AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಸಿದ್ದರಾಮಯ್ಯ ಬೆಂಬಲ

ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ ಎಂದಿದ್ದಾರೆ ಸಿದ್ದರಾಮಯ್ಯ.

ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಸಿದ್ದರಾಮಯ್ಯ ಬೆಂಬಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 17, 2021 | 6:36 PM

Share

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಧರಣಿ 57ನೇ ದಿನಕ್ಕೆ ಕಾಲಿಟ್ಟಿದೆ. ಕೆಲಸ ಕೊಡಿ ಇಲ್ಲವೇ ಭೂಮಿ ವಾಪಸ್‌ ಕೊಡಿ ಎಂದು ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸುತ್ತಿದ್ದು ಈ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆ.

ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ. ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ವಿಶ್ವಾಸವಿದೆ. ಉದ್ಯೋಗ ಕೊಡದಿದ್ದರೆ ನಾನು ಮಧ್ಯಪ್ರವೇಶ ಮಾಡುತ್ತೇನೆ. ನಿಮ್ಮ ಹೋರಾಟದಲ್ಲಿ ನಾನೂ ಭಾಗಿಯಾಗುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು

Published On - 6:27 pm, Sun, 17 January 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ