AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah Resigns: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ: ಎರಡನೇ ಅವಧಿಗೆ ಕರ್ನಾಟಕ ಮುಖ್ಯಮಂತ್ರಯಾಗಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಹೈಕಮಾಂಡ್​​ ಸೂಚನೆಯಂತೆ ಅವರು ಹುದ್ದೆ ತೊರೆದಿದ್ದು, ರಾಜ್ಯಪಾಲರ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

Siddaramaiah Resigns: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಸಿದ್ದರಾಮಯ್ಯImage Credit source: PTI
ಪ್ರಸನ್ನ ಹೆಗಡೆ
|

Updated on:May 28, 2026 | 3:06 PM

Share

ಬೆಂಗಳೂರು, ಮೇ 28: ಹೈಕಮಾಂಡ್​ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ (Chief Minister) ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ವರ್ಷಗಳಿಂದಲೂ ಊಹಾಪೋಹಗಳಿಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ವಿಚಾರಕ್ಕೆ ಅಂತಿಮ ತೆರೆ ಬಿದ್ದಿದೆ.

ಮುಖ್ಯಾಂಶಗಳು

  • ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
  • ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ
  • ‘ಕೈ’ ಪಾಳಯದಲ್ಲಿನ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿ ಪ್ರಚಂಡ ಬಹುಮತದೊಂದಿಗೆ ಕಾಂಗ್ರೆಸ್​​ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಬಳಿಕ ಡಿ.ಕೆ. ಶಿವಕುಮಾರ್​​ ಅವರ ತೀವ್ರ ಪೈಪೋಟಿಯ ಹೊರತಾಗಿಯೂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಸಿದ್ದರಾಮಯ್ಯ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಮೇ 20ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಸಿಎಂ ರೇಸ್​​ನಲ್ಲಿದ್ದ ಡಿಕೆಶಿ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಲಾಗಿತ್ತು.

ಇದನ್ನೂ ಓದಿ: ಮುಂದಿನ ಸಿಎಂ ಡಿಕೆ ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಸಿದ್ದರಾಮಯ್ಯ ಕಣ್ಣೀರು

ಇಂದು ಬೆಳಿಗ್ಗೆ ಆಯೋಜಿಸಿದ್ದ ಉಪಹಾರಕೂಟದಲ್ಲಿ ಹೈಕಮಾಂಡ್​​ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಸಚಿವರಿಗೆ ಖುದ್ದಾಗಿ ಸಿದ್ದರಾಮಯ್ಯ ತಿಳಿಸಿದ್ದರು. ಈ ವೇಳೆ ಭಾವುಕರಾದ ಅವರು ಕಣ್ಣೀರು ಹಾಕಿದ ಪ್ರಸಂಗವೂ ನಡೆದಿತ್ತು. ನಾನು ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಮಾಧಾನ ಇದೆ. ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮುಂದೆ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಹೋಗಿ. ಜನರಿಗೆ ಒಳ್ಳೆಯ ಯೋಜನೆಗಳನ್ನು ನೀಡಿ ಎಂದು ಸಿದ್ದರಾಮಯ್ಯ ಈ ವೇಳೆ ಸಲಹೆ ಕೂಡ ನೀಡಿದ್ದರು.

ಕಳೆದ ಒಂದು ವರ್ಷಗಳಿಂದಲೂ ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಪ್ರಹಸನ ನಡೆದುಕೊಂಡೇ ಬಂದಿತ್ತು. ಸಿದ್ದರಾಮಯ್ಯ ಮತ್ತು ಡಿಕೆಶಿ ಬಣಗಳ ನಾಯಕರು ಪರಸ್ಪರ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದರು. ಈ ನಡುವೆ ಪಂಚರಾಜ್ಯ ಚುನಾವಣೆ ಬೆನ್ನಲ್ಲೇ ಉಭಯ ನಾಯಕರನ್ನು ದೆಹಲಿಗೆ ಕರೆದಿದ್ದ ಹೈಕಮಾಂಡ್​​ ನಾಯಕರು ಸುದೀರ್ಘ ಸಭೆ ನಡೆಸಿದ್ದರು. ಅಳೆದು ತೂಗಿ ಅಂತಿಮ ನಿರ್ಧಾರಕ್ಕೆ ಬಂದಿದ್ದ ವರಿಷ್ಠರು ಸಿದ್ದರಾಮಯ್ಯನವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ ಸಿದ್ದರಾಮಯ್ಯನವರೀಗ ಪದತ್ಯಾಗ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:52 pm, Thu, 28 May 26

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ