AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್‌ ಶಿಕ್ಷಣ ರದ್ದು Ok, ಹಾಗೆಯೇ PUC ವರೆಗೂ ಆನ್‌ಲೈನ್ ರದ್ದಾಗಬೇಕು: ಸಿದ್ದರಾಮಯ್ಯ

ಮೈಸೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೊರೊನಾ ಕಾಟದಿಂದಾಗಿ 5ನೇ ತರಗತಿಯವರೆಗೆ ಆನ್‌ಲೈನ್‌ ಶಿಕ್ಷಣ ರದ್ದು ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದು, ಅದೇ ರೀತಿಯಲ್ಲಿ ರಾಜ್ಯದಲ್ಲಿ ಪಿಯುಸಿವರೆಗೂ ಆನ್‌ಲೈನ್ ಕ್ಲಾಸ್ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಈ ನಿಲುವು ಸರಿಯಾಗಿದೆ. ಇದೇ ವೇಳೆ ನನ್ನ ಪ್ರಕಾರ ಪಿಯುವರೆಗೂ ಆನ್‌ಲೈನ್ ಶಿಕ್ಷಣ ರದ್ದಾಗಬೇಕು. ನಾನು ಮೊದಲಿನಿಂದಲೂ ಆನ್‌ಲೈನ್ ಶಿಕ್ಷಣ […]

ಆನ್‌ಲೈನ್‌ ಶಿಕ್ಷಣ ರದ್ದು Ok, ಹಾಗೆಯೇ PUC ವರೆಗೂ ಆನ್‌ಲೈನ್ ರದ್ದಾಗಬೇಕು: ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Feb 13, 2021 | 9:20 AM

Share

ಮೈಸೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೊರೊನಾ ಕಾಟದಿಂದಾಗಿ 5ನೇ ತರಗತಿಯವರೆಗೆ ಆನ್‌ಲೈನ್‌ ಶಿಕ್ಷಣ ರದ್ದು ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದು, ಅದೇ ರೀತಿಯಲ್ಲಿ ರಾಜ್ಯದಲ್ಲಿ ಪಿಯುಸಿವರೆಗೂ ಆನ್‌ಲೈನ್ ಕ್ಲಾಸ್ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಈ ನಿಲುವು ಸರಿಯಾಗಿದೆ. ಇದೇ ವೇಳೆ ನನ್ನ ಪ್ರಕಾರ ಪಿಯುವರೆಗೂ ಆನ್‌ಲೈನ್ ಶಿಕ್ಷಣ ರದ್ದಾಗಬೇಕು. ನಾನು ಮೊದಲಿನಿಂದಲೂ ಆನ್‌ಲೈನ್ ಶಿಕ್ಷಣ ಪದ್ದತಿಯನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಮಕ್ಕಳಿಗೆ ಶಾಲೆಯಲ್ಲಿಯೇ ಪಾಠ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಶಾಲೆಗಳ ಶುಲ್ಕವನ್ನು ಕಡಿಮೆ ಮಾಡುವ ವಿಚಾರದಲ್ಲಿ ಆ ಬಗ್ಗೆ ಸರ್ಕಾರವೇ ಯೋಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದೂ ಅವರು ಪ್ರತಿಕ್ರಿಯಿಸಿದ್ದಾರೆ.

Published On - 10:43 am, Thu, 11 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು