AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ 50 ಕೋಟಿ ಖರ್ಚು: ಸಿದ್ದರಾಮಯ್ಯ ಗಂಭೀರ ಆರೋಪ

ಬಸನಗೌಡ ತುರವಿಹಾಳ ಬಹಳ ಒಳ್ಳೆಯ ಮನುಷ್ಯ. ಕಡಿಮೆ ಅಂತರದಿಂದ ಸೋತ ಹಿನ್ನೆಲೆ ಟಿಕೆಟ್ ಕೊಟ್ಟಿದ್ದೇವೆ. ತುರವಿಹಾಳಗೆ ಟಿಕೆಟ್ ನೀಡಬೇಕೆಂಬುದು ಜನರು ಕೂಡಾ ಒತ್ತಾಯ ಮಾಡಿದ್ದರು ಎಂದು ತಿಳಿಸಿದ ಸಿದ್ದರಾಮಯ್ಯ ನೀವು ನಮಗೆ ಮತ ನೀಡಬೇಕು ಎಂದರು.

ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ 50 ಕೋಟಿ ಖರ್ಚು: ಸಿದ್ದರಾಮಯ್ಯ ಗಂಭೀರ ಆರೋಪ
ಕಾಂಗ್ರೆಸ್​ನಿಂದ ಚುನಾವಣಾ ಪ್ರಚಾರ
sandhya thejappa
| Updated By: ganapathi bhat|

Updated on: Apr 05, 2021 | 5:32 PM

Share

ರಾಯಚೂರು: ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿ ಸುಮಾರು 50 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಯಚೂರಿನ ತುರವಿಹಾಳ ಗ್ರಾಮದಲ್ಲಿ ಕಾಂಗ್ರೆಸ್​ನಿಂದ ನಡೆದ ಬೃಹತ್ ಸಮಾವೇಶದಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಲೂಟಿ ಹೊಡೆದ ದುಡ್ಡನ್ನು ಬಿಜೆಪಿಯವರು ಖರ್ಚು ಮಾಡುತ್ತಿದ್ದಾರೆ. ಹಿಂದೆ ಪ್ರತಾಪ್ ಗೌಡರನ್ನು ಗೆಲ್ಲಿಸಿದ್ರಿ. ಆದರೆ, ಅವರನ್ನೇ ಮಾರಿಕೊಂಡು ಪ್ರತಾಪ್ ಗೌಡ ಅವಮಾನ ಮಾಡಿದ್ದರು. ಈ ಅವಮಾನ ಸಹಿಸಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಾಪ್ ಗೌಡನಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಬಸನಗೌಡ ತುರವಿಹಾಳ ಬಹಳ ಒಳ್ಳೆಯ ಮನುಷ್ಯ. ಕಡಿಮೆ ಅಂತರದಿಂದ ಸೋತ ಹಿನ್ನೆಲೆ ಟಿಕೆಟ್ ಕೊಟ್ಟಿದ್ದೇವೆ. ತುರವಿಹಾಳಗೆ ಟಿಕೆಟ್ ನೀಡಬೇಕೆಂಬುದು ಜನರು ಕೂಡಾ ಒತ್ತಾಯ ಮಾಡಿದ್ದರು ಎಂದು ತಿಳಿಸಿದ ಸಿದ್ದರಾಮಯ್ಯ ನೀವು ನಮಗೆ ಮತ ನೀಡಬೇಕು ಎಂದರು. ನಂತರ ಅವರು ಈಗ ಯಡಿಯೂರಪ್ಪ 7 ಕೆಜಿ ಅಕ್ಕಿಯನ್ನ 5 ಕೆಜಿ ಮಾಡಿದ್ದಾರೆ. ನಾವು 2023ಕ್ಕೆ ಅಧಿಕಾರಕ್ಕೆ ಬಂದೇ ಬರುತ್ತೇವೆ. ನಮ್ಮ ಮೊದಲ ಕಾರ್ಯಕ್ರಮ 10 ಕೆಜಿ ಅಕ್ಕಿ ಕೊಡುವುದು ಎಂದು ಹೇಳಿದರು.

ವಿಜಯೇಂದ್ರ ಆರ್​ಟಿಜಿಎಸ್ ಮೂಲಕ ಹಣ ಪಡೆಯುತ್ತಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚೆಕ್​ನಲ್ಲಿ ಹಣ ಪಡೆಯುತ್ತಾರೆ. ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡುತ್ತಿದ್ದಾರಲ್ಲ ಆ ದುಡ್ಡು ಯಾರದ್ದು ಎಂದು ಸಿದ್ದರಾಮಯ್ಯ ಸಮಾವೇಶದಲ್ಲಿ ಗರಂ ಆಗಿದ್ದಾರೆ.

ಸಂತೆಯಲ್ಲಿ ಕುರಿ ಕೋಳಿ ಹೇಗೆ ಮಾರಾಟ ಮಾಡುತ್ತಾರೋ ಅದೇ ರೀತಿ ಪ್ರತಾಪಗೌಡ ಮಾರಾಟವಾಗಿದ್ದಾರೆ. 25, 30 ಕೋಟಿಗೆ ಪ್ರತಾಪಗೌಡ ಮಾರಾಟವಾಗಿದ್ದಾರೆ. ಬಿಜೆಪಿವರ ಹತ್ತಿರ ಲೂಟಿ ಹೊಡೆದ ದುಡ್ಡಿದೆ. ನಮ್ಮ ಹತ್ತಿರ ಜನರು ಇದ್ದಾರೆ. ಪ್ರಜಾಪ್ರಭುತ್ವದಲ್ಲಿ ಮತದಾರ ಬಂಧುಗಳೇ ದೇವರು. ಅಕ್ಕಿ ಕೊಡಿ ಎಂದರೆ ಬಿಜೆಪಿಯವರು ದುಡ್ಡಿಲ್ಲ ಅಂತಾರೆ. ಇಲ್ಲಿ ಬಂದು ಲೂಟಿ ಹೊಡಿತಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ

ಪಶ್ಚಿಮ ಬಂಗಾಳ ಚುನಾವಣೆ: 3ನೇ ಹಂತದ ಬಹುತೇಕ ಕ್ಷೇತ್ರಗಳಲ್ಲಿ ಟಿಎಂಸಿ ಉಕ್ಕಿನ ಹಿಡಿತ, ಮುಸ್ಲಿಂ ಮತದಾರರೇ ನಿರ್ಣಾಯಕ

ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ