AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಜೀವನ ಮುಗಿದ ಮೇಲೆ ಮೈಸೂರಿನಲ್ಲಿ ಇರುತ್ತೇನೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಮೈಸೂರಿನಲ್ಲಿ ನನಗೆ ಮನೆ ಇರಲಿಲ್ಲ, ಇದೀಗ ಕಟ್ಟಿಸುತ್ತಿದ್ದೇನೆ. ರಾಜಕೀಯ ಜೀವನ ಮುಗಿದ ಮೇಲೆ ಮೈಸೂರಿನಲ್ಲಿ ಇರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ ಜೀವನ ಮುಗಿದ ಮೇಲೆ ಮೈಸೂರಿನಲ್ಲಿ ಇರುತ್ತೇನೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
TV9 Web
| Edited By: |

Updated on:Apr 06, 2022 | 9:04 PM

Share

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಚಾಮುಂಡೇಶ್ವರಿ ಸೋಲಿನ ನೋವಿನಿಂದ ಹೊರ ಬರುವುದಕ್ಕೆ ಸಾಧ್ಯವಾಗಿಲ್ಲ ಎಂದು ತಮ್ಮ ಸೋಲನ್ನು ಮತ್ತೆ ನೆನಪಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ನನಗೆ ಮನೆ ಇರಲಿಲ್ಲ, ಇದೀಗ ಕಟ್ಟಿಸುತ್ತಿದ್ದೇನೆ. ರಾಜಕೀಯ ಜೀವನ ಮುಗಿದ ಮೇಲೆ ಮೈಸೂರಿನಲ್ಲಿ ಇರುತ್ತೇನೆ. ಈ ಹಿಂದೆ ನನಗೆ ಒಬ್ಬರು ಮನೆ ಕಟ್ಟಿಸಿಕೊಟ್ಟಿದ್ದರು. ಅದನ್ನು ಮಾರಿಬಿಟ್ಟೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜಕೀಯ ಜೀವನ ಶುರುವಾದ ಕ್ಷೇತ್ರದಲ್ಲೇ ನನ್ನ ಕೊನೆಯ ಚುನಾವಣೆ ಆಗಬೇಕು ಅಂದುಕೊಂಡಿದ್ದೆ. ಅದಕ್ಕಾಗಿ ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಿದೆ. ಕಳೆದ ಚುನಾವಣೆಯಲ್ಲಿ ಗೆದ್ದಿದ್ದರೆ ಮತ್ತೆ ಚುನಾವಣೆಗೆ ನಿಲ್ಲುತ್ತಿರಲಿಲ್ಲ. ಈಗ ಮತ್ತೆ ಚುನಾವಣೆಗೆ ಸ್ಪರ್ಧಿಸಬೇಕಾ ಬೇಡ್ವಾ ಎಂಬ ಚಿಂತೆ ಇದೆ. ನನಗೆ 73 ವರ್ಷವಾಗಿದೆ, ದೀರ್ಘ ರಾಜಕೀಯ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

ಈಗ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದಿದೆ. ಇಷ್ಟೊಂದು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಅಂದುಕೊಂಡಿರಲಿಲ್ಲ. ನಾನು ಸೋತಿದ್ದ ಕಾರಣದಿಂದ ಗೆಲ್ಲಲು ಆಗುವುದಿಲ್ಲ ಅಂದುಕೊಂಡಿದ್ದೆ. ಆದರೆ ಹಾಗಾಗಿಲ್ಲ ಎಂದು ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಮೊದಲೆಲ್ಲ ಚುನಾವಣೆಗೆ ಹಣ ಅಷ್ಟಾಗಿ ಖರ್ಚಾಗುತ್ತಿರಲಿಲ್ಲ. ಆದರೆ, ಈಗ ಗ್ರಾಮ ಪಂಚಾಯತಿ ಚುನಾವಣೆಗೂ ಬಹಳಷ್ಟು ಹಣ ಖರ್ಚಾಗುತ್ತದೆ ಎಂದು ತಿಳಿಸಿದ್ದಾರೆ.

ಸಮಾರಂಭದಲ್ಲಿ ಜೆಡಿಎಸ್​ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್​ಗೆ ಅಧಿಕಾರ ಕೊಟ್ಟೆವು, ಬಳಿಕ ನಮ್ಮ ವಿರುದ್ಧವೇ ಮಾತಾಡಿದರು. ಜೆಡಿಎಸ್​ನವರು ಅವಕಾಶವಾದಿಗಳು. ಗೆದ್ದೆತ್ತಿನ ಬಾಲ ಹಿಡಿವವರು. ಬಿಜೆಪಿ ಅಧಿಕಾರಕ್ಕೆ ಬರಬಾರದೆಂದು ಜೆಡಿಎಸ್​ ಬೆಂಬಲಿಸಿದ್ದೆವು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನು ಈವರೆಗೆ ಗೋಮಾಂಸ ತಿಂದಿಲ್ಲ, ಹಂದಿ ಮಾಂಸ ತಿಂದಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

Published On - 8:15 pm, Wed, 13 January 21

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ