AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮ ಗಾಂಧೀಜಿ ಯಾರ ವಿರುದ್ಧ ಹೋರಾಡಿದರೋ ಅವರಿಂದ ಹತ್ಯೆ ಆಗಲಿಲ್ಲ -ಸಿದ್ದರಾಮಯ್ಯ ಮಾರ್ಮಿಕ ನುಡಿ

ರೈತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ರೈತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, RSSನ ಒಬ್ಬರಾದ್ರೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಮಹಾತ್ಮ ಗಾಂಧೀಜಿ ಯಾರ ವಿರುದ್ಧ ಹೋರಾಡಿದರೋ ಅವರಿಂದ ಹತ್ಯೆ ಆಗಲಿಲ್ಲ -ಸಿದ್ದರಾಮಯ್ಯ ಮಾರ್ಮಿಕ ನುಡಿ
ವಿಪಕ್ಷ ನಾಯಕ ಸಿದ್ದರಾಮಯ್ಯ
ಆಯೇಷಾ ಬಾನು
| Edited By: |

Updated on: Jan 30, 2021 | 2:30 PM

Share

ಬೆಂಗಳೂರು: ಇಂದು ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕರಾಳ ದಿನಾಚರಣೆ ಮಾಡಲಾಗುತ್ತಿದೆ. ರೈತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ರೈತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, RSSನ ಒಬ್ಬರಾದ್ರೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಮಾತು ಮುಂದುವರೆಸಿದ ಸಿದ್ದರಾಮಯ್ಯ, ಮಹಾತ್ಮ ಗಾಂಧೀಜಿ ಯಾರ ವಿರುದ್ಧ ಹೋರಾಡಿದ್ರೋ ಅವರಿಂದ ಹತ್ಯೆ ಆಗಲಿಲ್ಲ. ಜನರ ಮಧ್ಯೆ ಬಂದು ಗೋಡ್ಸೆ ಗುಂಡು ಹಾರಿಸಿ ಹತ್ಯೆಗೈದ. ಗಾಂಧೀಜಿಯವರು ಬರೀ ಸ್ವಾತಂತ್ರ್ಯ ಚಳವಳಿ ಮಾಡಲಿಲ್ಲ. ರೈತ ಹೋರಾಟ, ಕಾರ್ಮಿಕ ಹೋರಾಟ ಎಲ್ಲ ಮಾಡಿದರು. ಸ್ವಾತಂತ್ರ್ಯ ಹೋರಾಟದಷ್ಟೆ ಬೇರೆ ಬೇರೆ ಹೋರಾಟಗಳಿಗೂ ಪ್ರಾಮುಖ್ಯತೆಯನ್ನು ನೀಡಿದ್ರು. ತಮ್ಮ ಹತ್ಯೆಗೂ ಮುನ್ನವೂ ಉಪವಾಸ ಸತ್ಯಾಗ್ರಹ ಮಾಡಿದ್ರು.

ಜನವರಿ 30, 1948 ರಂದು ದೆಹಲಿಯ ಬಿರ್ಲಾ ಭವನದಲ್ಲಿ ವಲ್ಲಭಭಾಯಿ ಪಟೇಲ್ ಮಾತನಾಡಲು ಬಂದಿದ್ರು. ಈ ವೇಳೆ ಮಾತುಕತೆ ವಿಳಂಬವಾಗಿ5.15 ಕ್ಕೆ ಮುಕ್ತಾಯವಾಯ್ತು. ಗಾಂಧಿ ಮೊಮ್ಮಕ್ಕಳ ಹೆಗಲ ಮೇಲೆ ಕೈಹಾಕೊಂಡು ಹೋಗ್ತಿದ್ರು. ಈ ವೇಳೆ ನಾಥೂರಾಮ್ ಗೋಡ್ಸೆ ನಮಸ್ಕಾರ ಮಾಡುವಂತೆ ಬಂದು ಮೂರು ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿದ. ಗಾಂಧೀ ರಾಂ ರಾಂ ಅಂತ ಪ್ರಾಣ ಬಿಟ್ರು. ಎಲ್ಲಾ ಧರ್ಮದವರು ಒಂದು ತಾಯಿ ಮಕ್ಕಳಂತೆ ಬದುಕಬೇಕೆಂದು ಹೋರಾಡಿದವ್ರು ಗಾಂಧೀ. ಜೀವನದುದ್ದಕ್ಕೂ ಅದನ್ನೇ ಮಾಡಿದ್ರು. ಉಪವಾಸ ಗಾಂಧೀಜಿಯ ಪ್ರಬಲವಾದ ಅಸ್ತ್ರ ಎಂದು ಗಾಂಧೀಜಿಯವರನ್ನು ಸಿದ್ದರಾಮಯ್ಯ ಸ್ಮರಿಸಿಕೊಂಡ್ರು.

RSSನ ಒಬ್ಬರಾದ್ರೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರಾ? ಗಾಂಧೀಜಿ ಹತ್ಯೆ ಮಾಡುವುದಕ್ಕೆ 2 ಸಭೆ ನಡೆದಿರುತ್ತೆ. ಸಾವರ್ಕರ್ ಮನೆಯಲ್ಲಿ ಎರಡು ಬಾರಿ ಸಭೆ ಮಾಡಿದ್ದರು. ದೇಶಭಕ್ತರನ್ನ ಕೊಂದವರೇ ದೇಶಭಕ್ತಿಯ ಬಗ್ಗೆ ಮಾತಾಡ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. RSSನ ಒಬ್ಬರಾದ್ರೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರಾ? ಸಂವಿಧಾನ ರಚನೆಯಾದ ಬಳಿಕ ಜನಸಂಘ ಹುಟ್ಟಿಕೊಂಡಿದ್ದು ಇವರು ಈಗ ದೇಶ ಭಕ್ತಿಯ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ.

ಹಿಂದೂ ರಾಷ್ಟ್ರ ಮಾಡ್ತೀವಿ, ಹಿಂದುತ್ವ ಮಾಡ್ತೀವಿ ಅಂತಾರೆ. ಇದನ್ನ ಮಾಡೋಕಾಗಲ್ಲ ಅನ್ನೋದನ್ನೇ ಗಾಂಧೀಜಿ ಹೇಳಿದ್ದು. ಗಾಂಧೀಜಿ ಹಿಂದೂ ಅಂದಿದ್ದರು, ಸನಾತನ ಅಂದಿದ್ದರು. ನಾವು ಫಾಲೋ ಮಾಡೋದು ಗಾಂಧೀಜಿಯ ಹಿಂದುತ್ವ. ಆದರೆ ಇವರದ್ದು ಸಾವರ್ಕರ್ ಹಿಂದುತ್ವ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಹಿಂದೂ ಅಲ್ವಾ? ಕೋಡಿಹಳ್ಳಿ ಹಿಂದೂ ಅಲ್ವಾ? ಪಾಕ್ ವಿಭಜಿಸದಂತೆ ಗಾಂಧೀಜಿ ಹೋರಾಟ ಮಾಡಿದ್ದರು. ಆದರೆ ಮೌಂಟ್ ಬ್ಯಾಟನ್, ಜಿನ್ನಾನನ್ನ ಎತ್ತಿಕಟ್ಟಿ ವಿಭಜನೆ ಮಾಡಿದ್ರು ಎಂದು ಸಿದ್ದರಾಮಯ್ಯ ಭಾಷಣದ ವೇಳೆ ಹೇಳಿದ್ರು.

RSSನವರು ಗೋವುಗಳ ಬಗ್ಗೆ ಮಾತಾಡ್ತಾರಲ್ಲಾ.. ಯಾವತ್ತಾದ್ರೂ ಅವರು ಸಗಣಿ, ಗಂಜಲ ಎತ್ತಿದ್ದಾರಾ? -ಸಿದ್ದರಾಮಯ್ಯ ಪ್ರಶ್ನೆ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ