AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ 50 ಕೋಟಿ ಖರ್ಚು: ಸಿದ್ದರಾಮಯ್ಯ ಗಂಭೀರ ಆರೋಪ

ಬಸನಗೌಡ ತುರವಿಹಾಳ ಬಹಳ ಒಳ್ಳೆಯ ಮನುಷ್ಯ. ಕಡಿಮೆ ಅಂತರದಿಂದ ಸೋತ ಹಿನ್ನೆಲೆ ಟಿಕೆಟ್ ಕೊಟ್ಟಿದ್ದೇವೆ. ತುರವಿಹಾಳಗೆ ಟಿಕೆಟ್ ನೀಡಬೇಕೆಂಬುದು ಜನರು ಕೂಡಾ ಒತ್ತಾಯ ಮಾಡಿದ್ದರು ಎಂದು ತಿಳಿಸಿದ ಸಿದ್ದರಾಮಯ್ಯ ನೀವು ನಮಗೆ ಮತ ನೀಡಬೇಕು ಎಂದರು.

ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ 50 ಕೋಟಿ ಖರ್ಚು: ಸಿದ್ದರಾಮಯ್ಯ ಗಂಭೀರ ಆರೋಪ
ಕಾಂಗ್ರೆಸ್​ನಿಂದ ಚುನಾವಣಾ ಪ್ರಚಾರ
sandhya thejappa
| Edited By: |

Updated on: Apr 05, 2021 | 5:32 PM

Share

ರಾಯಚೂರು: ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿ ಸುಮಾರು 50 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಯಚೂರಿನ ತುರವಿಹಾಳ ಗ್ರಾಮದಲ್ಲಿ ಕಾಂಗ್ರೆಸ್​ನಿಂದ ನಡೆದ ಬೃಹತ್ ಸಮಾವೇಶದಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಲೂಟಿ ಹೊಡೆದ ದುಡ್ಡನ್ನು ಬಿಜೆಪಿಯವರು ಖರ್ಚು ಮಾಡುತ್ತಿದ್ದಾರೆ. ಹಿಂದೆ ಪ್ರತಾಪ್ ಗೌಡರನ್ನು ಗೆಲ್ಲಿಸಿದ್ರಿ. ಆದರೆ, ಅವರನ್ನೇ ಮಾರಿಕೊಂಡು ಪ್ರತಾಪ್ ಗೌಡ ಅವಮಾನ ಮಾಡಿದ್ದರು. ಈ ಅವಮಾನ ಸಹಿಸಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಾಪ್ ಗೌಡನಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಬಸನಗೌಡ ತುರವಿಹಾಳ ಬಹಳ ಒಳ್ಳೆಯ ಮನುಷ್ಯ. ಕಡಿಮೆ ಅಂತರದಿಂದ ಸೋತ ಹಿನ್ನೆಲೆ ಟಿಕೆಟ್ ಕೊಟ್ಟಿದ್ದೇವೆ. ತುರವಿಹಾಳಗೆ ಟಿಕೆಟ್ ನೀಡಬೇಕೆಂಬುದು ಜನರು ಕೂಡಾ ಒತ್ತಾಯ ಮಾಡಿದ್ದರು ಎಂದು ತಿಳಿಸಿದ ಸಿದ್ದರಾಮಯ್ಯ ನೀವು ನಮಗೆ ಮತ ನೀಡಬೇಕು ಎಂದರು. ನಂತರ ಅವರು ಈಗ ಯಡಿಯೂರಪ್ಪ 7 ಕೆಜಿ ಅಕ್ಕಿಯನ್ನ 5 ಕೆಜಿ ಮಾಡಿದ್ದಾರೆ. ನಾವು 2023ಕ್ಕೆ ಅಧಿಕಾರಕ್ಕೆ ಬಂದೇ ಬರುತ್ತೇವೆ. ನಮ್ಮ ಮೊದಲ ಕಾರ್ಯಕ್ರಮ 10 ಕೆಜಿ ಅಕ್ಕಿ ಕೊಡುವುದು ಎಂದು ಹೇಳಿದರು.

ವಿಜಯೇಂದ್ರ ಆರ್​ಟಿಜಿಎಸ್ ಮೂಲಕ ಹಣ ಪಡೆಯುತ್ತಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚೆಕ್​ನಲ್ಲಿ ಹಣ ಪಡೆಯುತ್ತಾರೆ. ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡುತ್ತಿದ್ದಾರಲ್ಲ ಆ ದುಡ್ಡು ಯಾರದ್ದು ಎಂದು ಸಿದ್ದರಾಮಯ್ಯ ಸಮಾವೇಶದಲ್ಲಿ ಗರಂ ಆಗಿದ್ದಾರೆ.

ಸಂತೆಯಲ್ಲಿ ಕುರಿ ಕೋಳಿ ಹೇಗೆ ಮಾರಾಟ ಮಾಡುತ್ತಾರೋ ಅದೇ ರೀತಿ ಪ್ರತಾಪಗೌಡ ಮಾರಾಟವಾಗಿದ್ದಾರೆ. 25, 30 ಕೋಟಿಗೆ ಪ್ರತಾಪಗೌಡ ಮಾರಾಟವಾಗಿದ್ದಾರೆ. ಬಿಜೆಪಿವರ ಹತ್ತಿರ ಲೂಟಿ ಹೊಡೆದ ದುಡ್ಡಿದೆ. ನಮ್ಮ ಹತ್ತಿರ ಜನರು ಇದ್ದಾರೆ. ಪ್ರಜಾಪ್ರಭುತ್ವದಲ್ಲಿ ಮತದಾರ ಬಂಧುಗಳೇ ದೇವರು. ಅಕ್ಕಿ ಕೊಡಿ ಎಂದರೆ ಬಿಜೆಪಿಯವರು ದುಡ್ಡಿಲ್ಲ ಅಂತಾರೆ. ಇಲ್ಲಿ ಬಂದು ಲೂಟಿ ಹೊಡಿತಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ

ಪಶ್ಚಿಮ ಬಂಗಾಳ ಚುನಾವಣೆ: 3ನೇ ಹಂತದ ಬಹುತೇಕ ಕ್ಷೇತ್ರಗಳಲ್ಲಿ ಟಿಎಂಸಿ ಉಕ್ಕಿನ ಹಿಡಿತ, ಮುಸ್ಲಿಂ ಮತದಾರರೇ ನಿರ್ಣಾಯಕ

ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?