AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ 50 ಕೋಟಿ ಖರ್ಚು: ಸಿದ್ದರಾಮಯ್ಯ ಗಂಭೀರ ಆರೋಪ

ಬಸನಗೌಡ ತುರವಿಹಾಳ ಬಹಳ ಒಳ್ಳೆಯ ಮನುಷ್ಯ. ಕಡಿಮೆ ಅಂತರದಿಂದ ಸೋತ ಹಿನ್ನೆಲೆ ಟಿಕೆಟ್ ಕೊಟ್ಟಿದ್ದೇವೆ. ತುರವಿಹಾಳಗೆ ಟಿಕೆಟ್ ನೀಡಬೇಕೆಂಬುದು ಜನರು ಕೂಡಾ ಒತ್ತಾಯ ಮಾಡಿದ್ದರು ಎಂದು ತಿಳಿಸಿದ ಸಿದ್ದರಾಮಯ್ಯ ನೀವು ನಮಗೆ ಮತ ನೀಡಬೇಕು ಎಂದರು.

ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ 50 ಕೋಟಿ ಖರ್ಚು: ಸಿದ್ದರಾಮಯ್ಯ ಗಂಭೀರ ಆರೋಪ
ಕಾಂಗ್ರೆಸ್​ನಿಂದ ಚುನಾವಣಾ ಪ್ರಚಾರ
sandhya thejappa
sandhya thejappa| Edited By: |

Updated on: Apr 05, 2021 | 5:32 PM

Share

ರಾಯಚೂರು: ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿ ಸುಮಾರು 50 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಯಚೂರಿನ ತುರವಿಹಾಳ ಗ್ರಾಮದಲ್ಲಿ ಕಾಂಗ್ರೆಸ್​ನಿಂದ ನಡೆದ ಬೃಹತ್ ಸಮಾವೇಶದಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಲೂಟಿ ಹೊಡೆದ ದುಡ್ಡನ್ನು ಬಿಜೆಪಿಯವರು ಖರ್ಚು ಮಾಡುತ್ತಿದ್ದಾರೆ. ಹಿಂದೆ ಪ್ರತಾಪ್ ಗೌಡರನ್ನು ಗೆಲ್ಲಿಸಿದ್ರಿ. ಆದರೆ, ಅವರನ್ನೇ ಮಾರಿಕೊಂಡು ಪ್ರತಾಪ್ ಗೌಡ ಅವಮಾನ ಮಾಡಿದ್ದರು. ಈ ಅವಮಾನ ಸಹಿಸಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಾಪ್ ಗೌಡನಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಬಸನಗೌಡ ತುರವಿಹಾಳ ಬಹಳ ಒಳ್ಳೆಯ ಮನುಷ್ಯ. ಕಡಿಮೆ ಅಂತರದಿಂದ ಸೋತ ಹಿನ್ನೆಲೆ ಟಿಕೆಟ್ ಕೊಟ್ಟಿದ್ದೇವೆ. ತುರವಿಹಾಳಗೆ ಟಿಕೆಟ್ ನೀಡಬೇಕೆಂಬುದು ಜನರು ಕೂಡಾ ಒತ್ತಾಯ ಮಾಡಿದ್ದರು ಎಂದು ತಿಳಿಸಿದ ಸಿದ್ದರಾಮಯ್ಯ ನೀವು ನಮಗೆ ಮತ ನೀಡಬೇಕು ಎಂದರು. ನಂತರ ಅವರು ಈಗ ಯಡಿಯೂರಪ್ಪ 7 ಕೆಜಿ ಅಕ್ಕಿಯನ್ನ 5 ಕೆಜಿ ಮಾಡಿದ್ದಾರೆ. ನಾವು 2023ಕ್ಕೆ ಅಧಿಕಾರಕ್ಕೆ ಬಂದೇ ಬರುತ್ತೇವೆ. ನಮ್ಮ ಮೊದಲ ಕಾರ್ಯಕ್ರಮ 10 ಕೆಜಿ ಅಕ್ಕಿ ಕೊಡುವುದು ಎಂದು ಹೇಳಿದರು.

ವಿಜಯೇಂದ್ರ ಆರ್​ಟಿಜಿಎಸ್ ಮೂಲಕ ಹಣ ಪಡೆಯುತ್ತಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚೆಕ್​ನಲ್ಲಿ ಹಣ ಪಡೆಯುತ್ತಾರೆ. ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡುತ್ತಿದ್ದಾರಲ್ಲ ಆ ದುಡ್ಡು ಯಾರದ್ದು ಎಂದು ಸಿದ್ದರಾಮಯ್ಯ ಸಮಾವೇಶದಲ್ಲಿ ಗರಂ ಆಗಿದ್ದಾರೆ.

ಸಂತೆಯಲ್ಲಿ ಕುರಿ ಕೋಳಿ ಹೇಗೆ ಮಾರಾಟ ಮಾಡುತ್ತಾರೋ ಅದೇ ರೀತಿ ಪ್ರತಾಪಗೌಡ ಮಾರಾಟವಾಗಿದ್ದಾರೆ. 25, 30 ಕೋಟಿಗೆ ಪ್ರತಾಪಗೌಡ ಮಾರಾಟವಾಗಿದ್ದಾರೆ. ಬಿಜೆಪಿವರ ಹತ್ತಿರ ಲೂಟಿ ಹೊಡೆದ ದುಡ್ಡಿದೆ. ನಮ್ಮ ಹತ್ತಿರ ಜನರು ಇದ್ದಾರೆ. ಪ್ರಜಾಪ್ರಭುತ್ವದಲ್ಲಿ ಮತದಾರ ಬಂಧುಗಳೇ ದೇವರು. ಅಕ್ಕಿ ಕೊಡಿ ಎಂದರೆ ಬಿಜೆಪಿಯವರು ದುಡ್ಡಿಲ್ಲ ಅಂತಾರೆ. ಇಲ್ಲಿ ಬಂದು ಲೂಟಿ ಹೊಡಿತಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ

ಪಶ್ಚಿಮ ಬಂಗಾಳ ಚುನಾವಣೆ: 3ನೇ ಹಂತದ ಬಹುತೇಕ ಕ್ಷೇತ್ರಗಳಲ್ಲಿ ಟಿಎಂಸಿ ಉಕ್ಕಿನ ಹಿಡಿತ, ಮುಸ್ಲಿಂ ಮತದಾರರೇ ನಿರ್ಣಾಯಕ

ಮಂತ್ರಿಗಿರಿ ಆದಮೇಲೆ ನಿರಾಣಿಗೆ ಹುಚ್ಚು ಹಿಡಿದಿದೆ ಹೀಗಾಗಿ ಏನೇನೋ ಮಾತಾಡ್ತಾರೆ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ