AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರೇಶ್ ಕುಮಾರ್, ಸುಧಾಕರ್ ಮಧ್ಯೆ ಸಮನ್ವಯತೆ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನದ ಆಸೆ ಇನ್ನೂ ಹೋಗಿಲ್ಲ. ಚಾಮರಾಜನಗರಕ್ಕೆ ಹೋದರೆ ಸಿಎಂ ಸ್ಥಾನ ಹೋಗುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ಚಾಮರಾಜನಗರಕ್ಕೆ ಹೋಗಿಲ್ಲ ಎಂದು ಹೇಳಿಕೆ ನೀಡಿದ ಸಿದ್ದರಾಮಯ್ಯ, ಚಾಮರಾಜನಗರ ದುರಂತದ ತಪ್ಪಿತಸ್ಥರ ವಿರುದ್ಧ ಕ್ರಮವಾಗಿಲ್ಲ ಎಂದರು.

ಸುರೇಶ್ ಕುಮಾರ್, ಸುಧಾಕರ್ ಮಧ್ಯೆ ಸಮನ್ವಯತೆ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Jul 01, 2021 | 10:12 AM

Share

ಮೈಸೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದಾರೆ. ಆದರೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುತ್ತಿರುವುದು ಏಕೆ? ಎಂದು ಪ್ರಶ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಪರೀಕ್ಷೆ ಬೇಡ ಎಂದು ಶಿಕ್ಷಣ ಸಚಿವರಿಗೆ ಹೇಳಿದ್ದೆ. ಮಂತ್ರಿಮಂಡಲದಲ್ಲಿ ಸಮನ್ವಯತೆ ಇಲ್ಲ. ಸಚಿವ ಸುರೇಶ್ ಕುಮಾರ್ ಮತ್ತು ಸುಧಾಕರ್ ಮಧ್ಯೆ ಸಮನ್ವಯತೆ ಇಲ್ಲ ಎಂದು ಮೈಸೂರಿನಲ್ಲಿ ಅಭಿಪ್ರಾಯಪಟ್ಟರು. ಕೊವಿಡ್ ಲಸಿಕೆ ಬಗ್ಗೆಯೂ ಸುಳ್ಳು ಹೇಳುತ್ತಿದ್ದಾರೆ. ಲಸಿಕೆ ಇದ್ದಿದ್ದರೆ ಜನರು ಏಕೆ ಸರತಿಸಾಲಿನಲ್ಲಿ ನಿಲ್ಲುತ್ತಿದ್ದರು. ಲಸಿಕೆಗಾಗಿ ಜನರು ಪರದಾಡುತ್ತಿದ್ದಾರೆ. ಸರ್ಕಾರಕ್ಕೆ ಲಸಿಕೆ ಪೂರೈಸಲು ಆಗುತ್ತಿಲ್ಲ. ಕೊರೊನಾ ಎರಡನೇ ಅಲೆ ನಿರ್ವಹಣೆಗೆ ಸಿದ್ಧತೆ ಮಾಡಿಕೊಂಡಿರಲಿಲ್ಲ. ಲಸಿಕೆ ಹಂಚಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರ್ಕಾರ ವಿಫಲವಾಗಿವೆ. ಚಾಮರಾಜನಗರ ಆಕ್ಸಿಜನ್ ದುರಂತದಲ್ಲೂ ಸುಳ್ಳು ಹೇಳಿದರು. 3 ಜನ ಮೃತಪಟ್ಟಿದ್ದಾಗಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಸ್ಥಾನದ ಆಸೆ ಇನ್ನೂ ಹೋಗಿಲ್ಲ ಬಿ.ಎಸ್.ಯಡಿಯೂರಪ್ಪಗೆ ಮುಖ್ಯಮಂತ್ರಿ ಸ್ಥಾನದ ಆಸೆ ಇನ್ನೂ ಹೋಗಿಲ್ಲ. ಚಾಮರಾಜನಗರಕ್ಕೆ ಹೋದರೆ ಸಿಎಂ ಸ್ಥಾನ ಹೋಗುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ಚಾಮರಾಜನಗರಕ್ಕೆ ಹೋಗಿಲ್ಲ ಎಂದು ಹೇಳಿಕೆ ನೀಡಿದ ಸಿದ್ದರಾಮಯ್ಯ, ಚಾಮರಾಜನಗರ ದುರಂತದ ತಪ್ಪಿತಸ್ಥರ ವಿರುದ್ಧ ಕ್ರಮವಾಗಿಲ್ಲ ಎಂದರು.

ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನದ ಬಗ್ಗೆ ಯಾವುದೇ ಚರ್ಚೆ ಇಲ್ಲ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆಗೆ ಇನ್ನೂ ಸಮಯ ಇದೆ. ಚುನಾವಣೆ ಆಗಬೇಕು, ಬಹುಮತ ಬರಬೇಕು. ಆ ನಂತರ ಚರ್ಚೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಯೂತ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧ ಇರುವುದಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದರೂ ನಾನು ಸಲಹೆ ಕೊಟ್ಟಿದ್ದೆ. ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ ಆಯ್ಕೆ ಆಗಿದೆ. ಹೊಂದಾಣಿಕೆಯಿಂದ ಒಬ್ಬರನ್ನು ನೇಮಿಸಿ ಎಂದು ಹೇಳಿದ್ದೆ. ಇದರಲ್ಲಿ ನನ್ನದಾಗಲಿ ಡಿಕೆಶಿಯವರದ್ದಾಗಲಿ ಪಾತ್ರ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ

Covovax Covid 19 Vaccine: ಕೊವಾವ್ಯಾಕ್ಸ್​ ಲಸಿಕೆಯ ಮಕ್ಕಳ ಮೇಲಿನ ಪ್ರಯೋಗಕ್ಕೆ ಒಪ್ಪಿಗೆ ನೀಡದ ಕೇಂದ್ರ ತಜ್ಞರ ಸಮಿತಿ; ಸೀರಮ್​ ಸಂಸ್ಥೆಗೆ ಸಿಗದ ಅನುಮತಿ

ಸರ್ಕಾರದ ಆದೇಶಕ್ಕೆ ಕವಡೆಕಾಸಿನ ಕಿಮ್ಮತ್ತು ನೀಡದ ಬಿಬಿಎಂಪಿ

(Siddaramaiah says there was no compromise between Suresh Kumar and Sudhakar)

Follow Us
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ