ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಗೂ ತೈಲ​ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಆ ಮೂಲಕ ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್​. ಅಶೋಕ್​ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ, ಬಿಜೆಪಿ ಸೋತಿದೆ ಎಂದಿದ್ದಾರೆ.

ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
Edited By:

Updated on: Jun 16, 2024 | 3:06 PM

ವಿಜಯಪುರ, ಜೂನ್​ 16: ಚುನಾವಣೆಗೂ ತೈಲ​ ದರ ಏರಿಕೆಗೂ (price hike) ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ ಚುನಾವಣೆ ಸಂಬಂಧನಾ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ. ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್​. ಅಶೋಕ್​ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಇದೇ ಕುಮಾರಸ್ವಾಮಿ ಇದ್ದಾಗ ಶೇ.35ರಷ್ಟಿತ್ತು. ರಾಜ್ಯದಲ್ಲಿ 102.86 ಪೈಸೆ ಈಗಾ ಇದೆ. ತಮಿಳುನಾಡು ಸಮ ಆಗಿದೆ. ಕಾಸರಗೋಡು 106.06 ಪೈಸೆ, ಆಂಧ್ರಪ್ರದೇಶದಲ್ಲಿ 109 ರೂ. ಇದೆ. ಹೈದರಾಬಾದ್​ನಲ್ಲೂ ಹೆಚ್ಚಿದೆ. ಮಹಾರಾಷ್ಟ್ರ 104 ರೂ, ರಾಜಸ್ಥಾನ 104.86 ರೂ. ಮಧ್ಯಪ್ರದೇಶದ 106.47 ರೂ. ಇದೆ.

ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ದುಬಾರಿ; ರಾಜ್ಯ ಸರ್ಕಾರದ ನಡೆಗೆ ಸಾರ್ವಜನಿಕರಿಂದ ಆಕ್ರೋಶ

ರಾಜಸ್ಥಾನದಲ್ಲಿ ದರ 104.86 ರೂಪಾಯಿ ಇದೆ. ಮಧ್ಯಪ್ರದೇಶದಲ್ಲಿ 106 ರೂಪಾಯಿ ಇದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಯಾರ ಸರ್ಕಾರ ಇದೆ ಎಂದು ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ, ಬಿಜೆಪಿ ಸೋತಿದೆ

ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು 1 ಸ್ಥಾನ ಗೆದ್ದಿದ್ದೆವು. 2024ರ ಲೋಕಸಭೆ ಚುನಾವಣೆಯಲ್ಲಿ 9 ಸ್ಥಾನ ಗೆದ್ದಿದ್ದೇವೆ. ರಾಜ್ಯದಲ್ಲಿ ಬಿಜೆಪಿಯವರು 25ರಿಂದ 17 ಸ್ಥಾನಕ್ಕೆ ಕುಸಿದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ, ಬಿಜೆಪಿ ಸೋತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ ಭಾಗ್ಯ ಕೊಟ್ಟ ಕಾಂಗ್ರೆಸ್ ಸರ್ಕಾರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ: ಆರ್​ ಅಶೋಕ್​

ಅನುದಾನ ವಿಚಾರದಲ್ಲಿ ಮುದ್ದೇಬಿಹಾಳ ಕ್ಷೇತ್ರದ ಶಾಸಕ ನಾಡಗೌಡ ಮತ್ತು ಜಿಟಿ ಪಾಟೀಲ್ ಮುನಿಸು ವಿಚಾರವಾಗಿ ಮಾತನಾಡಿದ್ದು, ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ನೋಡೋನಾ. ಅನುದಾನ ಎಲ್ಲ ಕೊಟ್ಟಿದ್ದೇವೆ. ಗ್ಯಾರಂಟಿಗಳು ಚುನಾವಣೆಗೋಸ್ಕರ ಮಾಡಿದ್ದಲ್ಲ. ಗ್ಯಾರಂಟಿಗಳನ್ನ ನಾವು ಬಡವರಿಗೋಸ್ಕರ ಮಾಡಿದ್ದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲಾ ಎಂದು ಪುನರುಚ್ಚಾರ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us