AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ, ಎಷ್ಟು ಗೊತ್ತಾ?

ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಹೆಚ್ಚಳ ಮಾಡಿ ಆದೇಶಿಸಿತ್ತು. ಆದರೆ ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಬೆಂಬಲ ಬೆಲೆ ನೀಡುವುದಾಗಿ ತುಮಕೂರಿನಲ್ಲಿ ಘೋಷಣೆ ಮಾಡಿದ್ದಾರೆ. ಪ್ರತಿ ಕ್ವಿಂಟಾಲ್‌ ಕೊಬ್ಬರಿಗೆ 1500 ರೂಪಾಯಿ ಬೆಂಬಲ ಬೆಲೆ ನೀಡುವುದಾಗಿ ಹೇಳಿದ್ದಾರೆ.

ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ, ಎಷ್ಟು ಗೊತ್ತಾ?
ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on:Jan 21, 2024 | 5:48 PM

Share

ತುಮಕೂರು, ಜ.21: ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಡಿಸೆಂಬರ್ ತಿಂಗಳಾಂತ್ಯದಲ್ಲಿ ಕೊಬ್ಬರಿಗೆ (Copra/Coconut) ಬೆಂಬಲ ಬೆಲೆ ಹೆಚ್ಚಿಸಿ ಆದೇಶಿಸಿತ್ತು. ಆದರೆ, ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ.

ತುಮಕೂರಿ​ನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್‌ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ ಮಾಡಲು ಸಲಹೆ ನೀಡಿದ್ದೇನೆ ಎಂದರು.

ಇದನ್ನೂ ಓದಿ: ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ನಿಲುವು ಪ್ರಕಟಿಸಿದ ಸಿದ್ದರಾಮಯ್ಯ

ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಹೆಚ್ಚಿಸಿ ಡಿಸೆಂಬರ್ ತಿಂಗಳಾಂತ್ಯದಲ್ಲಿ ಆದೇಶಿಸಿತ್ತು. ಅಲ್ಲದೆ, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿತ್ತು. ಆ ಮೂಲಕ ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿತ್ತು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಕೊಬ್ಬರಿಗೆ ಬೆಂಬಲ ಬೆಲ ಘೋಷಿಸುವಂತೆ ಮನವಿ ಮಾಡಿದ್ದರು. ಬಳಿಕ ಕೇಂದ್ರ ಬೆಂಬಲ ಘೋಷಣೆ ಮಾಡಿತ್ತು. ಇದರ ಕ್ರೆಡಿಟ್​ ನಮ್ಮದೇ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Sun, 21 January 24

Follow Us
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ