂತ ಕರಿಬೇಕಾ? ಸಿದ್ದರಾಮಯ್ಯ ಪ್ರಶ್ನೆ
KUSHAL V
| Edited By: |

Updated on:Jul 24, 2020 | 8:17 PM

Share

ಬೆಂಗಳೂರು: ಕೊವಿಡ್​ ಪರಿಕರ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸರ್ಕಾರದ ವಿರುದ್ಧ ಆರೋಪಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ವಾಕ್ಪ್ರಹಾರ ಮತ್ತಷ್ಟು ತೀಕ್ಷ್ಣಗೊಳಿಸಿದರು.

ಕೇಂದ್ರ ಸರ್ಕಾರ PM Cares Fund ನಿಂದ ಇಡೀ ದೇಶಕ್ಕೆ 50,000 ವೆಂಟಿಲೇಟರ್ ಪೂರೈಕೆ ಮಾಡಿದ್ದಾರೆ. ಸುಮಾರು 2,000 ಕೋಟಿ ರೂಪಾಯಿ ವೆಚ್ಚದಲ್ಲಿ ನೀಡಿದ್ದಾರೆ. ಹೀಗಾಗಿ, ಒಂದೊಂದು ವೆಂಟಿಲೇಟರ್​ಗೆ 4 ಲಕ್ಷ ರೂಪಾಯಿ ವೆಚ್ಚ ತಗಲಿದೆ. ಜೊತೆಗೆ, ನೆರೆಯ ತಮಿಳುನಾಡು ಸರ್ಕಾರ 100 ವೆಂಟಿಲೇಟರ್ ಖರೀದಿಸಿದ್ದು ಒಂದು ವೆಂಟಿಲೇಟರ್​ಗೆ 4,78,000 ರೂಪಾಯಿ ನೀಡಿದ್ದಾರೆ.

‘ಇದನ್ನ ಭ್ರಷ್ಟಾಚಾರದ ಸುವಾಸನೆ ಅಂತಾ ಕರಿಯಬೇಕಾ?’ ಆದರೆ ನಮ್ಮ ರಾಜ್ಯದವರು ಏಪ್ರಿಲ್​ನಲ್ಲಿ 5.6 ಲಕ್ಷ ರೂಪಾಯಿ ಹಾಗೂ ಮತ್ತೊಂದು ಸಲ 12.32 ಲಕ್ಷ ರೂಪಾಯಿ ಕೊಟ್ಟು ವೆಂಟಿಲೇಟರ್ ಖರೀದಿ ಮಾಡಿದ್ದಾರೆ. ಜೊತೆಗೆ, ಮಾರ್ಚ್ 23ರಂದು 18.20 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಇದನ್ನೆಲ್ಲಾ ಗಮನಿಸಿ ನಾವು ವೆಂಟಿಲೇಟರ್ ಖರೀದಿಯು ಪಾರದರ್ಶಕವಾಗಿ ನಡೆದಿದೆ ಅಂತಾ ಹೇಳಬೇಕಾ ಅಥವಾ ಭ್ರಷ್ಟಾಚಾರದ ಸುವಾಸನೆ ಅಂತಾ ಕರಿಯಬೇಕಾ ಎಂದು ಸಿದ್ದರಾಮಯ್ಯ ಸರ್ಕಾರವನ್ನ ಪ್ರಶ್ನಿಸಿದ್ದಾರೆ.

ಆರೋಗ್ಯ ಸಚಿವರ ಪ್ರಕಾರ 9.65 ಲಕ್ಷ PPE ಕಿಟ್​ಗಳನ್ನು ಸರ್ಕಾರ ಖರೀದಿ ಮಾಡಿದೆ. ಮಾರುಕಟ್ಟೆಯಲ್ಲಿ ಇದರ ಬೆಲೆ 330 ರೂಪಾಯಿ. ಜೊತೆಗೆ, ಮಹಾರಾಷ್ಟ್ರದ ಸಂಸ್ಥೆಯಿಂದ 3 ಲಕ್ಷ PPE ಕಿಟ್ ಖರೀದಿಸಿದ್ರು. ಆದರೆ, ಇವು ಕಳಪೆ ಕಿಟ್​ಗಳು ಅಂತಾ ವೈದ್ಯರು ಗಲಾಟೆ ಮಾಡಿದ್ರು. ಹಾಗಾಗಿ, 3 ಲಕ್ಷ ಕಿಟ್​ಗಳ ಪೈಕಿ 1 ಲಕ್ಷ ಕಿಟ್ ವಾಪಸ್ ಮಾಡಿದ್ದರು. ಆದರೆ, 330 ರೂ. ಬೆಲೆಯ ಕಿಟ್​ಗೆ ಸುಮಾರು 2,000 ರೂ. ಕೊಟ್ಟು ಖರೀದಿ ಮಾಡಿದ್ದಾರೆ. Make in India ಅಂತಾ ಭಾಷಣ ಹೊಡೆಯೋರು ಚೀನಾದಿಂದ 3ಲಕ್ಷ ಕಿಟ್ ಖರೀದಿ ಮಾಡಿದ್ದಾರೆ. ನಮ್ಮ ಸೈನಿಕರನ್ನು ಹೊಡೆದು ಹಾಕಿದ ಚೀನಾದಿಂದ PPE ಕಿಟ್ ಖರೀದಿ ಮಾಡಿದ್ರು ಎಂದು ಸರ್ಕಾರವನ್ನ ಟೀಕಿಸಿದರು.

Published On - 1:16 pm, Thu, 23 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್