ಸಿಎಂ ಭಾಷಣದ ವೇಳೆ ಅಜಾನ್: ಮಾತು ಅರ್ಧಕ್ಕೆ ನಿಲ್ಲಿಸಿ ಸೈಲೆಂಟ್ ಆಗಿ ನಿಂತ ಸಿದ್ದರಾಮಯ್ಯ, ವಿಡಿಯೋ ಇಲ್ಲಿದೆ

​ಆಜಾನ್ ಕೂಗುತ್ತಿರುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಮೌನವಾಗಿ ನಿಂತಿರುವ ಪ್ರಸಂಗ ಜರುಗಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಬಳಿಕ ಭಾಷಣ ಆರಂಭಿಸುತ್ತಿದ್ದಂತೆಯೇ ​ಆಜಾನ್ ಶುರುವಾಗಿದೆ. ಕೂಡಲೇ ಸಿಎಂ ಮಾತು ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ.

ಸಿಎಂ ಭಾಷಣದ ವೇಳೆ ಅಜಾನ್: ಮಾತು ಅರ್ಧಕ್ಕೆ ನಿಲ್ಲಿಸಿ ಸೈಲೆಂಟ್ ಆಗಿ ನಿಂತ ಸಿದ್ದರಾಮಯ್ಯ, ವಿಡಿಯೋ ಇಲ್ಲಿದೆ
|

Updated on:Sep 02, 2024 | 7:41 PM

ಬೆಂಗಳೂರು, (ಸೆಪ್ಟೆಂಬರ್ 02): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಇಂದು (ಸೆಪ್ಟೆಂಬರ್ 02) ಬೆಂಗಳೂರಿನ ಶಿವಾಜಿನಗರದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟಿಸಿದರು. ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ 130 ಹಾಸಿಗೆಗಳುಳ್ಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಇದನ್ನು ಇಂದು ಅಧಿಕೃತವಾಗಿ ಸಿಎಂ, ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಸೇರಿಕೊಂಡು ಉದ್ಘಾಟಿಸಿದರು. ಬಳಿಕ ಸಿಎಂ ಭಾಷಣ ಆರಂಭಿಸಿದರು. ಆದ್ರೆ, ಮತ್ತೊಂದೆಡೆ ​ಆಜಾನ್ ಶುರುವಾಗಿದೆ. ಆಜಾನ್ ಕೂಗು ಕೇಳಿಸಿದ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತರುವ ಪ್ರಸಂಗ ನಡೆದಿದೆ. ​ಆಜಾನ್​ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ನಂತರ ​ಆಜಾನ್ ಮುಗಿದ ಬಳಿಕ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಮುಂದುವರಿಸಿದರು. ಇನ್ನು ​ಆಜಾನ್​ ವೇಳೆ ಸಿಎಂ ಭಾಷಣ ನಿಲ್ಲಿಸಿರುವ ವಿಡಿಯೋ ಇಲ್ಲಿದೆ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Mon, 2 September 24

Follow us