AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯಕ್ಕೆ ಹೋಗುವಾಗ Tea ಬ್ರೇಕ್​.. ಮದ್ದೂರು ವಡೆ ಜೊತೆ ಚಹಾ ಸವಿದ ಸಿದ್ದರಾಮಯ್ಯ!

ನಮ್ಮ ರಾಜಕೀಯ ನಾಯಕರು ಕೊಂಚ ತಿಂಡಿಪ್ರಿಯರು ಎಂದು ಹೇಳಿದರೆ ಅದು ತಪ್ಪಾಗಲಾರದು. ಅದರಲ್ಲೂ ತಮಗೆ ಇಷ್ಟವಾದ ತಿಂಡಿ ಸವಿಯಲು ನಮ್ಮ ಮುಖಂಡರು ಸದಾ ರೆಡಿ!

ಮಂಡ್ಯಕ್ಕೆ ಹೋಗುವಾಗ Tea ಬ್ರೇಕ್​.. ಮದ್ದೂರು ವಡೆ ಜೊತೆ ಚಹಾ ಸವಿದ ಸಿದ್ದರಾಮಯ್ಯ!
ಮದ್ದೂರು ವಡೆಗೆ ಮನಸೋತ ಸಿದ್ದರಾಮಯ್ಯ
KUSHAL V
|

Updated on:Feb 13, 2021 | 5:04 PM

Share

ಮಂಡ್ಯ: ನಮ್ಮ ರಾಜಕೀಯ ನಾಯಕರು ಕೊಂಚ ತಿಂಡಿಪ್ರಿಯರು ಎಂದು ಹೇಳಿದರೆ ಅದು ತಪ್ಪಾಗಲಾರದು. ಅದರಲ್ಲೂ ತಮಗೆ ಇಷ್ಟವಾದ ತಿಂಡಿ ಸವಿಯಲು ನಮ್ಮ ಮುಖಂಡರು ಸದಾ ರೆಡಿ! ಅಂತೆಯೇ, ಇಂದು ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳುವ ವೇಳೆ ಮದ್ದೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಟ್ಟಣದ ಸ್ಪೆಷಾಲಿಟಿ ತಿಂಡಿಯಾದ ಮದ್ದೂರು ವಡೆ ಸವಿಯಲು ಮುಂದಾದರು. ಪಟ್ಟಣದ ಶಿವಪುರದ ಬಳಿಯಿರುವ ಮದ್ದೂರು ಟಿಫಾನೀಸ್​ ಹೋಟೆಲ್​ನಿಂದ ಬಂದ ಮದ್ದೂರು ವಡೆ ಸವಿದು ಎಂಜಾಯ್ ಮಾಡಿದರು.

ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ವಾಹನದಲ್ಲೇ ಮದ್ದೂರು ವಡೆ ಸವಿದ ವಿಪಕ್ಷ ನಾಯಕ, ಬಳಿಕ ಟೀ ಕುಡಿದು ರಿಲಾಕ್ಸ್​ ಆದರು. ಈ ವೇಳೆ, ಸ್ಥಳೀಯ ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ ಸಹ ನಡೆಸಿದರು.

ಈ ನಡುವೆ, ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ನಾನು ಈಗಾಗಲೇ ಪಕ್ಷ ಕಟ್ಟಿದ್ದೇನೆ. ಪಕ್ಷ ಕಟ್ಟುವ ಅನಿವಾರ್ಯತೆ ನನಗಿಲ್ಲ. ನಾನು ಕಾಂಗ್ರೆಸ್ಸಿಗ ಎಂದು ಹೇಳಿದರು. ಜೊತೆಗೆ, ನಾನೀಗ ಕಾಂಗ್ರೆಸ್ ಪಕ್ಷದಲ್ಲಿರುವುದರಿಂದ ಬೇರೆ ಪಕ್ಷ ಕಟ್ಟುವ ಅವಶ್ಯಕತೆ ಇಲ್ಲ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಎಚ್​ ಡಿಕುಮಾರಸ್ವಾಮಿಗೆ ಟಾಂಗ್​ ನೀಡಿದರು. ಸ್ವತಂತ್ರವಾಗಿ ಪಕ್ಷ ಕಟ್ಟುವಂತೆ ಸಿದ್ದರಾಮಯ್ಯಗೆ ನಿನ್ನೆಯಷ್ಟೇ ಎಚ್​ ಡಿಕುಮಾರಸ್ವಾಮಿ ಸವಾಲಯ ಎಸೆದಿದ್ದರು.

SIDDARAMAIAH MADDUR VADE 1

ಮದ್ದೂರು ವಡೆ ಸವಿದ ಸಿದ್ದರಾಮಯ್ಯ

ಮದ್ದೂರು ವಡೆ ಸವಿಯುತ್ತಾ ಕಾಂಗ್ರೆಸ್​ ಕಾರ್ಯಕರ್ತರ ಜೊತೆ ಸಿದ್ದರಾಮಯ್ಯರ ಚರ್ಚೆ

ವಡೆ ಸವಿದ ನಂತರ ಖಡಕ್​ ಟೀ ಎಂಜಾಯ್​ ಮಾಡಿದ ಸಿದ್ದರಾಮಯ್ಯ

ಇದನ್ನೂ ಓದಿ: Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!

Published On - 5:01 pm, Sat, 13 February 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!