AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪ್ರಯಾಣಿಸುವ ವಿಮಾನಕ್ಕೆ ಕ್ಲಿಯರನ್ಸ್ ಸಿಗದೆ ಪರದಾಟ, ಸಿದ್ದರಾಮಯ್ಯ ಕಾರು‌ ಚಲಾಯಿಸಲು ಹೋಗಿ ಪೇಚಿಗೆ ಸಿಲುಕಿದ ಶಾಸಕ

ಬಸಾಪೂರದ ಖಾಸಗಿ ವಿಮಾನ ನಿಲ್ದಾಣಕ್ಕೆ ಸ್ಪೇಶಲ್ ಫ್ಲೈಟ್ ಆಗಮಿಸಬೇಕಿದೆ. ಅದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನೆಲೆ ಫ್ಲೈಟ್ ಜಿಂದಾಲ್ ಏರಪೋರ್ಟ್ನಲ್ಲೇ ಇದೆ. ಸಿಗ್ನಲ್ ಕ್ಲಿಯರನ್ಸ್ ಗಾಗಿ ಶಾಸಕರ ರಾಘವೇಂದ್ರ ಹಿಟ್ನಾಳ್, ಈ ತುಕಾರಾಂ ಕಾಯುತ್ತಿದ್ದಾರೆ.

ಸಿದ್ದರಾಮಯ್ಯ ಪ್ರಯಾಣಿಸುವ ವಿಮಾನಕ್ಕೆ ಕ್ಲಿಯರನ್ಸ್ ಸಿಗದೆ ಪರದಾಟ, ಸಿದ್ದರಾಮಯ್ಯ ಕಾರು‌ ಚಲಾಯಿಸಲು ಹೋಗಿ ಪೇಚಿಗೆ ಸಿಲುಕಿದ ಶಾಸಕ
ಸ್ಪೇಶಲ್ ಫ್ಲೈಟ್​ಗಾಗಿ ಕಾಯುತ್ತಿರುವ ಶಾಸಕರು
TV9 Web
| Edited By: |

Updated on:May 20, 2022 | 7:50 PM

Share

ಕೊಪ್ಪಳ: ಸಿದ್ದರಾಮಯ್ಯ ಪ್ರಯಾಣಿಸುವ ಸ್ಪೇಶಲ್ ಫ್ಲೈಟ್ಗೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನಲೆ ಸಿದ್ದರಾಮಯ್ಯ ಇನ್ನೂ ಕೂಡ ಕೊಪ್ಪಳಕ್ಕೆ ಆಗಮಿಸಿಲ್ಲ. ಬಸಾಪೂರದ ಖಾಸಗಿ ವಿಮಾನ ನಿಲ್ದಾಣಕ್ಕೆ ಸ್ಪೇಶಲ್ ಫ್ಲೈಟ್ ಆಗಮಿಸಬೇಕಿದೆ. ಅದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನೆಲೆ ಫ್ಲೈಟ್ ಜಿಂದಾಲ್ ಏರಪೋರ್ಟ್ನಲ್ಲೇ ಇದೆ. ಸಿಗ್ನಲ್ ಕ್ಲಿಯರನ್ಸ್ ಗಾಗಿ ಶಾಸಕ ರಾಘವೇಂದ್ರ ಹಿಟ್ನಾಳ್, ಈ ತುಕಾರಾಂ ಕಾಯುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅರ್ಜೆಂಟ್ ಆಗಿ ಬೆಂಗಳೂರಿಗೆ ಹೋಗಬೇಕಾಗಿತ್ತು. ಹಾಗಾಗಿ special flight ಕೊಪ್ಪಳಕ್ಕೆ ಬರಬೇಕಿತ್ತು. ಜಿಂದಾಲ್ ಏರಪೋರ್ಟ್ ನಿಂದ ಕೊಪ್ಪಳ ಬಸಾಪೂರ ವಿಮಾನ ನಿಲ್ದಾಣಕ್ಕೆ special flight ಬರಬೇಕಿತ್ತು. ಆದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಕಾರಣ ಫ್ಲೈಟ್ ರದ್ದು ಮಾಡಲಾಗಿದೆ. ಕೊನೆಗೆ ಜಿಂದಾಲ್ ಏರ್ಪೋರ್ಟ್​ಗೆ ಸಿದ್ದರಾಮಯ್ಯ ಹೊರಟಿದ್ದು ಬಳ್ಳಾರಿ ಜಿಲ್ಲೆ ಜಿಂದಾಲ್​ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತ ಸಿದ್ದರಾಮಯ್ಯ ಹೊರಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ನು ಮತ್ತೊಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದ ಕಾರು‌ ಚಲಾಯಿಸಲು ಹೋಗಿ ಶಾಸಕ ಬಸನಗೌಡ ದದ್ದಲ್ ಪೇಚೆಗೆ ಸಿಲುಕಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನಹೆಡಗಿ ಬ್ರಿಜ್ ಬಳಿ ಕಾರು ಚಾಲಕನನ್ನ ಕೆಳಗೆ ಇಳಿಸಿ ಕಾರು ಚಲಾಯಿಸಲು ಶಾಸಕ ಬಸನಗೌಡ ದದ್ದಲ್ ಮುಂದಾಗಿದ್ದರು. ಆದ್ರೆ ಕಾರ್ ಚಲಾಯಿಸುವಾಗ ಕಾರಿನ ಗೇರ್ ಹಾಕುವುದು ತಿಳಿಯದೆ ಕಾರಿನಿಂದ ಕೆಳಗಿಳಿದಿದ್ದಾರೆ. ನಂತರ ಕಾರ್ ಚಾಲಕನೇ ಕಾರ್ ಚಲಾಯಿಸಿದ್ರು.

Published On - 6:26 pm, Fri, 20 May 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!