AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಪ್ರೇಮಿ ಟಿಪ್ಪುವಿನ ಜನ್ಮಸ್ಥಳ ದೇವನಹಳ್ಳಿಯಿಂದ ಕಾಂಗ್ರೆಸ್ ಜನಧ್ವನಿ ಯಾತ್ರೆ ಆರಂಭ: ಸಿದ್ದರಾಮಯ್ಯ

Siddaramaiah: ದೇವನಹಳ್ಳಿ ಟಿಪ್ಪು ಹುಟ್ಟಿದ ಸ್ಥಳ. ಟಿಪ್ಪು ಬ್ರಿಟಿಷರ ವಿರುದ್ದ ಹೋರಾಡಿ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತ ದೇಶಪ್ರೇಮಿ. ಇದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಆಡಳಿತ ಮಾಡಿದ ನಾಡು ಸಹ ಹೌದು. ಹೀಗಾಗಿಯೇ ನಮ್ಮ ಸರ್ಕಾರದಲ್ಲಿ ಟಿಪ್ಪು ಜಯಂತಿ, ಕೆಂಪೇಗೌಡ ಜಯಂತಿ ಮಾಡಿದ್ದೆವು.

ದೇಶಪ್ರೇಮಿ ಟಿಪ್ಪುವಿನ ಜನ್ಮಸ್ಥಳ ದೇವನಹಳ್ಳಿಯಿಂದ ಕಾಂಗ್ರೆಸ್ ಜನಧ್ವನಿ ಯಾತ್ರೆ ಆರಂಭ: ಸಿದ್ದರಾಮಯ್ಯ
ಸಂಗ್ರಹ ಚಿತ್ರ
Skanda
|

Updated on:Mar 03, 2021 | 5:36 PM

Share

ದೇವನಹಳ್ಳಿ: ಪಕ್ಷ ಸಂಘಟನೆ ಉದ್ದೇಶದಿಂದ ಜನಧ್ವನಿ ಹೆಸರಿನಲ್ಲಿ ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್ ನಾಯಕರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಈ ವೇಳೆ ಯಾತ್ರೆ ಉದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ ಟಿಪ್ಪು ಹಾಗೂ ಕೆಂಪೇಗೌಡರನ್ನು ನೆನೆಸಿಕೊಂಡಿದ್ದಾರೆ. ಪ್ರದೇಶ ಕಾಂಗ್ರೆಸ್ ಸಮಿತಿ ಈ‌ ವರ್ಷವನ್ನು ಸಂಘರ್ಷದ ವರ್ಷ ಎಂದು ಘೋಷಣೆ ಮಾಡಿದೆ. ಹೀಗಾಗಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೂರು ಕ್ಷೇತ್ರಕ್ಕೆ ಭೇಟಿ ಕೊಡಬೇಕು, ಯಾತ್ರೆ ಮಾಡಬೇಕು ಅಂತ ನಿರ್ಧರಿಸಿದ್ದಾರೆ. ಟಿಪ್ಪುವಿನ ಜನ್ಮಸ್ಥಳ ದೇವನಹಳ್ಳಿಯಿಂದ ಯಾತ್ರೆ ಆರಂಭ ಮಾಡಿದ್ದೇವೆ ಎಂದು ಹೇಳಿದ್ದಾರೆ. ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಬಗ್ಗೆ ಮಾತನಾಡುತ್ತಾ, ಮುರುಗುಮುಲ್ಲಾದಿಂದ ಪಾಂಚಜನ್ಯ ಮೊಳಗಿಸಿದ್ದರು. ಇಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟಿಪ್ಪು ಜನ್ಮಸ್ಥಳದಿಂದ ಪಾದಯಾತ್ರೆ ಆರಂಭಿಸಿದ್ದಾರೆ.

ದೇವನಹಳ್ಳಿ ಟಿಪ್ಪು ಹುಟ್ಟಿದ ಸ್ಥಳ. ಟಿಪ್ಪು ಬ್ರಿಟಿಷರ ವಿರುದ್ದ ಹೋರಾಡಿ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತ ದೇಶಪ್ರೇಮಿ. ಇದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಆಡಳಿತ ಮಾಡಿದ ನಾಡು ಸಹ ಹೌದು. ಹೀಗಾಗಿಯೇ ನಮ್ಮ ಸರ್ಕಾರದಲ್ಲಿ ಟಿಪ್ಪು ಜಯಂತಿ, ಕೆಂಪೇಗೌಡ ಜಯಂತಿ ಮಾಡಿದ್ದೆವು. ಜೊತೆಗೆ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇರಿಸಿದ್ದೆವು. ಇವೆಲ್ಲಾ ನಮ್ಮ ಸರ್ಕಾರ ಇದ್ದಾಗ ಆಗಿದ್ದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಆಡಳಿತ ಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ, ಅದು ಬಡವರಿಂದ ಸುಲಿಗೆ ಮಾಡುತ್ತೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಕೊಡ್ತೀವಿ. ಕಾಂಗ್ರೆಸ್ ಯಾವತ್ತಿಗೂ ಬಡವರ ಪರವಾದ ಪಕ್ಷ. ಆದರೆ, ಬಿಜೆಪಿಯವರಿಗೆ ಲೂಟಿ ಹೊಡೆಯುವುದು ಮಾತ್ರ ಮುಖ್ಯ ಎಂದು ಹರಿಹಾಯ್ದಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಇಬ್ಬರು ಮುಖ್ಯಮಂತ್ರಿಗಳನ್ನಿಟ್ಟುಕೊಂಡು ಸರ್ಕಾರ ನಡೆಸಲಾಗುತ್ತಿದೆ. ಒಬ್ಬ ಯಡಿಯೂರಪ್ಪ, ಮತ್ತೊಬ್ಬ ವಿಜಯೇಂದ್ರ ಎಂದು ಕುಹಕವಾಡಿದ್ದಾರೆ.

ಅಂತೆಯೇ ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರವಾಗಿದೆ. ಇದೇ ಸಂದರ್ಭದಲ್ಲಿ ದೇವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಅದನ್ನು (ಸಿಡಿ) ನನಗೆ ನೋಡುವುದಕ್ಕೆ ಅಸಹ್ಯವಾಗುತ್ತೆ, ಹೇಳುವುದಕ್ಕೂ ನಾಚಿಕೆಯಾಗುತ್ತೆ. ಈಗ ಆ ಸಚಿವ ರಾಜೀನಾಮೆ ಕೊಟ್ಟಿದ್ದಾನಂತೆ. ಅದರೆ, ಆತನ ಸಹೋದರ ಮುಖ್ಯಮಂತ್ರಿಗಳ ಬಳಿ ನಮ್ಮ ಅಣ್ಣನ ರಾಜೀನಾಮೆ ಪಡೆದುಕೊಂಡ್ರೆ ನಿಮ್ಮ ಸಿಡಿ ರಿಲೀಸ್ ಮಾಡ್ತೀನಿ ಎಂದು ಹೇಳ್ತಾನಂತೆ. ಇಂತಹ ಮಾನಗೆಟ್ಟ ಸರ್ಕಾರ ಬೇಕಾ? ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅಣ್ಣನ ರಾಜೀನಾಮೆ ಅಂಗೀಕರಿಸಿದ್ರೆ ನಿಮ್ಮ(ಯಡಿಯೂರಪ್ಪ) ಸಿ.ಡಿ. ರಿಲೀಸ್ ಮಾಡ್ತೀನಿ ಅಂತಿದ್ದಾನಂತೆ: ಇಂಥಾ ಮಾನಗೆಟ್ಟ ಸರ್ಕಾರ ಬೇಕಾ? -ಸಿದ್ದರಾಮಯ್ಯ

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ; ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪಗೆ ಪತ್ರ ರವಾನೆ

Published On - 4:05 pm, Wed, 3 March 21

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ