AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಬಜೆಟ್, ಮಿತಿಮೀರದ ಸಾಲ, ವಿತ್ತೀಯ ಶಿಸ್ತು: ಸರ್ಕಾರದ ಸಾಧನೆ ಹೇಳಿದ ಸಿದ್ದರಾಮಯ್ಯ

Karnataka Budget and Debt: ಬಜೆಟ್ ಮಂಡನೆ ಬಳಿಕ ತಮ್ಮ ಗೃಹ ಕಚೇರಿಯಾದ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಸಾಲ, ಜಿಎಸ್​ಟಿ ಇತ್ಯಾದಿ ವಿಚಾರ ಪ್ರಸ್ತಾಪಿಸಿದರು. ಕೇಂದ್ರದ ಸಾಲ ಮಿತಿಮೀರಿ ಹೋದರೆ, ರಾಜ್ಯದ ಸಾಲ ಇತಿಮಿತಿಯಲ್ಲೇ ಇದೆ. ಜಿಡಿಪಿ ವೃದ್ದಿಯಲ್ಲಿ ಕೇಂದ್ರಕ್ಕಿಂತ ರಾಜ್ಯದ್ದೇ ಹೆಚ್ಚು ಎಂದೂ ಅವರು ತುಲನೆ ಮಾಡಿಕೊಂಡರು.

ದಾಖಲೆ ಬಜೆಟ್, ಮಿತಿಮೀರದ ಸಾಲ, ವಿತ್ತೀಯ ಶಿಸ್ತು: ಸರ್ಕಾರದ ಸಾಧನೆ ಹೇಳಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 06, 2026 | 6:27 PM

Share

ಬೆಂಗಳೂರು, ಮಾರ್ಚ್ 6: ದಾಖಲೆಯ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget 2026) ಮಂಡನೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸಾಲ, ಜಿಡಿಪಿ ವೃದ್ಧಿ, ವಿತ್ತೀಯ ಕೊರತೆ, ಹಣಕಾಸು ಶಿಸ್ತು ಇತ್ಯಾದಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಸಾಲ, ಜಿಎಸ್​ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಹೇಗೆ ಅನ್ಯಾಯ ಆಗುತ್ತಿದೆ ಎಂದು ವಿವರಿಸಿದ್ದಾರೆ.

ರಾಜ್ಯ ಸರ್ಕಾರ ಸಾಲದ ಮೇಲೆ ಸಾಲ ಮಾಡುತ್ತಿದೆ ಎಂದು ಬಿಜೆಪಿ ಮಾಡುತ್ತಿರುವ ಆರೋಪವನ್ನು ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ. ಅಭಿವೃದ್ಧಿ ಕೆಲಸಗಳಿಗೆ ಸಾಲ ಮಾಡುವುದು ಅನಿವಾರ್ಯ ಎಂಬ ಸಂಗತಿಯನ್ನು ತಿಳಿಸಿರುವ ಅವರು ಇತಿಮಿತಿಯಲ್ಲೇ ಸಾಲ ಮಾಡಲಾಗಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ಸಾಲ 212 ಲಕ್ಷ ಕೋಟಿ ರೂಗೆ ಏರುವ ಅಂದಾಜು ಇದೆ. ಅದು ಜಿಡಿಪಿಯ ಶೇ. 55ಕ್ಕಿಂತ ಹೆಚ್ಚು. ತಾವು ಪರಿಮಿತಿಯಲ್ಲೇ ಸಾಲ ಮಾಡಿದ್ದೇವೆ ಎಂದಿದ್ದಾರೆ.

ನಾವು ಅಧಿಕಾರಕ್ಕೆ ಬಂದಾಗ ಸಾಲ 5.54 ಲಕ್ಷ ಕೋಟಿ ರೂ ಸಾಲ ಇತ್ತು. ಈಗ ಸಾಲ 8.14 ಲಕ್ಷ ಕೋಟಿ ರೂ ಆಗುತ್ತದೆ. ಫಿಸ್ಕಲ್ ರೆಸ್ಪಾನ್ಸಿಬಲ್ ಆ್ಯಕ್ಟ್ ಪ್ರಕಾರ ವಿತ್ತೀಯ ಕೊರತೆ ಜಿಡಿಪಿಯ ಶೇ. 3ರ ಒಳಗೆ ಇರಬೇಕು. ಸಾಲವು ಶೇ. 25ರ ಒಳಗೆ ಇರಬೇಕು. ಕರ್ನಾಟಕದ ಜಿಡಿಇಪಿ ಮುಂಂದಿನ ವರ್ಷ 33 ಲಕ್ಷ ಕೋಟಿ ರೂ ಆಗುತ್ತದೆ. ಹೀಗಾಗಿ, ಕಾಯ್ದೆ ವಿಧಿಸಿರುವ ಮಿತಿಯೊಳಗೆಯೇ ಸಾಲ ಮಾಡಲಾಗದೆ ಎಂದು ಸಿದ್ದರಾಮಯ್ಯ ತಮ್ಮ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: karnataka budget 2026: ಈ ಬಾರಿ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹೊಸ ಕಾರ್ಯಕ್ರಮಗಳು

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಈ ವೇಳೆ ಸಿದ್ದರಾಮಯ್ಯ ಮತ್ತೆ ಆರೋಪ ಮಾಡದ್ದಾರೆ. ಜಿಎಸ್​ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಆದರೆ, ಕರ್ನಾಟಕಕ್ಕೆ ಜಿಎಸ್​ಟಿ ಪಾಲು ನ್ಯಾಯಯುತವಾಗಿ ಸಿಕ್ಕಿಲ್ಲ. ಈ ವರ್ಷ ನಮಗೆ ಜಿಎಸ್​ಟಿ ಹಂಚಿಕೆಯಲ್ಲಿ 10,000 ಕೋಟಿ ರೂ ಕೊರತೆಯಾಗಿದೆ. ಮುಂದಿನ ವರ್ಷ 15,000 ಕೋಟಿ ರೂ ಕಡಿಮೆ ಆಗುವ ಅಂದಾಜು ಇದೆ. ಕಡಿಮೆ ಜಿಎಸ್​ಟಿ ಸಿಕ್ಕಿದ್ದರಿಂದ ಕರ್ನಾಟಕದ ಬೆಳವಣಿಗೆ ಶೇ. 4 ಕಡಿಮೆ ಆಯಿತು. ಆದರೂ ಕೂಡ ಜಿಡಿಪಿ ಬೆಳವಣಿಗೆ ಶೇ. 8.10 ಇದೆ ಎಂದು ಮುಖ್ಯಮಂತ್ರಿಗಳು ವಿವರಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ