AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ಣಚಂದ್ರ ತೇಜಸ್ವಿ ಫಾರ್ಮ್ ಹೌಸ್​ಗೆ ತುಂಬಾ ಸಲ ಆಹ್ವಾನ ಮಾಡಿದ್ದರು: ನೆನಪು ಹಂಚಿಕೊಂಡ ಸಿದ್ದರಾಮಯ್ಯ

Siddaramaiah: ತೇಜಸ್ವಿ ಫಾರ್ಮ್ ಹೌಸ್​ಗೆ ನನ್ನನ್ನು ತುಂಬ ಸಲ ಅಹ್ವಾನ ಮಾಡಿದ್ದರು. ಆದರೆ, ಒಮ್ಮೆ ಮಾತ್ರ ಹೋಗಲು ಸಾಧ್ಯವಾಗಿತ್ತು. ನಾನು ಅಲ್ಲೇ ವಾಸ್ತವ್ಯ ಹೂಡಿದ್ದೆ ಎಂದು ಪೂರ್ಣಚಂದ್ರ ತೇಜಸ್ವಿ ನೆನಪುಗಳನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

ಪೂರ್ಣಚಂದ್ರ ತೇಜಸ್ವಿ ಫಾರ್ಮ್ ಹೌಸ್​ಗೆ ತುಂಬಾ ಸಲ ಆಹ್ವಾನ ಮಾಡಿದ್ದರು: ನೆನಪು ಹಂಚಿಕೊಂಡ ಸಿದ್ದರಾಮಯ್ಯ
ಪೂರ್ಣಚಂದ್ರ ತೇಜಸ್ವಿ, ಸಿದ್ದರಾಮಯ್ಯ
TV9 Web
| Edited By: |

Updated on: Sep 08, 2021 | 2:41 PM

Share

ಬೆಂಗಳೂರು: ಪೂರ್ಣ ಚಂದ್ರ ತೇಜಸ್ವಿ ನನಗಿಂತ ದೊಡ್ದವರು. ಅವರು ಒಂದು ವಾರಕ್ಕೆ ಒಂದು ಬಾರಿಯಾದ್ರು ಮೈಸೂರಿಗೆ ಬರ್ತಾ ಇದ್ದರು. ಮೈಸೂರಿನಲ್ಲಿ ರಾಮದಾಸ ಅಂತ ಸ್ನೇಹಿತರ ಮನೆಗೆ ಬರ್ತಾ ಇದ್ದರು. ತೇಜಸ್ವಿ ಫಾರ್ಮ್ ಹೌಸ್​ಗೆ ನನ್ನನ್ನು ತುಂಬಾ ಸಲ ಅಹ್ವಾನ ಮಾಡಿದ್ದರು. ಆದರೆ, ಒಮ್ಮೆ ಮಾತ್ರ ಹೋಗಲು ಸಾಧ್ಯವಾಗಿತ್ತು. ನಾನು ಅಲ್ಲೇ ವಾಸ್ತವ್ಯ ಹೂಡಿದ್ದೆ ಎಂದು ಪೂರ್ಣಚಂದ್ರ ತೇಜಸ್ವಿ ನೆನಪುಗಳನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಹುಟ್ಟುಹಬ್ಬ ದಿನವಾದ ಇಂದು (ಸಪ್ಟೆಂಬರ್ 8) ನಡೆದ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ.

ತೇಜಸ್ವಿ ಅವರು ಸಾಹಿತಿ ಅಷ್ಟೇ ಅಲ್ಲ. ಪರಿಸರವಾದಿಯಾಗಿದ್ದರು. ಉತ್ತಮ ಛಾಯಾಚಿತ್ರಗಾರರೂ ಆಗಿದ್ದರು. ಮೀನು ಹಿಡಿಯುವುದು ಅಂದ್ರೆ ತುಂಬ ಇಷ್ಟವಾಗಿತ್ತು ಅವರಿಗೆ. ಗಂಟೆಗಟ್ಟಲೆ ಮೀನು ಹಿಡಿಯಲು ಕುಳಿತಿರುತ್ತಿದ್ದರು. ಒಂದು ಮೀನು ಸಿಕ್ಕರೂ ತುಂಬ ಖುಷಿ‌ ಪಡೋರು. ನಾನು ಬಿಎಸ್ಸಿ ಪದವಿಯಲ್ಲಿ ಸಸ್ಯಶಾಸ್ತ್ರದ ಸ್ಟೂಡೆಂಟ್ ಆಗಿದ್ದೆ. ನಂತರ ನಾನು ಕಾನೂನು ಕಲಿತದ್ದಕ್ಕಾಗಿ ಬಾಟನಿ ಮರೆತು ಹೋಗಿದೆ. ನಾನು ಅದೇ ವಿಷಯದಲ್ಲಿ ಮುಂದುವರೆದಿದ್ದರೇ ಆದರೆ ಉಪನ್ಯಾಸಕನಾಗಿ ಇರುತ್ತಿದೆ. ನಾನು ರಾಜಕಾರಣಕ್ಕೆ ಬಂದಿದ್ದು ಸಹ ಆಕಸ್ಮಿಕ ಎಂದು ಹಳೆಯ ದಿನಗಳನ್ನು ಸಿದ್ದರಾಮಯ್ಯ ನೆನಪಿಸಿಕೊಂಡಿದ್ದಾರೆ.

ಪ್ರೊ. ನಂಜುಂಡಸ್ವಾಮಿ ಪ್ರೇರಣೆಯಿಂದ ರಾಜಕಾರಣಕ್ಕೆ ಬಂದಿದ್ದೆ. ರಾಜಕಾರಣಿಗಳ ಬಗ್ಗೆ ತೇಜಸ್ವಿ ಅವರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ. ನನ್ನ ಬಗ್ಗೆ ವೈಯಕ್ತಿಕವಾಗಿ ಒಳ್ಳೆಯ ಅಭಿಪ್ರಾಯ ಇಟ್ಟುಕೊಂಡಿದ್ದರು. ಮಹಾರಾಜ ಕಾಲೇಜಿನಲ್ಲಿ ಸಂಜೆ ಆಯಿತು ಅಂದ್ರೆ ಎಲ್ಲರೂ ಸೇರಿ ಚರ್ಚೆ ಮಾಡುತ್ತಿದ್ದೆವು. ಬರೀ ರಾಜಕೀಯ ಅಷ್ಟೇ ಅಲ್ಲ. ಬದುಕಿನ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿದ್ದೇವು‌. ಆ ಚರ್ಚೆಗಳು ನನಗೆ ಅನುಕೂಲವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿಗಣತಿಗೆ ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಿರುವ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡಗಡೆಯೇ ಮಾಡಿಲ್ಲ. ಜಾತಿಗಣತಿ ಬಿಡುಗಡೆಯಾಗಿರುವ ಬಗ್ಗೆ ಮಾಹಿತಿ ಇದ್ಯಾ? ನನಗೆ ಗೊತ್ತಿರುವಂತೆ ಜಾತಿಗಣತಿ ಮಾಹಿತಿ ಸೋರಿಕೆ ಆಗಿಲ್ಲ. ಜಾತಿಗಣತಿಯಲ್ಲಿ ಏನಿದೆ ಎಂಬುವುದೇ ಗೊತ್ತಿಲ್ಲ. ವಿರೋಧ ಮಾಡಕ್ಕೆ ಅವರಿಗೇನಾದ್ರೂ ಮಾಹಿತಿ ಗೊತ್ತಿದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.

ಎಲ್ಲ ಸಮುದಾಯಗಳ ಆರ್ಥಿಕ, ಶೈಕ್ಷಣಿಕ ಸ್ಥಿತಿ ತಿಳಿಯಬೇಕು. ಹೀಗಾಗಿ ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ಮಾಡಲಾಗಿದೆ. ಸಾಮಾಜಿಕ ನ್ಯಾಯ ಸಿಗಬೇಕಾದರೆ ದಾಖಲಾತಿಯ ಅಗತ್ಯವಿದೆ. ದಾಖಲಾತಿ ಇಲ್ಲದೆ ಸಾಮಾಜಿಕ ನ್ಯಾಯ ನೀಡಲು ಅಸಾಧ್ಯ. ಆ ಉದ್ದೇಶದಿಂದ ಸಮೀಕ್ಷೆ ಮಾಡಲಾಗಿದೆ. ಜಾತಿಗಣತಿಯಲ್ಲಿ ಯಾವುದೇ ರೀತಿಯ ದುರುದ್ದೇಶ ಇಲ್ಲ. ಇದು ಯಾವ ಜಾತಿ, ಯಾವ ವರ್ಗದ ವಿರುದ್ಧವೂ ನಾವಿಲ್ಲ. ಜಾತಿಗಣತಿ ವರದಿ ಸ್ವೀಕರಿಸಲು ಕುಮಾರಸ್ವಾಮಿ ಒಪ್ಪಲಿಲ್ಲ. ಈಗಲೂ ಜಾತಿಗಣತಿ ವರದಿ ಹಾಗೇಯೆ ಇದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಸದನದಲ್ಲಿ ಜಾತಿಗಣತಿ ವರದಿ ಪ್ರಸ್ತಾಪಿಸುವ ವಿಚಾರವಾಗಿ ಕೇಳಿದಾಗ, ಈ ಬಗ್ಗೆ ನಾನು ಸದ್ಯಕ್ಕೆ ಹೇಳಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಮಂಡಲ ಅಧಿವೇಶನ ಹಿನ್ನೆಲೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್​ಪಿ ಸಭೆ

ಇದನ್ನೂ ಓದಿ: ಅಧಿಕಾರಕ್ಕೆ ಬಂದ ಮೊದಲ ದಿನವೇ ಉಚಿತ ಅಕ್ಕಿ ಘೋಷಿಸಿದ ನಾಯಕ: ಸಿದ್ದರಾಮಯ್ಯಗೆ ಡಿಕೆಶಿ ತಾರೀಪು

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ