AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಗೂ ತೈಲ​ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಆ ಮೂಲಕ ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್​. ಅಶೋಕ್​ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ, ಬಿಜೆಪಿ ಸೋತಿದೆ ಎಂದಿದ್ದಾರೆ.

ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jun 16, 2024 | 3:06 PM

Share

ವಿಜಯಪುರ, ಜೂನ್​ 16: ಚುನಾವಣೆಗೂ ತೈಲ​ ದರ ಏರಿಕೆಗೂ (price hike) ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ ಚುನಾವಣೆ ಸಂಬಂಧನಾ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ. ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್​. ಅಶೋಕ್​ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಇದೇ ಕುಮಾರಸ್ವಾಮಿ ಇದ್ದಾಗ ಶೇ.35ರಷ್ಟಿತ್ತು. ರಾಜ್ಯದಲ್ಲಿ 102.86 ಪೈಸೆ ಈಗಾ ಇದೆ. ತಮಿಳುನಾಡು ಸಮ ಆಗಿದೆ. ಕಾಸರಗೋಡು 106.06 ಪೈಸೆ, ಆಂಧ್ರಪ್ರದೇಶದಲ್ಲಿ 109 ರೂ. ಇದೆ. ಹೈದರಾಬಾದ್​ನಲ್ಲೂ ಹೆಚ್ಚಿದೆ. ಮಹಾರಾಷ್ಟ್ರ 104 ರೂ, ರಾಜಸ್ಥಾನ 104.86 ರೂ. ಮಧ್ಯಪ್ರದೇಶದ 106.47 ರೂ. ಇದೆ.

ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ದುಬಾರಿ; ರಾಜ್ಯ ಸರ್ಕಾರದ ನಡೆಗೆ ಸಾರ್ವಜನಿಕರಿಂದ ಆಕ್ರೋಶ

ರಾಜಸ್ಥಾನದಲ್ಲಿ ದರ 104.86 ರೂಪಾಯಿ ಇದೆ. ಮಧ್ಯಪ್ರದೇಶದಲ್ಲಿ 106 ರೂಪಾಯಿ ಇದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಯಾರ ಸರ್ಕಾರ ಇದೆ ಎಂದು ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ, ಬಿಜೆಪಿ ಸೋತಿದೆ

ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು 1 ಸ್ಥಾನ ಗೆದ್ದಿದ್ದೆವು. 2024ರ ಲೋಕಸಭೆ ಚುನಾವಣೆಯಲ್ಲಿ 9 ಸ್ಥಾನ ಗೆದ್ದಿದ್ದೇವೆ. ರಾಜ್ಯದಲ್ಲಿ ಬಿಜೆಪಿಯವರು 25ರಿಂದ 17 ಸ್ಥಾನಕ್ಕೆ ಕುಸಿದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ, ಬಿಜೆಪಿ ಸೋತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ ಭಾಗ್ಯ ಕೊಟ್ಟ ಕಾಂಗ್ರೆಸ್ ಸರ್ಕಾರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ: ಆರ್​ ಅಶೋಕ್​

ಅನುದಾನ ವಿಚಾರದಲ್ಲಿ ಮುದ್ದೇಬಿಹಾಳ ಕ್ಷೇತ್ರದ ಶಾಸಕ ನಾಡಗೌಡ ಮತ್ತು ಜಿಟಿ ಪಾಟೀಲ್ ಮುನಿಸು ವಿಚಾರವಾಗಿ ಮಾತನಾಡಿದ್ದು, ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ನೋಡೋನಾ. ಅನುದಾನ ಎಲ್ಲ ಕೊಟ್ಟಿದ್ದೇವೆ. ಗ್ಯಾರಂಟಿಗಳು ಚುನಾವಣೆಗೋಸ್ಕರ ಮಾಡಿದ್ದಲ್ಲ. ಗ್ಯಾರಂಟಿಗಳನ್ನ ನಾವು ಬಡವರಿಗೋಸ್ಕರ ಮಾಡಿದ್ದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲಾ ಎಂದು ಪುನರುಚ್ಚಾರ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ