ಸಿಎಂ ಭಾಷಣದ ವೇಳೆ ಅಜಾನ್: ಮಾತು ಅರ್ಧಕ್ಕೆ ನಿಲ್ಲಿಸಿ ಸೈಲೆಂಟ್ ಆಗಿ ನಿಂತ ಸಿದ್ದರಾಮಯ್ಯ, ವಿಡಿಯೋ ಇಲ್ಲಿದೆ
ಆಜಾನ್ ಕೂಗುತ್ತಿರುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಮೌನವಾಗಿ ನಿಂತಿರುವ ಪ್ರಸಂಗ ಜರುಗಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಬಳಿಕ ಭಾಷಣ ಆರಂಭಿಸುತ್ತಿದ್ದಂತೆಯೇ ಆಜಾನ್ ಶುರುವಾಗಿದೆ. ಕೂಡಲೇ ಸಿಎಂ ಮಾತು ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 02): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಇಂದು (ಸೆಪ್ಟೆಂಬರ್ 02) ಬೆಂಗಳೂರಿನ ಶಿವಾಜಿನಗರದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟಿಸಿದರು. ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ 130 ಹಾಸಿಗೆಗಳುಳ್ಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಇದನ್ನು ಇಂದು ಅಧಿಕೃತವಾಗಿ ಸಿಎಂ, ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಸೇರಿಕೊಂಡು ಉದ್ಘಾಟಿಸಿದರು. ಬಳಿಕ ಸಿಎಂ ಭಾಷಣ ಆರಂಭಿಸಿದರು. ಆದ್ರೆ, ಮತ್ತೊಂದೆಡೆ ಆಜಾನ್ ಶುರುವಾಗಿದೆ. ಆಜಾನ್ ಕೂಗು ಕೇಳಿಸಿದ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತರುವ ಪ್ರಸಂಗ ನಡೆದಿದೆ. ಆಜಾನ್ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ನಂತರ ಆಜಾನ್ ಮುಗಿದ ಬಳಿಕ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಮುಂದುವರಿಸಿದರು. ಇನ್ನು ಆಜಾನ್ ವೇಳೆ ಸಿಎಂ ಭಾಷಣ ನಿಲ್ಲಿಸಿರುವ ವಿಡಿಯೋ ಇಲ್ಲಿದೆ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 02, 2024 07:35 PM
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ

