AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ರಾಜೀನಾಮೆ ಅಂಗೀಕರಿಸಿದ್ರೆ ನಿಮ್ಮ(ಯಡಿಯೂರಪ್ಪ) ಸಿ.ಡಿ. ರಿಲೀಸ್ ಮಾಡ್ತೀನಿ ಅಂತಿದ್ದಾನಂತೆ: ಇಂಥಾ ಮಾನಗೆಟ್ಟ ಸರ್ಕಾರ ಬೇಕಾ? -ಸಿದ್ದರಾಮಯ್ಯ

Ramesh Jarkiholi CD Controversy: ಆ ಸಚಿವ ರಾಜೀನಾಮೆ ಕೊಟ್ಟಿದ್ದಾನಂತೆ. ಅದರೆ, ಆತನ ಸಹೋದರ ಮುಖ್ಯಮಂತ್ರಿಗಳ ಬಳಿ ನಮ್ಮ ಅಣ್ಣನ ರಾಜೀನಾಮೆ ಪಡೆದುಕೊಂಡ್ರೆ ನಿಮ್ಮ ಸಿಡಿ ರಿಲೀಸ್ ಮಾಡ್ತೀನಿ ಎಂದು ಹೇಳ್ತಾನಂತೆ. ಇಂತಹ ಮಾನಗೆಟ್ಟ ಸರ್ಕಾರ ಬೇಕಾ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಅಣ್ಣನ ರಾಜೀನಾಮೆ ಅಂಗೀಕರಿಸಿದ್ರೆ ನಿಮ್ಮ(ಯಡಿಯೂರಪ್ಪ) ಸಿ.ಡಿ. ರಿಲೀಸ್ ಮಾಡ್ತೀನಿ ಅಂತಿದ್ದಾನಂತೆ: ಇಂಥಾ ಮಾನಗೆಟ್ಟ ಸರ್ಕಾರ ಬೇಕಾ? -ಸಿದ್ದರಾಮಯ್ಯ
ರಮೇಶ್​ ಜಾರಕಿಹೊಳಿ, ಸಿದ್ದರಾಮಯ್ಯ
Skanda
|

Updated on:Mar 03, 2021 | 3:33 PM

Share

ದೇವನಹಳ್ಳಿ: ಅಶ್ಲೀಲ ಸಿ.ಡಿ. ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರವಾಗಿದೆ. ಇದೇ ಸಂದರ್ಭದಲ್ಲಿ ದೇವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಅದನ್ನು (ಸಿ.ಡಿ. ) ನನಗೆ ನೋಡುವುದಕ್ಕೆ ಅಸಹ್ಯವಾಗುತ್ತೆ, ಹೇಳುವುದಕ್ಕೂ ನಾಚಿಕೆಯಾಗುತ್ತೆ. ಈಗ ಆ ಸಚಿವ ರಾಜೀನಾಮೆ ಕೊಟ್ಟಿದ್ದಾನಂತೆ. ಅದರೆ, ಆತನ ಸಹೋದರ ಮುಖ್ಯಮಂತ್ರಿಗಳ ಬಳಿ ನಮ್ಮ ಅಣ್ಣನ ರಾಜೀನಾಮೆ ಪಡೆದುಕೊಂಡ್ರೆ ನಿಮ್ಮ ಸಿ.ಡಿ ರಿಲೀಸ್ ಮಾಡ್ತೀನಿ ಎಂದು ಹೇಳ್ತಾನಂತೆ. ಇಂತಹ ಮಾನಗೆಟ್ಟ ಸರ್ಕಾರ ಬೇಕಾ? ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ ಆಡಳಿತ ಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ, ಅದು ಬಡವರಿಂದ ಸುಲಿಗೆ ಮಾಡುತ್ತೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಬ್ಬರಿಗೂ 10 ಕೆಜಿ ಕೊಡ್ತೀವಿ. ಕಾಂಗ್ರೆಸ್ ಯಾವತ್ತಿಗೂ ಬಡವರ ಪರವಾದ ಪಕ್ಷ. ಆದರೆ, ಬಿಜೆಪಿಯವರಿಗೆ ಲೂಟಿ ಹೊಡೆಯುವುದು ಮಾತ್ರ ಮುಖ್ಯ ಎಂದು ಹರಿಹಾಯ್ದಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಇಬ್ಬರು ಮುಖ್ಯಮಂತ್ರಿಗಳನ್ನಿಟ್ಟುಕೊಂಡು ಸರ್ಕಾರ ನಡೆಸಲಾಗುತ್ತಿದೆ. ಒಬ್ಬ ಯಡಿಯೂರಪ್ಪ, ಮತ್ತೊಬ್ಬ ವಿಜಯೇಂದ್ರ ಎಂದು ಕುಹಕವಾಡಿದ್ದಾರೆ.

ಮೋದಿ, ಅಮಿತ್ ಶಾ ಸರ್ಕಾರವಿರೋದು ಅಂಬಾನಿ, ಅದಾನಿಗೋಸ್ಕರ. ನಾವು ಇವರನ್ನ ಕಿತ್ತೊಗೆಯಲು ಈ ಜಾಥ ಮಾಡುತ್ತಿದ್ದೇವೆ. ಈ ಸರ್ಕಾರ ಇಂದು ರೈತ ವಿರೋಧಿ ಕಾಯ್ದೆಗಳನ್ನು ತಂದಿದೆ. ರೈತರು ವಯ್ಯಸ್ಸಾದ ಹಸು, ಎತ್ತು, ಎಮ್ಮೆಗಳನ್ನಿಟ್ಟುಕೊಂಡು ಏನು ಮಾಡಬೇಕು? ಉಳುಮೆ ಮಾಡಲು ಆಗದವನ್ನ ಕಟ್ಟಿಹಾಕಿಕೊಂಡು ಸಾಕಬೇಕಾ? ಜನರ ಸಮಸ್ಯೆಗಳನ್ನ ಬಗೆಹರಿಸಲು ಜನರಗೋಸ್ಕರ ನಾಡು, ದೇಶ ಉಳಿಸಲು ಕಾಂಗ್ರೆಸ್​ ಅಧಿಕಾರಕ್ಕೆ ಬರಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ; ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪಗೆ ಪತ್ರ ರವಾನೆ

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ರಮೇಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲಿ, ನಾವು ಮೇಟಿಯಿಂದ ರಾಜೀನಾಮೆ ಕೊಡಿಸಿರಲಿಲ್ವಾ? – ಸಿದ್ದರಾಮಯ್ಯ

Published On - 3:14 pm, Wed, 3 March 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್